ಹಾಸನ: ಸರ್ಕಾರದ ಬೆಂಬಲ ಬೆಲೆಯೊಂದಿಗೆ ರಾಗಿ, ಭತ್ತ ಜೋಳ ಖರೀದಿಗೆ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಅಗತ್ಯವರುವ ಕಡೆಗಳಲ್ಲಿ ಹೆಚ್ಚಿನ ಖರೀದಿ ಕೇಂದ್ರಗಳನ್ನು ತೆರದು ಈ ಬಗ್ಗೆ ಪ್ರಚಾರಗೊಳಿಸುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅನಿಲ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಖರೀದಿ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಎಲ್ಲಾ ಜಿಲ್ಲೆಗಳಲ್ಲಿ ನಿಗದಿತ ಗುರಿಗಳನ್ನೂ ಆದಷ್ಟು ಬೇಗ ಸಂಪೂರ್ಣಗೊಳಿಸಿ ಹಾಗೂ ಎಲ್ಲಾ ಕಡೆಗಳಲ್ಲಿ ಇನ್ನು ಹೆಚ್ಚಿನ ಪ್ರಚಾರ ಪಡಿಸಿ ಎಂದು ಅವರು ಹೇಳಿದರು.

ಪಡಿತರ ವ್ಯವಸ್ಥೆಗಳಲ್ಲಿ ಅಕ್ಕಿ, ಗೋಧಿ, ಆಹಾರ ಧಾನ್ಯಗಳು ದುರುಪಯೋಗವಾಗುತ್ತಿರುವುದು ಕೇಳಿ ಬರುತ್ತಿದ್ದು ಅದರ ಬಗ್ಗೆ ಹೆಚ್ಚಿನ ನಿಗಾವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

ಜಿಲ್ಲೆಗಳಲ್ಲಿ ಆಹಾರ ಪದಾರ್ಥಗಳನ್ನ ಖರೀದಿ ಮಾಡುವ ಗೋದಾಮುಗಳು ರೈತರಿಗೆ ಹತ್ತಿರವಾಗುವಂತಿರಲಿ. ಅಧಿಕಾರಿಗಳ ಜೊತೆ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ನಡೆಸಿ ನಿಮ್ಮ ಗುರಿಗಳನ್ನು ಸಾಧಿಸಿ ಎಂದು ಸಲಹೆ ನೀಡಿದರು.

ಸೀಮೆಎಣ್ಣೆ ಅಡಿಗೆ ಉದ್ದೇಶ ಬಳಸುವುವವರನ್ನು ಕಡಿಮೆ ಮಾಡಿ ಅವರಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅನಿಲ ಭಾಗ್ಯ ಕಲ್ಪಿಸಿಕೊಡಿ. ಪಡಿತರ ಅಂಗಡಿಗಳಲ್ಲಿ ಸರಿಯಾದ ಸಮಯಕ್ಕೆ ಜನರಿಗೆ ಆಹಾರ ಧಾನ್ಯಗಳನ್ನು ವಿತರಿಸಬೇಕು ಮರಣ ಹೊಂದಿದ ಕರ್ಡ್ದಾರರ ಹೆಸರನ್ನು ಬಿಪಿಎಲ್ ಪಟ್ಟಿಯಿಂದ ಕೈಬಿಡಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಮಾತನಾಡಿ, ಜಿಲ್ಲೆಗೆ 7 ಲಕ್ಷ ಗುರಿಯನ್ನು ಹೊಂದಿದ್ದು, ನಮಗೆ ಮಾ.30ರ ಒಳಗೆ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಹಾಗೂ ಕೊನೆಯ ದಿನದವರೆಗೆ, ರಾಗಿ, ಭತ್ತ ಖರೀದಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಆಹಾರ ಮತ್ತು ನಾಗರೀಕ ಸರಬರಾಜು ಉಪ ನಿರ್ದೇಶಕ ಪುಟ್ಟಸ್ವಾಮಿ, ಕೃಷಿ ಇಲಾಖೆ ಉಪ ನಿರ್ದೇಶಕ ಕೋಕಿಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಉಪ ನಿರ್ದೇಶ ದಿಲೀಪ್, ರಾಜ್ಯ ಸಹಕಾರ ಮಹಾ ಮಂಡಳಿ ಶಾಖಾ ವ್ಯಸ್ಥಾಪಕ ರಂಗಸ್ವಾಮಿ, ಹಾಗೂ ಚನ್ನರಾಯಪಟ್ಟಣ ಶಾಖಾ ವ್ಯಸ್ಥಾಪಕ ಚೇತನ್ ಮುಂತಾದವರಿದ್ದರು.

Leave a Reply

Your email address will not be published. Required fields are marked *

You May Also Like

ಸೋಕ್ ಪಿಟ್ ಕಾಮಗಾರಿ ಶೀಘ್ರ ಯಶಸ್ವಿಗೊಳಿಸಿ

ಸೋಕ್ ಪಿಟ್ ಮತ್ತು ಪೌಷ್ಟಿಕ ತೋಟ ನಿರ್ಮಾಣ ಗುರಿಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ನರೇಗಾ ಸಿಬ್ಬಂದಿ ಶೀಘ್ರದಲ್ಲೇ ತಲುಪಲು ಪ್ರಯತ್ನಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಬಿ.ಕಲ್ಲೇಶ ಅವರು ಹೇಳಿದರು.

ಕಿಯೋನಿಕ್ಸ್ ಅಧ್ಯಕ್ಷರಾಗಿ ಬಿಜೆಪಿ ನಾಯಕ ಹರಿಕೃಷ್ಣ ಬಂಟ್ವಾಳ್ ಆಯ್ಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರಿಗೆ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್…

ನಮ್ಮ ಸಂಸ್ಕೃತಿ ಅನುಸರಿಸಿ : ಪ್ರಹ್ಲಾದ ಹೊಸಳ್ಳಿ

ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೆ ದೇಶದ ಧರ್ಮ, ಸಂಸ್ಕೃತಿಯನ್ನು ಅನುಸರಿಸಿ, ಯುವ ಜನತೆ ಒಕ್ಕಟ್ಟಿನಿಂದ ಸಮಾಜಕ್ಕೆ ಗೌರವ ತರುವಂತಹ ಕಾರ್ಯಚಟುವಟಿಕೆಗಳನ್ನು ಮಾಡಬೇಕೆಂದು ತಾಲೂಕ ಪಂಚಾಯತ ಮಾಜಿ ಸದಸ್ಯ ಪ್ರಹ್ಲಾದ ಹೊಸಳ್ಳಿ ಹೇಳಿದರು.

ರೋಣದಲ್ಲಿ ಹೋರಾಟದ ವೇಳೆ ಹೆಜ್ಜೇನು ದಾಳಿ

ಆಸರೆ ಮನೆಗಳ ಹಕ್ಕು ಪತ್ರಕ್ಕಾಗಿ ಹೋರಾಟ ಮಾಡುತ್ತಿರುವ ವೇಳೆ ಹೆಜ್ಜೇನು ಹುಳುಗಳ ದಾಳಿ ಮಾಡಿದ ಘಟನೆ ನಡೆದಿದೆ.