ಗಜೇಂದ್ರಗಡ: ತಾಲ್ಲೂಕು ಕುಂಬಾರ ಸಂಘ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ಕುಂಬಾರ ಓಣಿಯಲ್ಲಿರುವ ಕುಂಬಾರ ಸಮುದಾಯ ಭವನದಲ್ಲಿ ತ್ರಿಪದಿ ಕವಿ ಸರ್ವಜ್ಞನ 501ನೇ ಜಯಂತಿ ಕಾರ್ಯಕ್ರಮ ಫೆ.28 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.

ಯಲಬುರ್ಗಾ ಶ್ರೀಧರ ಮುರಡಿ ಮಠದ ಬಸವಲಿಂಗೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದು, ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಲಿದ್ದಾರೆ. ಗಜೇಂದ್ರಗಡ ತಾಲ್ಲೂಕು ಕುಂಬಾರ ಸಂಘದ ಅಧ್ಯಕ್ಷ ಬಸಪ್ಪ ಮಲ್ಲೇಶಪ್ಪ ಕುಂಬಾರ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಮಲ್ಲಿಕಾರ್ಜುನ ಕುಂಬಾರ ಉಪನ್ಯಾಸ ನೀಡುವರು, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಜಿ.ಎಸ್.ಪಾಟೀಲ, ಬಿ.ಎಂ.ಸಜ್ಜನರ, ಪುರಸಭೆ ಅಧ್ಯಕ್ಷ ವೀರಣ್ಣ ಪಟ್ಟಣಶೆಟ್ಟಿ, ಸದಸ್ಯೆ ಲೀಲಾವತಿ ಸವಣೂರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 73 ಕೊರೊನಾ ಪಾಸಿಟಿವ್!

ಈ ಮೂಲಕ ಒಟ್ಟು ಈವರೆಗೆ 1140 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 56 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 438 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ.

ತಾಂಡಾ ಅಭಿವೃದ್ಧಿ ನಿಗಮದ ಉಪಯೋಗ ಪಡೆದುಕೊಳ್ಳಿ: ಶಾಸಕ ರಾಮಣ್ಣ ಲಮಾಣಿ

ಪ್ರತಿಯೊಂದು ಗ್ರಾಮಗಳಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಸಿಸಿ ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ತಾಂಡಾದ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.