ರೋಣ: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಅವ್ಯವಸ್ಥೆಯನ್ನು ಸಾರಿಗೆ ಇಲಾಖೆ ಸಂಚಾರಿ ನಿರೀಕ್ಷಕರಿಗೆ ತೋರಿಸುವ ಮೂಲತ ಜೈ ಭೀಮ ಆರ್ಮಿ ಸಂಘಟನೆ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ನಡೆದಿದೆ.

ಈ ಸಮಸ್ಯೆಗಳ ಬಗ್ಗೆ ಘಟಕ ವ್ಯವಸ್ಥಾಪಕರೊಂದಿಗೆ ಚೆರ್ಚೆ ಮಾಡಿ ಆದಷ್ಟು ಬೇಗನೆ ಪರಿಹಾರ ಮಾಡುತ್ತೇವೆ. ಮತ್ತು ಶೌಚಾಲಯದ ಗುತ್ತಿಗೆದಾರನಿಗೆ ಈ ಬಗ್ಗೆ ತಿಳಿಸಿ ಸ್ವಚ್ಛತೆ ಬಗ್ಗೆ ಗಮನ ಹರಿಸುವಂತೆ ಸೂಚಿಸಲಾಗುವುದು ಎಂದು ಸಂಚಾರಿ ನಿರೀಕ್ಷಕ ಸರ್ಫ್ರಾಜ್ ಡಾಲಾಯತ್ ಭರವಸೆ ನೀಡಿದರು.

ಗಬ್ಬು ನಾರುತ್ತಿರುವ ಬಸ್ ನಿಲ್ದಾಣದ ಸಾರ್ವಜನಿಕ ಮೂತ್ರಾಲಯಗಳು, ಶೌಚಾಲಯಗಳು, ಹೊರಾಂಗಣ ಹಾಗೂ ಚರಂಡಿಗಳನ್ನು ಸಂಚಾರಿ ನಿರೀಕ್ಷಕ ಸರ್ಫ್ರಾಜ್ ಡಾಲಾಯತ್ ಮತ್ತು ಸಂಚಾರಿ ವ್ಯವಸ್ಥಾಪಕರಿಗೆ ಕರೆದೊಯ್ದು ತೋರಿಸಿ ತರಾಟೆಗೆ ತೆಗೆದುಕೊಂಡರು.

ಈ ವೇಳೆ ಜೈ ಭೀಮ ಆರ್ಮಿ ಅಧ್ಯಕ್ಷ ಹನಮಂತ ಚಲವಾದಿ ಮಾತನಾಡಿ, ಪಟ್ಟಣದಲ್ಲಿ ಸಾರಿಗೆ ಸೌಲಭ್ಯ ಸರಿಯಾಗಿ ಇರುವದಿಲ್ಲ. ಇಲ್ಲಿ ಸರ್ಕಾರಿ ಸೇವೆಯಲ್ಲಿರುವ ವ್ಯವಸ್ಥಾಪಕರು ಸರಿಯಾಗಿ ಆಡಳಿತ ನಿರ್ವಹಣೆ ಮಾಡುತ್ತಿಲ್ಲ. ಸಂಘಟನೆಯಿದ ಬಸ್ ತಡೆದು ಪ್ರತಿಭಟನೆ ಮಾಡುತ್ತಿದ್ದು, ಒಂದು ಗಂಟೆಯಾದರೂ ನಿಲ್ದಾಣಕ್ಕೆ ಬಂದು ಏನು ಸಮಸ್ಯೆ ಎಂದು ಕೇಳುವಷ್ಟು ಸೌಜನ್ಯ ತೋರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೈಭೀಮ್ ಆರ್ಮಿ ಸಂಚಾಲಕ ಮುತ್ತು ನಂದಿ ಮಾತನಾಡಿ, ಬಸ್ ನಿಲ್ದಾಣವು ಅವ್ಯವಸ್ಥೆಯ ಆಗರವಾಗಿದೆ. ಚರಂಡಿ, ಬಸ್ ತಂಗುವ ಸ್ಥಳ ಕಸದಿಂದ ಕೂಡಿದೆ. ಇನ್ನು ಸುತ್ತಲಿನ ಬಹುತೇಕ ಹಳ್ಳಿಗಳಿಗೆ ಸರಿಯಾದ ಬಸ್ ಸೌಕರ್ಯವೇ ಇಲ್ಲ ಎಂದರು ಆರೋಪಿಸಿದರು.

ಈ ಸಂದರ್ಭದಲ್ಲಿ ಅಶೋಕ ತಾಳದವರು, ಪುಂಡಲೀಕ್ ಮಾದರ, ವಿಜಯ ಮೆಣಸಗಿ ಮುಜ್ಜು ದಳವಾಯಿ, ಸಂತೋಷ್ ಚಲವಾದಿ, ಮಹೇಶ ಮೇಗೂರ್, ಯಚರಪ್ಪ ದೇವಪ್ಪ ಬ್ಯಾಳಿ ಸೇರಿದಂತೆ ಇನ್ನಿತರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಅತಿವೃಷ್ಟಿಯಿಂದ ರಾಜ್ಯದಲ್ಲಾದ ನಷ್ಟ ಎಷ್ಟು ಗೊತ್ತಾ..?

ಮೈಸೂರು : ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿದೆ. ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ ರೂ. 9,952 ಕೋಟಿಯಷ್ಟು ನಷ್ಟವಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ದಾವಲಸಾಬ ಉರ್ಪ ಭಾಷಾಸಾಬ ಫಕ್ರುಸಾಬ ಮಲ್ಲಸಮುದ್ರ ಇವರನ್ನು ಗದಗ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂದುವರಿಕೆ

ಗದಗ : ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರಾದ ದಾವಲಸಾಬ ಉರ್ಪ…

ಮೃತ ದೇಹದಲ್ಲೆಷ್ಟು ದಿನ ಬದುಕಿರುತ್ತೆ ಕೊರೋನಾ ವೈರಸ್..?

ಹೊಸದೆಹಲಿ: ಇಲ್ಲಿನ ಏಮ್ಸ್‌ ಆಸ್ಪತ್ರೆಯ ವೈದ್ಯರು ಹೊಸ ಅಧ್ಯಯನ ಮಾಡಲು ಮುಂದಾಗಿದ್ದಾರೆ.ಕರೋನಾ ವೈರಸ್‌ ಮೃತ ಶರೀರದಲ್ಲಿ…

ರೈತರಿಗೆ ಖಾರವಾಯ್ತು ಮೆಣಸಿನಕಾಯಿ: ಕಂಗಾಲದ ಬೆಳೆಗಾರರು

ಜಿಲ್ಲೆಯಲ್ಲಿ ಮುಖ್ಯ ಬೆಳೆಯೇ ಮೆಣಸಿನ ಕಾಯಿ ಬೆಳೆ. ಆದರೆ ಮೆಣಸಿನಕಾಯಿ ಬೆಳೆದ ರೈತರಿಗೆ ಈ ಭಾರಿ ಮೆಣಸಿನಕಾಯಿ ಖಾರವಾಗಿ ಮಾರ್ಪಟ್ಟಿದೆ. ಈ ಕಾರಣದಿಂದ ಬೆಲೆ ಇಲ್ಲದ ಕಾರಣ ಬೆಳೆದ ಬೆಳೆಯನ್ನು ಅನ್ನದಾತ ನಾಶಪಡಿಸುತ್ತಿದ್ದಾನೆ.