ಗದಗ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 5 ಬಿ.ಎಫ್.ಟಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 ಜಿಲ್ಲೆಯ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು. 10ನೇ ತರಗತಿಯ ಕನಿಷ್ಟ ವಿದ್ಯಾರ್ಹತೆ ಹೊಂದಿರಬೇಕು. 45 ವರ್ಷಕ್ಕಿಂತ ಕಡಿಮೆ ವಯೋಮಿತಿ ಉಳ್ಳವರಾಗಿರಬೇಕು.

ಅರ್ಜಿ ಸಲ್ಲಿಸಲು ಮಾ.25 ಕೊನೆಯ ದಿನವಾಗಿದ್ದು ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಜಿಲ್ಲಾ ಪಂಚಾಯತ ಕಛೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಪಂಚಾಯತ ಕಛೇರಿಗೆ ಸಲ್ಲಿಸಬೇಕೆಂದು ಜಿಲ್ಲಾ ಪಂಚಾಯತ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08372-235947 ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

You May Also Like

ಆಗಸ್ಟ್ 2ರವರೆಗೆ ಗದಗ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ

ಗದಗ: ರಾಜ್ಯ ಸರ್ಕಾರದ ನಿರ್ದೇಶನ ರೀತ್ಯ ಗದಗ ಜಿಲ್ಲೆಯಾದ್ಯಂತ  ಅಗಸ್ಟ 2 ರ ಮಧ್ಯರಾತ್ರಿಯವರೆಗೆ ಪ್ರತಿದಿನ…

ಲಕ್ಷ್ಮೇಶ್ವರ ತಾಲೂಕಿನಲ್ಲಿ 7 ಜನ ಅವಿರೋಧ ಆಯ್ಕೆ: 167 ಸ್ಥಾನಗಳಿಗೆ ಚುನಾವಣೆ

ತಾಲ್ಲೂಕಿನಲ್ಲಿ ಗ್ರಾಮ ಪಂಚಾಯ್ತಿಗಳ ಚುನಾವಣಾ ಕಣ ರಂಗೇರುತ್ತಿದೆ. ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.

ನನ್ನ ಬಳಿ ಸಿಡಿ ಇವೆ ಅಂತ ನಾನು ಹೇಳಿಲ್ಲ: ರಾಜಶೇಖರ ಮುಲಾಲಿ

ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಷಡ್ಯಂತ್ರ ಅಂತಾ ಹೇಳಿದ್ದಾರೆ ಎಂದ ಅವರು, ನಾನು ಎಲ್ಲಿಯೂ ಸಹ ನನ್ನ ಬಳಿ ಸಿಡಿ ಇವೆ ಅಂತಾ ಹೇಳಿಲ್ಲ, ಯಾರ ಬಳಿಯಾದರೂ ನನ್ನ ಹೇಳಿಕೆಯ ದಾಖಲೆ ಇದ್ದರೆ ತೋರಿಸಿ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.

ಲಾಕ್ ಡೌನ್ ನಲ್ಲೂ ನಿಮಗೆ ಬರ್ತಡೇ ಆಚರಣೆ ಬೇಕಿತ್ತಾ ಸಿಪಿಐ ಸಾಹೇಬರೇ??

ದೇಶದಲ್ಲಿ ಲಾಕ್ ಡೌನ್ ಇದ್ದಾಗಲೂ ನಮ್ಮ ರಾಣೆಬೆನ್ನೂರು ಗ್ರಾಮೀಣ ಸಿಪಿಐ ಸುರೇಶ್ ಸಗರಿ ಲಾಕ್ ಡೌನ್ ಮದ್ಯದಲ್ಲೂ ಜನರ ಗುಂಪಿನ ಮದ್ಯೆ ನಿಂತು ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ? ಎಂದು ಜಿಲ್ಲೆಯಲ್ಲೀಗ ಜನ ಮಾತಾಡಿಕೊಳ್ಳುತ್ತಿದ್ದಾರೆ.