ದೆಹಲಿ: ಜಗತ್ತಲ್ಲಿ ಕೊರೊನಾ ಸೊಂಕು ಜನರ ಬದುಕು ತೆಗೆದರೂ, ಇನ್ನು ತಣ್ಣಗಾಗುವ ಲಕ್ಷಗಳು ಕಾಣುತ್ತಿಲ್ಲ.

ಭಾರತದಲ್ಲಿ 2ನೇ ಅಲೆಯ ಆತಂಕ ಆರಂಭವಾಗಿದೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೊನಾ 2ನೇ ಅಲೆ ಕಂಡುಬಂದಿದ್ದು, ಹೆಚ್ಚು ಪ್ರಕರಣಗಳು ವರದಿಯಾಗಿವೆ. ಕೇರಳದಲ್ಲಿ ಎರಡೂವರೆ ಸಾವಿರ ಹೊಸ ಪ್ರಕರಣಗಳು ಪತ್ತೆಯಾಗಿದ್ದರೆ, ಮಹಾರಾಷ್ಟ್ರವೊಂದಲ್ಲಿ 6 ಸಾವಿರ ಹೊಸ ಪ್ರಕರಣ ಪತ್ತೆಯಾಗಿದ್ದು, ಆತಂಕ ಎದುರಾಗಿದೆ. ಈ ಎರಡೂ ರಾಜ್ಯಗಳಲ್ಲದೆ ಛತ್ತೀಸ್ಗಢ, ಮಧ್ಯಪ್ರದೇಶ, ಪಂಜಾಬ್, ರಾಜಸ್ಥಾನದಲ್ಲೂ ರೂಪಾಂತರಿ ಕೊರೊನಾ ಪ್ರಕರಣಗಳ ಸಂಖ್ಯೆ ಕಂಡುಬರುತ್ತಿವೆ.

ಮಹಾರಾಷ್ಟ್ರ, ಕೇರಳ ಮತ್ತು ತೆಲಂಗಾಣದಲ್ಲಿ ದಕ್ಷಿಣ ಆಫ್ರಿಕಾದ ಸೇರಿದಂತೆ ದೇಶದಲ್ಲಿ ಒಟ್ಟು 6 ಜನರಲ್ಲಿ ಹೊಸ ಪ್ರಭೇದದ ಕೊರೊನಾ ವೈರಸ್ ಪತ್ತೆ ಆಗಿದೆ ಎಂದು ಅಂತಾ ನೀತಿ ಆಯೋಗದ ಸದಸ್ಯ ವಿ.ಕೆ. ಪೌಲ್ ಹೇಳಿದ್ದಾರೆ. ಆದರೆ, ಕೊರೊನಾ ಕೇಸ್ಗಳ ಏರಿಕೆಗೆ ಈ ಹೊಸ ಪ್ರಭೇದದ ವೈರಸ್ ಕಾರಣವಲ್ಲ ಅನ್ನೋದನ್ನ ಪೌಲ್ ಸ್ಪಷ್ಟಪಡಿಸಿದ್ದಾರೆ.

ದೇಶದ ಸಕ್ರಿಯ ಪ್ರಕರಣಗಳಲ್ಲಿ ಕೇರಳದಲ್ಲಿ ಶೇ.38, ಮಹಾರಾಷ್ಟ್ರದಲ್ಲಿ ಶೇ.37 ರಷ್ಟು ಪ್ರಕರಣಗಳಿವೆ. ಹೀಗಾಗಿ ಈ ಎರಡೂ ರಾಜ್ಯಗಳನ್ನೇ ಗಮನದಲ್ಲಿಟ್ಟುಕೊಂಡು ಕೇಂದ್ರ ಹೊಸ ಕಾರ್ಯತಂತ್ರ ರೂಪಿಸುತ್ತಿದೆ.

Leave a Reply

Your email address will not be published. Required fields are marked *

You May Also Like

ಇನ್ಮೂಂದೆ ಆಯುಷ್ಮಾನ ಫಲಾನುಭವಿಗಳಿಗೆ ಅರ್ಹತಾ ಕಾರ್ಡ್ಉಚಿತ

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯ ಫಲಾನುಭವಿಗಳು ತಮ್ಮ ಅರ್ಹತಾ ಕಾರ್ಡ್ಗಳನ್ನ ಉಚಿತವಾಗಿ ಪಡೆಯಬಹುದಾಗಿದೆ.

ವಾಲಿಬಾಲ್ ಪಂದ್ಯಾಟ : ಹಳಕಟ್ಟಿ ಶಾಲೆ ಬಾಲಕಿಯರ ತಂಡ ಸಾಧನೆ

ಆಲಮಟ್ಟಿ : ಸ್ಥಳೀಯ ಎಸ್.ವಿ.ವಿ.ಅಸೋಸಿಯೇಷನ್ ಶಿಕ್ಷಣ ಸಂಸ್ಥೆಯ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯ ಬಾಲಕಿಯರ ವಾಲಿಬಾಲ್ ತಂಡ  2022-23…

ಗಾಂಧೀಜಿ ಪ್ರತಿಮೆ ದ್ವಂಸಗೊಳಿಸಿದ ಕಿಡಿಗೇಡಿಗಳು

ದೇಶದಲ್ಲಿ ಜ.30 ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಹುತಾತ್ಮರಾದ ದಿನ ಆಚರಿಸಲಾಗುತ್ತಿದ್ದು, ಅಮೇರಿಕದಲ್ಲಿ ಶನಿವಾರ ಮಹಾತ್ಮ ಗಾಂಧೀಜಿ ಅವರ ಕಂಚಿನ ಪ್ರತಿಮೆಯನ್ನು ದ್ವಂಸಗೊಳಸಿದ್ದಾರೆ.

ಕೊರೋನಾ ಸಂಕಷ್ಟ ವಲಸಿಗರ ವಿಚಾರದಲ್ಲೂ ರಾಜಕಾರಣ..!

ಅಣ್ಣಾ ನಾನು ಊರಿಗೆ ಬರ್ತಿನಿ, ಬೇಕಾದ್ರೆ ಕ್ವಾರೈಂಟೈನ್ ನಲ್ಲಾದ್ರು ಇರ್ತಿನಿ ಆದ್ರೆ ಊರಿಗೆ ಬಂದ್ರೆ ಸಾಕು ಅನ್ನಿಸ್ತಿದೆ, ಹೇಗಾದ್ರು ಮಾಡಿ ನನ್ನನ್ನು ಕರಿಸಿಕೋ ಎನ್ನುವ ಮೊಬೈಲ್ ಕರೆಗಳೀಗ ಸಾಮಾನ್ಯವಾಗಿವೆ. ನಮಗೆ ಒಂದೊತ್ತಿನ ಊಟಕ್ಕೂ ಪರದಾಟವಿದೆ. ದುಡಿಯುವ ಕೈಗಳಿಗೆ ಕೆಲಸವೇ ಇಲ್ಲದೇ ನಾವು ಪರದಾಡುತ್ತಿದ್ದೇವೆ ಬೇಗ ನಮ್ಮನ್ನು ಊರಿಗೆ ಕರೆಸಿಕೊಳ್ಳಿ ಎನ್ನುವ ಅಂಗಲಾಚುವ ಧ್ವನಿ. ಒಂದೆಡೆ ಕಾರ್ಮಿಕರ ಗೋಳು ಮತ್ತೊಂದೆಡೆ ತಮ್ಮ ದೇಹವನ್ನೆ ಬಂಡವಾಳವಾಗಿಸಿಕೊಂಡು ಮುಂಬೈ-ಪುಣೆಯನ್ನೆ ಆಶ್ರಯಿಸಿಕೊಂಡಿದ್ದ ಲೈಂಗಿಕ ಕಾರ್ಯಕರ್ತೆಯರು ಒಪ್ಪತ್ತಿನೂಟಕ್ಕೆ ಪಡುತ್ತಿರುವ ಗೋಳಾಟ ಅಷ್ಟಿಷ್ಟಲ್ಲ.