ಗೋಕಾಕ್: ರಮೇಶ್ ಜಾರಕಿಹೊಳಿಯವರು ಯಾರ ಮಾತುಗಳನ್ನೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಸಿಡಿ ಪ್ರಕರಣದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಗೋಕಾಕಿನಲ್ಲಿ ಯಾವ ಪರಿಸ್ಥಿತಿ ಇದೆ, ಜಾರಕಿಹೊಳಿ ಕುಟುಂಬ ಯಾರು ನಡೆಸುತ್ತಾರೆ ಎಂಬುದು ಗೊತ್ತಿದೆ. ರಮೇಶ್ ವೈಯಕ್ತಿಕವಾಗಿ ಇದ್ದಾರೆ. ಅಳಿಯ ಅಂಭಿರಾವ್ ಪಾಟೀಲ ಅವರ ಮಾತು ಬಿಟ್ರೆ ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ರಮೇಶ್ ಇಲ್ಲ ಎಂದರು.

ರಮೇಶ್ ಸಿಡಿ ಪ್ರಕರಣದಲ್ಲಿ ಯುವತಿ ಹೇಳಿಕೆ ಅತೀ ಮುಖ್ಯ. ಪೊಲೀಸರು ತನಿಖೆ ನಡೆಸಿ, ಯುವತಿಗೆ ನೊಟೀಸ್ ನೀಡಿ, ಕರೆಸಿ ವಿಚಾರಣೆ ನಡೆಸಬೇಕು. ಬೇರೆ ಯಾರೇ ದೂರು ನೀಡಿದರೂ ಅದರಿಂದ ಪ್ರಯೋಜನವಾಗದು. ಯುವತಿಯ ಹೇಳಿಕೆಯೇ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಪಕ್ಷ ಯಾವುದೇ ಇದ್ದರೂ ಇಂತಹ ಘಟನೆಗಳು ನಡೆಯಬಾರದು. ಹಾಗೇನಾದರೂ ಇದ್ದಲ್ಲಿ ನೇರವಾಗಿ ಪೊಲೀಸ್ ಠಾಣೆಗೆ ದೂರು ನೀಡಿ, ತನಿಖೆ ನಡೆಸುವಂತೆ ಆಗ್ರಹಿಸಬೇಕು. ಇದು ಉತ್ತಮ ವೇದಿಕೆ. ಅದರ ಬದಲಿಗೆ ಇಂತಹ ಪ್ರಕರಣಗಳನ್ನು ಬೀದಿಗೆ ತರಬಾರದು ಎಂದರು.

ಸಿಡಿ ಪ್ರಕರಣ ಮುಗಿದ ವಿಚಾರ. ಈಗಾಗಲೇ ರಮೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಬಂಧಿಸಿದವರಿಗೆ ಪೊಲೀಸರು ನೊಟೀಸ್ ನೀಡಿ, ತನಿಖೆ ನಡೆಸಬೇಕು. ಆಗ ಸತ್ಯಾಂಶ ಹೊರಬಲಿದೆ ಎಂದರು.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸಲು ಮೂಂದುಡಲು ಕಾರಣವೆನು…?

ಉತ್ತರಪ್ರಭಚುನಾವಣೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ ಸಾಕಷ್ಟು ಸಂಚಲನ ಮೂಡಿಸಿದ್ದ. ಸಿದ್ದರಾಮಯ್ಯ, ಡಿಕೆಶಿ…

ಆರ್ ಆರ್ ನಗರ, ಶಿರಾದಲ್ಲಿ ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ!

ಬೆಂಗಳೂರು : ರಾಜ್ಯದಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಫಲಿತಾಂಶ ಇಂದು ಹೊರ ಬರುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿವೆ.

ಮಹಿಳಾ ಸಚಿವೆಗೆ ಐಟಮ್ ಎಂದ ಮಾಜಿ ಸಿಎಂ!

ಭೋಪಾಲ್ : ಮಧ್ಯಪ್ರದೇಶದ ಸಚಿವೆ ಇಮರ್ತಿ ದೇವಿ ಅವರನ್ನು ಮಾಜಿ ಸಿಎಂ ಅಧ್ಯಕ್ಷ ಕಮಲ್ ನಾಥ್ ಅವರು ಐಟಮ್ ಎಂದು ಕರೆದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಟೀಕಾಕಾರರಿಗೆ ಉತ್ತರ ಸಿಕ್ಕಿದೆ ಎಂದು ಭಾವಿಸುತ್ತೇನೆ: ಕೆ.ಸುಧಾಕರ್

ನಮ್ಮ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದವರಿಗೆ ಕ್ರಿಯಾಶೀಲ ಕಾರ್ಯ ಚಟುವಟಿಕೆಗಳ ಮೂಲಕ ಪ್ರತ್ಯುತ್ತರ ನೀಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಎಂಟು ತಿಂಗಳ ರಾಜಕೀಯ ಗ್ರಹಣದ ಬಳಿಕ ಸಚಿವರಾದ ನಮ್ಮನ್ನು ಪ್ರತಿಪಕ್ಷದ ಕೆಲವರು ಲೇವಡಿ ಮಾಡಿದ್ದರು. ಇವರು ಏನು ಮಾಡುತ್ತಾರೋ ನಾವು ನೋಡುತ್ತೇವೆ ಎಂದು ಟೀಕೆಗಳ ಸುರಿಮಳೆ ಗೈದಿದ್ದರು. ಈಗ ಅವರಿಗೆಲ್ಲ ಉತ್ತರ ಸಿಕ್ಕಿರಬೇಕು ಎಂದು ಭಾವಿಸಿದ್ದೇನೆ ಎಂದರು.