ಗದಗ: ಜಿಲ್ಲೆಯಲ್ಲಿ ನಿರ್ಮಿಸಿರುವ ಕನ್ನಡ ಸಾಹಿತ್ಯ ಭವನವನ್ನು ರಾಜ್ಯದಲ್ಲಿಯೇ ಮಾದರಿ ಭವನವಾಗಿದೆ ಎಂದು ಕರ್ನಾಟಕ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಶರಣು ಗೋಗೇರಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಡರಗಿ ತಾಲೂಕಾ ಕನ್ನಡ ಸಾಹಿತ್ಯ ಭವನಕ್ಕೆ ನಿರ್ಮಾಣಕ್ಕೆ ಶ್ರೀ ನಾಡೋಜ ಡಾ.ಅನ್ನದಾನೀಶ್ವರ ಶ್ರೀಗಳು 6 ಗುಂಟೆ ಜಮೀನನ್ನು ದಾನವಾಗಿ ನೀಡಿದ್ದು, ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ನಿಂದ ಅಭಿನಂದಿಸುತ್ತೇವೆ ಎಂದು ತಿಳಿಸಿದರು.

ರೋಣ ತಾಲೂಕು ಕನ್ನಡ ಸಾಹಿತ್ಯ ಭವನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ 30 ಲಕ್ಷ ರೂ. ಬಿಡುಗಡೆಯಾಗಿದೆ. ರಾಜ್ಯ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ 5 ಲಕ್ಷ ರೂ. ಹಾಗೂ ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರಿಂದ 3 ಲಕ್ಷ ರೂ. ಹಣ ಬಿಡುಗಡೆ ಮಾಡಿಸಲಾಗಿದೆ ಎಂದರು.

ಮುಂಡರಗಿಯಲ್ಲಿ ಕನ್ನಡ ಸಾಹಿತ್ಯ ಭವನಕ್ಕೆ ಕನ್ನಡ ಸಾಹಿತ್ಯ ಪರಿಷತ್ತನಿಂದ 15 ಲಕ್ಷ ರೂ ಹಣ ಬಿಡುಗಡೆ ಮಾಡಿಸಲಾಗಿದ್ದು, ಲಕ್ಷ್ಮೀಶ್ವರನಲ್ಲಿ ಕನ್ನಡ ಸಾಹಿತ್ಯ ಭವನಕ್ಕೆ ನಿರ್ಮಾಣಕ್ಕೆ ಕನ್ನಡ ಸಾಹಿತ್ಯ ಪರಿಷತ್ತನಿಂದ 15 ಲಕ್ಷ, ನರಗುಂದ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಕನ್ನಡ ಸಾಹಿತ್ಯ ಪರಿಷತ್ತನಿಂದ 15 ಲಕ್ಷ ಬಿಡುಗಡೆ ಮಡಿಸಲಾಗಿದೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಭವನಕ್ಕೆ ಪೀಠೋಪಕರಣ ಖರೀದಿಗಾಗಿ 10 ಲಕ್ಷ ರೂ. ಹಣ ಬಿಡುಗಡೆ ಮಾಡಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 27 ಮತ್ತು 28 ರಂದು ನಡೆಯಲಿರುವ ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲಾ ಪ್ರಾತಿನಿಧಿಕ ಕಥಾಸಂಕಲನ ಕಥಾಲೋಕ ಕಥಾ ಸಂಕಲನ, ಬೆಳ್ವಲ ಕಾವ್ಯಸಿರಿ ಕವನ ಸಂಕಲನ ಬಿಡುಗಡೆಗೊಳ್ಳಲಿದೆ. ಮುಂಡರಗಿಯ ಶ್ರೀ ಅನ್ನದಾನೀಶ್ವರ ಸಂಸ್ಥಾನ ಮಠದ ಶ್ರೀ ಜಗದ್ಗುರು ನಾಡೋಜ ಡಾ.ಅನ್ನದಾನೀಶ್ವರ ಶ್ರೀಗಳು ಸಮ್ಮೇಳನದ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸುವರು ಎಂದು ತಿಳಿಸಿದರು.

ಅಂದಾನಪ್ಪ ವಿಭೂತಿ, ಎಂ.ಕೆ ಲಮಾಣಿ, ಪ್ರೇಮನಾಥ ಗರಗ, ವಿ.ಎಂ ಹಿರೇಮಠ, ಎಂ.ಬಿ. ಹಿರೇಮಠ, ಪ್ರಕಾಶ ಮಂಗಳೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಹೂ ಬೆಳೆಗಾರರಿಗೆ ಕೋಟ್ಯಾಂತರ ರೂ, ನಷ್ಟ..!

ಲಾಕ್ ಡೌನ್ ಹಿನ್ನೆಲೆ ಹೂಬೆಳೆಯನ್ನೆ ನಂಬಿಕೊಂಡ ಕುಳಿತ ರೈತ ಕಂಗಾಲಾಗಿದ್ದಾನೆ. ಗದಗ ಜಿಲ್ಲೆಯಲ್ಲಿ ಯಾವ ಹೂವು ಎಷ್ಟು ಹಾನೀಗಿಡಾಗಿದೆ ಎನ್ನುವ ವಿವರ ಇಲ್ಲಿದೆ ನೋಡಿ.

ವೀಕೆಂಡ್ ಆಲಮಟ್ಟಿ ಹೌಸ್ ಫುಲ್

“ಕಲರಮಯ ಬೆಳಕಿನ ಚಿತ್ತಾರದಲ್ಲಿ ಮಿನುಗಿದ ಡ್ಯಾಂ- ಜಲ ಸೌಂದರ್ಯ ಸವಿಯಲು ಅಸಂಖ್ಯ ಪ್ರವಾಸಿಗರ ಲಗ್ಗೆ..!” ಆಲಮಟ್ಟಿ:…

ಗುರುವಾರ ವಿದ್ಯುತ್ ನಿಲುಗಡೆ

ಗದಗ: 110 ಕೆವ್ಹಿ ಗದಗ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಪರಿವರ್ತಕ-1 ಹಾಗೂ ಪರಿವರ್ತಕ-2 ರ…

ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ ಶಿಕ್ಷಣ ಸಚಿವ

ಖಾಸಗಿ ಶಿಕ್ಷಣ ಸಂಸ್ಥೆಗಳ ವರ್ತನೆಯಿಂದ ಆತಂಕಗೊಂಡಿರುವ ಶಿಕ್ಷಣ ಇಲಾಖೆ, ಇದೀಗ ಮಕ್ಕಳ ಹಿತ ಕಾಪಾಡಲು ಮುಂದಾಗಿದೆ. ಹೀಗಾಗಿ ಶಾಲಾ ಶುಲ್ಕದ ವಿಚಾರವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕಠಿಣ ಎಚ್ಚರಿಕೆ ನೀಡಿದ್ದಾರೆ.