ದೆಹಲಿ: ಜಗತ್ತಲ್ಲಿ ಕೊರೊನಾ ಸೊಂಕು ಜನರ ಬದುಕು ತೆಗೆದರೂ, ಇನ್ನು ತಣ್ಣಗಾಗುವ ಲಕ್ಷಗಳು ಕಾಣುತ್ತಿಲ್ಲ.

ಭಾರತದಲ್ಲಿ 2ನೇ ಅಲೆಯ ಆತಂಕ ಆರಂಭವಾಗಿದೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೊನಾ 2ನೇ ಅಲೆ ಕಂಡುಬಂದಿದ್ದು, ಹೆಚ್ಚು ಪ್ರಕರಣಗಳು ವರದಿಯಾಗಿವೆ. ಕೇರಳದಲ್ಲಿ ಎರಡೂವರೆ ಸಾವಿರ ಹೊಸ ಪ್ರಕರಣಗಳು ಪತ್ತೆಯಾಗಿದ್ದರೆ, ಮಹಾರಾಷ್ಟ್ರವೊಂದಲ್ಲಿ 6 ಸಾವಿರ ಹೊಸ ಪ್ರಕರಣ ಪತ್ತೆಯಾಗಿದ್ದು, ಆತಂಕ ಎದುರಾಗಿದೆ. ಈ ಎರಡೂ ರಾಜ್ಯಗಳಲ್ಲದೆ ಛತ್ತೀಸ್ಗಢ, ಮಧ್ಯಪ್ರದೇಶ, ಪಂಜಾಬ್, ರಾಜಸ್ಥಾನದಲ್ಲೂ ರೂಪಾಂತರಿ ಕೊರೊನಾ ಪ್ರಕರಣಗಳ ಸಂಖ್ಯೆ ಕಂಡುಬರುತ್ತಿವೆ.

ಮಹಾರಾಷ್ಟ್ರ, ಕೇರಳ ಮತ್ತು ತೆಲಂಗಾಣದಲ್ಲಿ ದಕ್ಷಿಣ ಆಫ್ರಿಕಾದ ಸೇರಿದಂತೆ ದೇಶದಲ್ಲಿ ಒಟ್ಟು 6 ಜನರಲ್ಲಿ ಹೊಸ ಪ್ರಭೇದದ ಕೊರೊನಾ ವೈರಸ್ ಪತ್ತೆ ಆಗಿದೆ ಎಂದು ಅಂತಾ ನೀತಿ ಆಯೋಗದ ಸದಸ್ಯ ವಿ.ಕೆ. ಪೌಲ್ ಹೇಳಿದ್ದಾರೆ. ಆದರೆ, ಕೊರೊನಾ ಕೇಸ್ಗಳ ಏರಿಕೆಗೆ ಈ ಹೊಸ ಪ್ರಭೇದದ ವೈರಸ್ ಕಾರಣವಲ್ಲ ಅನ್ನೋದನ್ನ ಪೌಲ್ ಸ್ಪಷ್ಟಪಡಿಸಿದ್ದಾರೆ.

ದೇಶದ ಸಕ್ರಿಯ ಪ್ರಕರಣಗಳಲ್ಲಿ ಕೇರಳದಲ್ಲಿ ಶೇ.38, ಮಹಾರಾಷ್ಟ್ರದಲ್ಲಿ ಶೇ.37 ರಷ್ಟು ಪ್ರಕರಣಗಳಿವೆ. ಹೀಗಾಗಿ ಈ ಎರಡೂ ರಾಜ್ಯಗಳನ್ನೇ ಗಮನದಲ್ಲಿಟ್ಟುಕೊಂಡು ಕೇಂದ್ರ ಹೊಸ ಕಾರ್ಯತಂತ್ರ ರೂಪಿಸುತ್ತಿದೆ.

Leave a Reply

Your email address will not be published. Required fields are marked *

You May Also Like

ದೇಶ ಉದ್ಧೇಶಿಸಿ ಮಾತನಾಡಿದ ಪ್ರಧಾನಿ ಮೋದಿ! ಈ ಭಾಷಣದಲ್ಲಿ ಏನು ಹೇಳಿದರು?

ನವದೆಹಲಿ : ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಕಡಿಮೆಯಾಗಿರುವ ಸಂತಸ ಹಂಚಿಕೊಂಡಿದ್ದಾರೆ.

ಸುಶಾಂತ ಸಿಂಗ್ ರಜಪುತ ಬಾಲಿವುಡ್ ನಟ ಆತ್ಮಹತ್ಯೆ

ಮುಂಬಯಿ:ಬಾಲಿವುಡ್ ನಟ ಸುಶಾಂತ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬಾಂದ್ರ ಪೂಲಿಸರು ತಿಳಿಸಿದ್ದಾರೆ. ಅವರು…

ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!

ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!ಬೆಂಗಳೂರು : ರಾಜ್ಯದಲ್ಲಿ ಕೂಡ ಕೊರೊನಾ ಅಬ್ಬರ…

ಚೀನಾ ಸಂಘರ್ಷ ಅಂತ್ಯ – ಸೇನೆ ಹಿಂಪಡೆಯಲು ನಿರ್ಧಾರ!

ನವದೆಹಲಿ : ಚೀನಾ ಸಂಘರ್ಷದ ಬಳಿಕ ಉಂಟಾಗಿದ್ದ ಗಂಭೀರ ಪರಿಸ್ಥಿತಿಯನ್ನು ತಿಳಿಗೊಳಿಸುವ ಭಾರತ ಮತ್ತು ಚೀನಾ ಸೇನಾ ಮುಖ್ಯಸ್ಥರ ಪ್ರಯತ್ನಕ್ಕೆ ಮಹತ್ವದ ಜಯ ಲಭಿಸಿದ್ದು, ಎರಡೂ ಸೇನಾ ಮುಖ್ಯಸ್ಥರು ತಮ್ಮ ಸೈನಿಕರನ್ನು ಹಿಂದಕ್ಕೆ ಕರೆಯಿಸಿಕೊಳ್ಳಲು ನಿರ್ಧರಿಸಿದ್ದಾರೆ.