ಕುಂದಾಪುರ: ಶ್ರೀದೇವೀ ಮಹಾತ್ಮೆ ಯಕ್ಷಗಾನದಲ್ಲಿ ಮಹಿಷಾಸುರ ಪಾತ್ರಧಾರಿ ರಂಗಸ್ಥಳದ ಕಂಬಕ್ಕೆ ತಲೆ ಬಡಿದುಕೊಂಡಿದ್ದು, ಕಂಬ ಅದುರಿದ ಕಾರಣ ಸ್ವಲ್ಪ ಕಾಲ ಆತಂಕದ ಸ್ಥಿತಿ ಎದುರಾಯಿತು.

ಮಾರಣಕಟ್ಟೆ ಮೇಳದ ಯುವ ಕಲಾವಿದ ನಂದೀಶ್ ಮೊಗವೀರ ಜನ್ನಾಡಿ ಅತಿಥಿ ಕಲಾವಿದರಾಗಿ ಭಾಗವಹಿಸಿದ್ದು, ಮಹಿಷಾಸುರ ವೇಷ ಅಬ್ಬರದ ಪ್ರವೇಶಕ್ಕೆ ಮಾತ್ರವಲ್ಲದೆ, ರಂಗಸ್ಥಳದ ಕಂಬಕ್ಕೆ ತಲೆ ಹೊಡೆದುಕೊಳ್ಳುವ ದೃಶ್ಯಕ್ಕಾಗಿಯೂ ಪ್ರಸಿದ್ಧ.

ಈ ಮಹಿಷಾಸುರನ ಅಬ್ಬರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೆಚ್ಚುಗೆಯ ಜತೆಗೇ ಕಲಾವಿದನ ಕುರಿತು ಕಾಳಜಿಯ ಮಾತುಗಳೂ ಕೇಳಿ ಬಂದಿವೆ. ಜೀವಕ್ಕೆ ಅಪಾಯ ಆಗುವಂತಹ ಪ್ರದರ್ಶನ ನೀಡಬಾರದು. ದೈಹಿಕ ಆಘಾತವಾಗದಂತೆ ಅಭಿನಯ ನೀಡಬೇಕು ಎಂದಿದ್ದಾರೆ.

ನಿರಂತರವಾಗಿ ಕಂಬಕ್ಕೆ ತಲೆ ಹೊಡೆದುಕೊಳ್ಳುವುದರಿಂದ ಮೆದುಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಚ್ಚರಿಕೆ ವಹಿಸಬೇಕು ಎಂದು ಕೆಎಂಸಿಯ ಹೃದ್ರೋಗ ವಿಭಾಗ ಮುಖ್ಯಸ್ಥ ಡಾ.ಪದ್ಮನಾಭ ಕಾಮತ್ ಪ್ರತಿಕ್ರಿಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ವಲಸೆ ಕಾರ್ಮಿಕರ ರಕ್ಷಣೆಗಾಗಿ ಪೋಸ್ಟರ್ ನಾಳೆ ಪ್ರತಿಭಟನೆ

ಕಳೆದ ಒಂದುವರೆ ತಿಂಗಳಿಂದ ವಲಸೆ ಕಾರ್ಮಿಕರು ಊಟ ಇಲ್ಲದೆ, ವೇತನ ವಿಲ್ಲದೆ ಹೇಳಲಾರದ ಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಅವರೆಲ್ಲ ಮನೆಗೆ ಹೋಗಲು ಬಯಸುತ್ತಿದ್ದಾರೆ. ಆದರೆ ನಮ್ಮ ಕ್ರೂರ ಸರ್ಕಾರ, ರೈಲುಗಳನ್ನು ನಿಲ್ಲಿಸಿ, ಅಮಾನೀಯವಾಗಿ ಕಾರ್ಮಿಕರನ್ನು ಇಲ್ಲಿಯೇ ಬಂಧಿಸಿ, ನಮ್ಮ ರಾಜ್ಯವನ್ನ ಬಹಿರಂಗ ಜೈಲು ಮಾಡಲು ಹೊರಟಿದೆ.

ನೀರಿನ ಬವಣೆ ನೀಗಿಸಲು ಮುಂದಾದ ರೋಣ ಪುರಸಭೆ

ಜಲಶಕ್ತಿ ಅಭಿಯಾನದಡಿಯಲ್ಲಿ ನೀರಿನ ಟ್ಯಾಂಕುಗಳನ್ನು ಸ್ವಚ್ಛಗೊಳಿಸಿದ ಪುರಸಭೆ ಸಿಬ್ಬಂಧಿಗಳ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಗರಕ್ಕೆ ಪ್ರತಿನಿತ್ಯ 20 ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಬೇಸಿಗೆ ನಿರ್ವಹಣೆ ಸ್ವಲ್ಪ ಕಷ್ಟ. ಆದರೂ ಪುರಸಭೆ ಇದಕ್ಕೆ ಸೂಕ್ತ ಕ್ರಮಗಳನ್ನು ತಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗಬಾರದು ಎಂದು ಕಾಳಜಿವಹಿಸಿದ್ದಾರೆ ಎಂಬುವದು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊರೊನಾ ವಿಚಾರ : ಶೀಘ್ರದಲ್ಲೇ ನೂತನ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬುಧವಾರ ಬೆಂಗಳೂರಿನಲ್ಲಿ…

ಸಂಘಗಳಲ್ಲಿ ಪಡೆದ ಸಾಲದ ಪೂರ್ತಿಬಾಕಿ ಕಟ್ಟಬೇಕು ಎಂಬ ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ಸದಸ್ಯರು ಪಡೆದಿರುವ ಸಾಲ/ಕಂತುಗಳ ಪಾವತಿಯನ್ನು ಮುಂದೂಡಿರುವ ಸರ್ಕಾರ ಜೂನ್ ಬಳಿಕ ಪೂರ್ತಿ ಬಾಕಿ ಕಟ್ಟಬೇಕು ಎಂದು ಆದೇಶ ಹೊರಡಿಸಿದೆ. ಈ ಸುತ್ತೋಲೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.