ದೆಹಲಿ: ದೇಶದಲ್ಲಿ ಏರುತ್ತಿರುವ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆ ಶ್ರೀಸಾಮಾನ್ಯನ ಜೇಬಿಗೆ ಕತ್ತರಿ ಹಾಕುತ್ತಲೇ ಇದೆ. ಕೆಲವು ರಾಜ್ಯಗಳಲ್ಲಂತೂ ಪ್ರತಿ ಲೀಟರ್​ ಪೆಟ್ರೋಲ್​ ಬೆಲೆ 100ರ ಗಡಿ ದಾಟಿದೆ. ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರವನ್ನ ದೂಷಿಸುತ್ತಲೇ ಇದೆ.

ದೇಶದ ನಾಲ್ಕು ರಾಜ್ಯಗಳಲ್ಲಿ ಟ್ಯಾಕ್ಸ್​​ ಕಡಿತ ಮಾಡುವ ಮೂಲಕ ಗ್ರಾಹಕರಿಗೆ ಕೊಂಚ ನಿರಾಳ ಎನಿಸುವಂತೆ ಮಾಡಿದೆ. ಇದರಲ್ಲಿ ಕೆಲ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಹೀಗಾಗಿ ಜನರ ವಿಶ್ವಾಸವನ್ನ ಗಳಿಸಲಿಕ್ಕೋಸ್ಕರ ಈ ಕ್ರಮ ಕೈಗೊಳ್ಳಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಪೆಟ್ರೋಲ್​ ಹಾಗೂ ಡೀಸೆಲ್​ಗಳ ಮೇಲೆ ಹಾಕಲಾಗುವ ವ್ಯಾಟ್​ ಮೇಲೆ ಪ್ರತಿ ಲೀಟರ್​ಗೆ ಒಂದು ರೂಪಾಯಿ ಕಡಿತ ಮಾಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್​​ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಫೆಬ್ರವರಿ 12ರಂದು ಆಸ್ಸಾಂ ರಾಜ್ಯ ಸರ್ಕಾರ ಕೂಡ ಕಳೆದ ವರ್ಷ ಕೊರೊನಾ ಸಂಕಷ್ಟದಿAದ ಜನರನ್ನ ಪಾರು ಮಾಡುವ ಸಲುವಾಗಿ 5 ರೂಪಾಯಿ ಎಡಿಷನಲ್​ ಟ್ಯಾಕ್ಸ್​​ನ್ನು ಕಡಿತಗೊಳಿಸಲಾಗಿದೆ. ಆಸ್ಸಾಂನಲ್ಲೂ ಚುನಾವಣೆ ಸಮೀಪಿಸುತ್ತಿದೆ.

ಪೆಟ್ರೋಲ್​ – ಡೀಸೆಲ್​ ದರದಲ್ಲಿ ಇಂದು ಅಂತಹ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಇದಕ್ಕೂ ಮೊದಲು ನಿರಂತರ 12 ದಿನಗಳ ಕಾಲ ತೈಲೋತ್ಪನ್ನಗಳ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿತ್ತು.

ದೆಹಲಿಯಲ್ಲಿ ಪೆಟ್ರೋಲ್​ ಬೆಲೆ 90.58 ರೂ. ಹಾಗೂ ಡಿಸೇಲ್​ ದರ 80.97 ರೂ.

ಮುಂಬೈನಲ್ಲಿ ಪೆಟ್ರೋಲ್​ ದರ 97 ರೂ. ಹಾಗೂ ಡೀಸೆಲ್​ ದರ 88.06 ರೂ.

ಕೊಲ್ಕತ್ತಾದಲ್ಲಿ ಪೆಟ್ರೋಲ್​ ದರ 91.78 ರೂ. ಹಾಗೂ ಡೀಸೆಲ್​ ದರ 84.56 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್​ ದರ 93.61 ರೂ. ಹಾಗೂ ಡೀಸೆಲ್​ ದರ 85.84 ರೂ.

Leave a Reply

Your email address will not be published. Required fields are marked *

You May Also Like

ಚೀನಾದಲ್ಲಿ ಶುರುವಾಗಿದೆ ಕೊರೊನಾ ಎರಡನೇ ಅಲೆ!

ಬೀಜಿಂಗ್: ಚೀನಾದಲ್ಲಿ ಮತ್ತೊಮ್ಮೆ ಕೊರೊನಾ ಅಲೆ ಶುರುವಾಗಿದೆ. ಹುಟ್ಟು ಪಡೆದಿರುವ ಬೀಜಿಂಗ್ ನಲ್ಲಿಯೇ ಸದ್ಯ ಅದರ…

ದೇಶದಲ್ಲಿ ತನ್ನ ಅಟ್ಟಹಾಸ ಮುಂದುವರೆಸಿದೆ ಮಹಾಮಾರಿ!

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದರೂ ಆತಂಕ ಮಾತ್ರ ಇನ್ನೂ ನಿಂತಿಲ್ಲ.

ಸಾಮಾಜಿಕ ಜಾಲತಾಣಗಳಿಗೆ ಖಡಕ್ ಎಚ್ಚರಿಕೆ ನೀಡಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್

ಸಾಮಾಜಿಕ ಜಾಲತಾಣ ದೈತ್ಯ ಟ್ವಿಟರ್ ಮತ್ತು ಫೇಸ್ ಬುಕ್, ವಾಟ್ಸ್ ಆಯಪ್ ಮುಂತಾದ ಸಾಮಾಜಿಕ ಜಾಲತಾಣಗಳು ನೆಲದ ನಿಯಮವನ್ನು ಪಾಲಿಸಬೇಕು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ತಿಳಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ದ್ವೇಷ ಹರಡುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದರು.

ಇಂದಿನಿಂದಲೇ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯ

ಸ್ವಯಂಚಾಲಿತ ಟೋಲ್ ಪ್ಲಾಜಾ ಪಾವತಿ ವ್ಯವಸ್ಥೆ ಫಾಸ್ಟ್ಯಾಗ್ ಇಂದಿನಿಂದಲೇ ಕಡ್ಡಾಯವಾಗಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.