ಗದಗ ವೈದ್ಯ ಡಾ.ಪ್ರಕಾಶ ಹೊಸಮನಿ ಹೆಸರಲ್ಲಿ ಹಣಕ್ಕೆ ಬೇಡಿಕೆ!

ಗದಗ: ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸುವ ಮೂಲಕ ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ ಗದಗ ನಗರದಲ್ಲಿ ಬೆಳಕಿಗೆ ಬಂದಿದೆ.

ಇಲ್ಲಿನ ಜಿಮ್ಸ್ ವೈದ್ಯ ಡಾ.ಪ್ರಕಾಶ್ ಹೊಸಮನಿ ಇವರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವೈದ್ಯರ ಸ್ನೇಹಿತರಿಗೆ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. dr.ವೈದ್ಯರ ಸ್ನೇಹಿತರಿಗೆ ಫೇಸ್ಬುಕ್ ಮೂಲಕ ತುರ್ತಾಗಿ 15 ಸಾವಿರ ಬೇಡಿಕೆಯ ಸಂದೇಶ ಕಳುಹಿಸಿದ್ದಾರೆ.

ಈ ವಿಷಯ ಸ್ನೇಹಿತರಿಂದ ಡಾ.ಪ್ರಕಾಶ ಅವರ ಗಮನಕ್ಕೆ ಬಂದಿದೆ. ಕೂಡಲೇ ಎಚ್ಚೆತ್ತುಕೊಂಡ ಡಾ.ಪ್ರಕಾಶ್ ತಮ್ಮೆಲ್ಲ ಸ್ನಾಹಿತರಿಗೆ ಫೇಸ್ಬುಕ್ ಮೂಲಕ ನನ್ನ ಹೆಸರಲ್ಲಿ ಹಣದ ಬೇಡಿಕೆ ಇಟ್ಟು ಸಂದೇಶ ಕಳುಹಿಸಿರುವುದು ನಕಲಿ ಸಂದೇಶಗಳಾಗಿವೆ. ಯಾರು ಕೂಡ ಇಂತಹ ಸಂದೇಶ ನಂಬಿ ಹಣ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. 

ವೈದ್ಯರ ಸಂಬಂಧಿಗೂ ನಕಲಿ ಖಾತೆಯಿಂದ ಹಣದ ಬೇಡಿಕೆ ಬಂದಿದೆ. ಆಗ  ದರೋಡೆಕೋರರಿಂದ ಮೊದಲು 1 ರೂ ಹಾಕಿಸಿಕೊಂಡಿದ್ದಾರೆ. ಈ ವೇಳೆ ಹಣ ಸಂದಾಯವಾದ ನಂತರ ದರೋಡೆಕೋರರ ಯುಟಿಐ ಸಂಖ್ಯೆ ಟ್ರೇಸ್ ಮಾಡಿದಾಗ ದರೋಡೆಕೋರರ ಹೆಸರನ್ನು ಸಹ ತೋರಿಸಿದೆ. ಈ ಮೂಲಕ ಸೈಬರ್ ಕ್ರೈಂ ದರೋಡೆಕೋರರನ್ನು ಪತ್ತೆ ಹಚ್ಚಬಹುದು ಅಂತಾರೆ ಡಾ.ಪ್ರಕಾಶ.

ಜಿಲ್ಲೆಯಲ್ಲಿ ಈ ಹಿಂದೆ ಪೊಲೀಸರನ್ನೂ ಬಿಡದೇ ಫೇಕ್ ಅಕೌಂಟ್ ಬಳಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಜನರನ್ನು ಯಾಮಾರಿಸುವ ಮೂಲಕ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡುವ ಮೂಲಕ ಸುಲಿಗೆ ದಂಧೆಗಿಳಿಯುವಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುವುದು ಡಾ.ಪ್ರಕಾಶ ಹೊಸಮನಿ ಒತ್ತಾಯವಾಗಿದೆ.

Leave a Reply

Your email address will not be published. Required fields are marked *

You May Also Like

ಅಂತರಾಜ್ಯ ಪ್ರಯಾಣಿಕರಿಗೆ ಸರ್ಕಾರದ ಮಾರ್ಗಸೂಚಿ

ಬೆಂಗಳೂರು: ಅಂತರಾಜ್ಯದಿಂದ ಬರುವ ಪ್ರಯಾಣಿಕರಿಗೆ ಸರ್ಕಾರ ಕೆಲವು ಸೂಚನೆಗಳನ್ನು ನೀಡಿದೆ. ಸರ್ಕಾರ ನೀಡಿದ ಸೂಚನೆಗಳು ಈ…

ಗದಗ ಜಿಲ್ಲೆಯಲ್ಲಿ ವಿವಿದೆಡೆ 66400 ರೂ, ಮೌಲ್ಯದ ಅಕ್ರಮ ಮದ್ಯ ವಶ: ಆರೋಪಿಗಳ ಬಂಧನ

ಗದಗ: ಕೋವಿಡ್ 19 ಮಾರ್ಗಸೂಚಿಗಳನ್ನು ಹಾಗೂ ಕಾನೂನು ಉಲ್ಲಂಘನೆ ಮಾಡಿ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದ 15 ಜನ ಆರೋಪಿತರಿಗಳನ್ನು ಬಂಧಿಸಿ , ಅವರ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಿ, ಬಂಧಿತರಿಂದ 66400 ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ

ಹಾನಗಲ್ ಬೈ ಎಲಕ್ಷನ್ ನಲ್ಲಿ ಕಾಂಗ್ರಸ್ ಗೆ ಜಯ

ಹಾನಗಲ್: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 7598 ಮತಗಳ ಅಂತರದಿಂದ ಗೆಲುವು.ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ…

ಚಿತ್ರಕಲಾ, ಜಾನಪದ ವಿವಿ ಸಿಬ್ಬಂದಿ ವೇತನಕ್ಕೆ 11.60 ಲಕ್ಷ ಬಿಡುಗಡೆ: ವಿಪ ಸದಸ್ಯ ಸಂಕನೂರ

ರಾಜ್ಯದಲ್ಲಿ ಅಡ್ಹಾಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೂರು ಚಿತ್ರಕಲಾ ಮಹಾವಿದ್ಯಾಲಯದ ಹಾಗೂ ಜಾನಪದ ವಿಶ್ವವಿದ್ಯಾಲಯ, ಕನ್ನಡ ವಿಶ್ವವಿದ್ಯಾಲಯ ಹಂಪಿ, ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವುಗಳ ಸಿಬ್ಬಂದಿಗಳಿಗೆ 2020-21ನೇ ಸಾಲಿನಲ್ಲಿ ನೀಡಬೇಕಾದಂತಹ ಬಾಕಿ ವೇತನಕ್ಕಾಗಿ ಆರ್ಥಿಕ ಇಲಾಖೆ 11 ಕೋಟಿ 60 ಲಕ್ಷ ಹಣ ಬಿಡುಗಡೆ ಮಾಡಿದೆ ಎಂದು ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ.ಸಂಕನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.