ರೋಣ: ತಾಲೂಕಿನ ಇಟಗಿಯ ಸರಕಾರಿ ಆದರ್ಶ ವಿದ್ಯಾಲಯಕ್ಕೆ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್‌ದಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು 17.03.2021 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳು ಪಾಲಕರ, ಪೋಷಕರ ಮೊಬೈಲ್ ನಂಬರ್ ಮಾತ್ರ ನಮೂದಿಸಬೇಕು. ಸೈಬರ್ ಸೆಂರ‍್ನವರ ಮೊಬೈಲ್ ಫೋನ್ ಹಾಕಬಾರದು. ಪರೀಕ್ಷೆ ಅರ್ಜಿಯಿಂದ ದಾಖಲಾತಿ ಆಗುವವರೆಗೆ ಸಂಪೂರ್ಣ ಪ್ರಕ್ರಿಯೆ ಮೊಬೈಲ್ ಮೆಸೇಜ್ ಮೂಲಕ ನಡೆಯುತ್ತದೆ. ಪಾಲಕರು ವಿದ್ಯಾರ್ಥಿ/ನಿಯ ಎಸ್.ಎ.ಟಿ.ಎಸ್.ನಲ್ಲಿ ಎಲ್ಲ ದೋಷಗಳನ್ನು ಸಂಬAಧಪಟ್ಟ ಮುಖ್ಯೋಪಾಧ್ಯಾಯರಿಂದ ಸರಿಪಡಿಸಿಕೊಂಡು ಎಸ್.ಎ.ಟಿ.ಎಸ್ ನಂಬರಿನೊAದಿಗೆ ರೋಣ ಹಾಗೂ ಗಜೇಂದ್ರಗಡ ತಾಲೂಕಿನ 05ನೇ ತರಗತಿಯ ವ್ಯಾಸಂಗ ಪ್ರಮಾಣ ಪತ್ರ, ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ, ಅಂಗ ವೈಕಲ್ಯವಿದ್ದರೆ ಅಂಗವಿಕಲ ಪ್ರಮಾಣ ಪತ,್ರ ಮಕ್ಕಳು ಬೇರೇ ತಾಲೂಕಿನಲ್ಲಿ ಓದುತ್ತಿದ್ದರೆ ಇದೇ ತಾಲೂಕಿನಲ್ಲಿ ವಾಸವಿರುವ ಪೋಷಕರ ರಹವಾಸಿ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಬೇಕು. ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ರೋಣ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಿ.ಆರ್.ಪಿ ಹಾಗೂ ಮುಖ್ಯೋಪಾಧ್ಯಾಯರು ಸರಕಾರಿ ಆದರ್ಶ ವಿದ್ಯಾಲಯ ಇಟಗಿ ಇವರನ್ನು ಸಂಪರ್ಕಿಸಬಹುದಾಗಿದೆ.
ಮೊಬೈಲ್ ಸಂಖ್ಯೆ: 8762487691, 9108118015 ಪ್ರವೇಶ ಪರೀಕ್ಷೆ ಏಪ್ರೀಲ್ 25 ರಂದು ರವಿವಾರ ಬೆಳಿಗ್ಗೆ 10.30ರಿಂದ 01.00 ಗಂಟೆಯವರೆಗೆ ನಡೆಯುತ್ತದೆ.
www.schooleducation.kar.nic.in, wwwvidyavahini.karnataka.gov.in ಈ ವೆಬ್‌ಸೈಟ್ ಬಳಸಿ ಅರ್ಜಿ ಸಲ್ಲಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶೀಘ್ರ 16000 ಪೊಲೀಸ್ ಸಿಬ್ಬಂದಿ ನೇಮಕ: ಸಚಿವ ಬೊಮ್ಮಾಯಿ

ರಾಜ್ಯ ಪೊಲೀಸ್‌ ಇಲಾಖೆಗೆ ನೂತನ 16 ಸಾವಿರ ಪೊಲೀಸ್‌ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಚೆನ್ನಮ್ಮ – ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಕೋಮನಿ ನಡುವೆ ಗಲಾಟೆ!

ಗದಗ : ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರಿನಲ್ಲಿ ನಡೆದಿದೆ.

ಅಂತರ ನಿಗಮ ವರ್ಗಾವಣೆಗೆ ಸಮ್ಮತಿ: ಮಾರ್ಗಸೂಚಿ ಪ್ರಕಟಿಸಿದ ಸಾರಿಗೆ ಇಲಾಖೆ

ಸಾರಿಗೆ ಇಲಾಖೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಲ್ಲಿನ ಮೇಲ್ವಿಚಾರಕರನ್ನು ಬಿಟ್ಟು ಮೂರು ಮತ್ತು ನಾಲ್ಕನೇ ಶ್ರೇಣಿಯ ಕಾಯಂ ನೌಕರರ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿ ಮಂಗಳವಾರ ಆದೇಶ ಹೊರಡಿಸಿದೆ.

ಜೇನುಹುಳುಗಳಂತೆ ಬಂದ ಕುರುಬರು

ನಗರದ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ (ಬಿಐಇಸಿ) ಆವರಣ ಭಾನುವಾರ ಕುರುಬರ ಶಕ್ತಿ ಪ್ರದರ್ಶನ ಕೇಂದ್ರದಂತೆ ಕಾಣುತ್ತಿತ್ತು. ರಾಜ್ಯದ ಮೂಲೆ-ಮೂಲೆಯಿಂದ ಜನಸಾಗರ ಸಮಾವೇಶಕ್ಕೆ ಹರಿದು ಬಂದಿತ್ತು.