ದೆಹಲಿ: ದೇಶದಲ್ಲಿ ಏರುತ್ತಿರುವ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆ ಶ್ರೀಸಾಮಾನ್ಯನ ಜೇಬಿಗೆ ಕತ್ತರಿ ಹಾಕುತ್ತಲೇ ಇದೆ. ಕೆಲವು ರಾಜ್ಯಗಳಲ್ಲಂತೂ ಪ್ರತಿ ಲೀಟರ್​ ಪೆಟ್ರೋಲ್​ ಬೆಲೆ 100ರ ಗಡಿ ದಾಟಿದೆ. ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರವನ್ನ ದೂಷಿಸುತ್ತಲೇ ಇದೆ.

ದೇಶದ ನಾಲ್ಕು ರಾಜ್ಯಗಳಲ್ಲಿ ಟ್ಯಾಕ್ಸ್​​ ಕಡಿತ ಮಾಡುವ ಮೂಲಕ ಗ್ರಾಹಕರಿಗೆ ಕೊಂಚ ನಿರಾಳ ಎನಿಸುವಂತೆ ಮಾಡಿದೆ. ಇದರಲ್ಲಿ ಕೆಲ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಹೀಗಾಗಿ ಜನರ ವಿಶ್ವಾಸವನ್ನ ಗಳಿಸಲಿಕ್ಕೋಸ್ಕರ ಈ ಕ್ರಮ ಕೈಗೊಳ್ಳಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಪೆಟ್ರೋಲ್​ ಹಾಗೂ ಡೀಸೆಲ್​ಗಳ ಮೇಲೆ ಹಾಕಲಾಗುವ ವ್ಯಾಟ್​ ಮೇಲೆ ಪ್ರತಿ ಲೀಟರ್​ಗೆ ಒಂದು ರೂಪಾಯಿ ಕಡಿತ ಮಾಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್​​ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಫೆಬ್ರವರಿ 12ರಂದು ಆಸ್ಸಾಂ ರಾಜ್ಯ ಸರ್ಕಾರ ಕೂಡ ಕಳೆದ ವರ್ಷ ಕೊರೊನಾ ಸಂಕಷ್ಟದಿAದ ಜನರನ್ನ ಪಾರು ಮಾಡುವ ಸಲುವಾಗಿ 5 ರೂಪಾಯಿ ಎಡಿಷನಲ್​ ಟ್ಯಾಕ್ಸ್​​ನ್ನು ಕಡಿತಗೊಳಿಸಲಾಗಿದೆ. ಆಸ್ಸಾಂನಲ್ಲೂ ಚುನಾವಣೆ ಸಮೀಪಿಸುತ್ತಿದೆ.

ಪೆಟ್ರೋಲ್​ – ಡೀಸೆಲ್​ ದರದಲ್ಲಿ ಇಂದು ಅಂತಹ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಇದಕ್ಕೂ ಮೊದಲು ನಿರಂತರ 12 ದಿನಗಳ ಕಾಲ ತೈಲೋತ್ಪನ್ನಗಳ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿತ್ತು.

ದೆಹಲಿಯಲ್ಲಿ ಪೆಟ್ರೋಲ್​ ಬೆಲೆ 90.58 ರೂ. ಹಾಗೂ ಡಿಸೇಲ್​ ದರ 80.97 ರೂ.

ಮುಂಬೈನಲ್ಲಿ ಪೆಟ್ರೋಲ್​ ದರ 97 ರೂ. ಹಾಗೂ ಡೀಸೆಲ್​ ದರ 88.06 ರೂ.

ಕೊಲ್ಕತ್ತಾದಲ್ಲಿ ಪೆಟ್ರೋಲ್​ ದರ 91.78 ರೂ. ಹಾಗೂ ಡೀಸೆಲ್​ ದರ 84.56 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್​ ದರ 93.61 ರೂ. ಹಾಗೂ ಡೀಸೆಲ್​ ದರ 85.84 ರೂ.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ಫ್ಲಾಪ್:ಸೋಂಕು ಸೊರಗಲಿಲ್ಲ, ಎಕಾನಮಿ ಏಳಲಿಲ್ಲ!

ಬೆಂಗಳೂರು: ಲಾಕ್ ಡೌನ್ ಉದ್ದೇಶ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವುದು. ವಾಣಿಜ್ಯ ಸೇರಿದಂತೆ ಎಲ್ಲ ಆರ್ಥಿಕ ಚಟುವಟಿಕೆಗಳು…

‘ಶಾಲೆ ಯಾವಾಗ ಆರಂಭಿಸೋಣ? ಪಾಲಕರ ಅಭಿಪ್ರಾಯ ಕೇಳಿ’: ರಾಜ್ಯಗಳಿಗೆ ಕೇಂದ್ರದ ತರಾತುರಿಯ ಸಂದೇಶ!

ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ವಿಭಾಗವು ಎಲ್ಲ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಿಗೆ ತರಾತುರಿಯಲ್ಲಿ ಒಂದು ಪತ್ರ ಕಳಿಸಿ, 3 ದಿನದಲ್ಲಿ ವಿದ್ಯಾರ್ಥಿಗಳ ಪಾಲಕರ ಅಭಿಪ್ರಾಯ ಸಂಗ್ರಹಿಸಿ, ಶಾಲೆ ಯಾವಾಗ ಆರಂಭಿಸಬೇಕು ಎಂದು ಸಲಹೆ ಪಡೆಯಿರಿ ಎಂದು ತಿಳಿಸಿದೆ. ಅಗಸ್ಟ್, ಸೆಪ್ಟೆಂಬರ್ ಅಥವಾ ಅಕ್ಟೋಬರ್ –ಯಾವ ತಿಂಗಳಲ್ಲಿ ಶಾಲೆ ಮರು ಆರಂಭವಾದರೆ ಒಳ್ಳೆಯದು ಎಂದು ಪಾಲಕರಿಂದ ತಿಳಿದುಕೊಂಡು, ಸರ್ಕಾರದ ಅಭಿಪ್ರಾಯ ರೂಪಿಸಿ ಕೂಡಲೇ ಕೇಂದ್ರಕ್ಕೆ ಕಳಿಸಿಕೊಡಿ ಎಂದು ತಿಳಿಸಿದೆ.

ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ನಿಧನ

ಬೆಂಗಳೂರ: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ)…

ವಾಷಿಂಗ್ಟನ್ ನಲ್ಲಿ ಗಾಂಧಿ ಪ್ರತಿಮೆ ಧ್ವಂಸ: ಕ್ಷಮೆ ಕೋರಿದ ಅಮೆರಿಕ

ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮುಂದಿರುವ ಮಹಾತ್ಮ ಗಾಂಧಿ ಮೂರ್ತಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.