ಹಾಸನ: ಸರ್ಕಾರದ ಬೆಂಬಲ ಬೆಲೆಯೊಂದಿಗೆ ರಾಗಿ, ಭತ್ತ ಜೋಳ ಖರೀದಿಗೆ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಅಗತ್ಯವರುವ ಕಡೆಗಳಲ್ಲಿ ಹೆಚ್ಚಿನ ಖರೀದಿ ಕೇಂದ್ರಗಳನ್ನು ತೆರದು ಈ ಬಗ್ಗೆ ಪ್ರಚಾರಗೊಳಿಸುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅನಿಲ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಖರೀದಿ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಎಲ್ಲಾ ಜಿಲ್ಲೆಗಳಲ್ಲಿ ನಿಗದಿತ ಗುರಿಗಳನ್ನೂ ಆದಷ್ಟು ಬೇಗ ಸಂಪೂರ್ಣಗೊಳಿಸಿ ಹಾಗೂ ಎಲ್ಲಾ ಕಡೆಗಳಲ್ಲಿ ಇನ್ನು ಹೆಚ್ಚಿನ ಪ್ರಚಾರ ಪಡಿಸಿ ಎಂದು ಅವರು ಹೇಳಿದರು.

ಪಡಿತರ ವ್ಯವಸ್ಥೆಗಳಲ್ಲಿ ಅಕ್ಕಿ, ಗೋಧಿ, ಆಹಾರ ಧಾನ್ಯಗಳು ದುರುಪಯೋಗವಾಗುತ್ತಿರುವುದು ಕೇಳಿ ಬರುತ್ತಿದ್ದು ಅದರ ಬಗ್ಗೆ ಹೆಚ್ಚಿನ ನಿಗಾವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

ಜಿಲ್ಲೆಗಳಲ್ಲಿ ಆಹಾರ ಪದಾರ್ಥಗಳನ್ನ ಖರೀದಿ ಮಾಡುವ ಗೋದಾಮುಗಳು ರೈತರಿಗೆ ಹತ್ತಿರವಾಗುವಂತಿರಲಿ. ಅಧಿಕಾರಿಗಳ ಜೊತೆ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ನಡೆಸಿ ನಿಮ್ಮ ಗುರಿಗಳನ್ನು ಸಾಧಿಸಿ ಎಂದು ಸಲಹೆ ನೀಡಿದರು.

ಸೀಮೆಎಣ್ಣೆ ಅಡಿಗೆ ಉದ್ದೇಶ ಬಳಸುವುವವರನ್ನು ಕಡಿಮೆ ಮಾಡಿ ಅವರಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅನಿಲ ಭಾಗ್ಯ ಕಲ್ಪಿಸಿಕೊಡಿ. ಪಡಿತರ ಅಂಗಡಿಗಳಲ್ಲಿ ಸರಿಯಾದ ಸಮಯಕ್ಕೆ ಜನರಿಗೆ ಆಹಾರ ಧಾನ್ಯಗಳನ್ನು ವಿತರಿಸಬೇಕು ಮರಣ ಹೊಂದಿದ ಕರ್ಡ್ದಾರರ ಹೆಸರನ್ನು ಬಿಪಿಎಲ್ ಪಟ್ಟಿಯಿಂದ ಕೈಬಿಡಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಮಾತನಾಡಿ, ಜಿಲ್ಲೆಗೆ 7 ಲಕ್ಷ ಗುರಿಯನ್ನು ಹೊಂದಿದ್ದು, ನಮಗೆ ಮಾ.30ರ ಒಳಗೆ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಹಾಗೂ ಕೊನೆಯ ದಿನದವರೆಗೆ, ರಾಗಿ, ಭತ್ತ ಖರೀದಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಆಹಾರ ಮತ್ತು ನಾಗರೀಕ ಸರಬರಾಜು ಉಪ ನಿರ್ದೇಶಕ ಪುಟ್ಟಸ್ವಾಮಿ, ಕೃಷಿ ಇಲಾಖೆ ಉಪ ನಿರ್ದೇಶಕ ಕೋಕಿಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಉಪ ನಿರ್ದೇಶ ದಿಲೀಪ್, ರಾಜ್ಯ ಸಹಕಾರ ಮಹಾ ಮಂಡಳಿ ಶಾಖಾ ವ್ಯಸ್ಥಾಪಕ ರಂಗಸ್ವಾಮಿ, ಹಾಗೂ ಚನ್ನರಾಯಪಟ್ಟಣ ಶಾಖಾ ವ್ಯಸ್ಥಾಪಕ ಚೇತನ್ ಮುಂತಾದವರಿದ್ದರು.

Leave a Reply

Your email address will not be published. Required fields are marked *

You May Also Like

ಅಮೇರಿಕ ಶ್ವೇತ ಭವನಕ್ಕೂ ಎಂಟ್ರಿ ಕೊಟ್ಟ ಸೋಂಕು!

ಅಮೇರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರ ಮಾಧ್ಯಮ ಕಾರ್ಯದರ್ಶಿಗೆ ಕೊರೋನಾ ವೈರಸ್ ತಗಲಿದೆ. ಶ್ವೇತ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕು ತಗಲಿಸಿಕೊಂಡಿರುವ ಎರಡನೇ ವ್ಯಕ್ತಿ ಇವರಾಗಿದ್ದಾರೆ.

ಸಾವನ್ನು ಗೆದ್ದು ಬಂದ 8 ತಿಂಗಳ ಮಗು

ಪಾಸಿಟೀವ್ ಒಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ತಿಂಗಳ ಹೆಣ್ಣು ಮಗು ಗುಣಮುಖವಾಗಿದ್ದು ಸಾವನ್ನೆ ಗೆದ್ದು ಬಂದಿದೆ.

ಹೆಲ್ತ್ ರಿಜಿಸ್ಟರ್ ಗೆ ಸರ್ಕಾರದ ಮುನ್ನುಡಿ: ತಜ್ಞರ ಜತೆ ಸಚಿವ ಸುಧಾಕರ್ ಸಮಾಲೋಚನೆ

ಆರೋಗ್ಯ ಕರ್ನಾಟಕ’ಕ್ಕೆ ವೇದಿಕೆ ಕಲ್ಪಿಸಲಿರುವ “ಹೆಲ್ತ್ ರಿಜಿಸ್ಟರ್’ ಯೋಜನೆ ಅನುಷ್ಠಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮುನ್ನುಡಿ ಬರೆದರು.

ಮೂಲಭೂತ ಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ರಾಮಣ್ಣ

ಲಕ್ಷ್ಮೇಶ್ವರ: ಸರಕಾರದ ಮೂಲಕ ಅನುದಾನ ತಂದು ಎಲ್ಲಾ ನಾಗರಿಕರಿಗೂ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ…