ಕರ‍್ಣಿಕೋತ್ಸವದಲ್ಲಿ ಗೊರವಯ್ಯ ನುಡಿದ ಭವಿಷ್ಯವೇನು.?

ವಿಜಯನಗರ: ಹಾವನೂರ ಗ್ರಾಮದಲ್ಲಿ ಭಾನುವಾರ ಮೈಲಾರಲಿಂಗೇಶ್ವರ ಕರ‍್ಣಿಕೋತ್ಸವದಲ್ಲಿ ಸವನಿಧಿ ಆಯಿತಲೇ ಪರಾಕ್ ಎಂದು ಗೊರವಯ್ಯ ಕರ‍್ಣಿಕ ನುಡಿದನು.

ಸವನಿಧಿ ಆಯಿತಲೇ ಎಂಬುವುದು ಸುಖ ದುಃಖ, ಮಳೆ ಬೆಳೆ ಎಲ್ಲವೂ ಚೆನ್ನಾಗಿ ಆಗುತ್ತದೆ ಎಂಬಥ೵ ಕಲ್ಪಿಸುತ್ತದೆ ಎನ್ನಲಾಗಿದೆ. ಐತಿಹಾಸಿಕ ಶ್ರೀ ಮೈಲಾರಲಿಂಗೇಶ್ವರ ಕರ‍್ಣಿಕೋತ್ಸವದಲ್ಲಿ ಗೊರವಯ್ಯ ನುಡಿಯುವ ಭವಿಷ್ಯ ಕೇಳಲು ಸಾಕಷ್ಟು ಸಂಖ್ಯೆಯಲ್ಲಿ ಜನರು ನೆರೆದಿದ್ದರು.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದಲ್ಲಿ ಕೊರೊನಾ ಹಿನ್ನೆಲೆ ಕರ‍್ಣಿಕ ಕೇಳಲು ಅವಕಾಶ ಸಿಗದ ಹಿನ್ನೆಲೆ ಹಾವನೂರು ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗಿಯಾಗಿದ್ದರು.

Exit mobile version