ಗೋಕಾಕ್: ರಮೇಶ್ ಜಾರಕಿಹೊಳಿಯವರು ಯಾರ ಮಾತುಗಳನ್ನೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಸಿಡಿ ಪ್ರಕರಣದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಗೋಕಾಕಿನಲ್ಲಿ ಯಾವ ಪರಿಸ್ಥಿತಿ ಇದೆ, ಜಾರಕಿಹೊಳಿ ಕುಟುಂಬ ಯಾರು ನಡೆಸುತ್ತಾರೆ ಎಂಬುದು ಗೊತ್ತಿದೆ. ರಮೇಶ್ ವೈಯಕ್ತಿಕವಾಗಿ ಇದ್ದಾರೆ. ಅಳಿಯ ಅಂಭಿರಾವ್ ಪಾಟೀಲ ಅವರ ಮಾತು ಬಿಟ್ರೆ ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ರಮೇಶ್ ಇಲ್ಲ ಎಂದರು.

ರಮೇಶ್ ಸಿಡಿ ಪ್ರಕರಣದಲ್ಲಿ ಯುವತಿ ಹೇಳಿಕೆ ಅತೀ ಮುಖ್ಯ. ಪೊಲೀಸರು ತನಿಖೆ ನಡೆಸಿ, ಯುವತಿಗೆ ನೊಟೀಸ್ ನೀಡಿ, ಕರೆಸಿ ವಿಚಾರಣೆ ನಡೆಸಬೇಕು. ಬೇರೆ ಯಾರೇ ದೂರು ನೀಡಿದರೂ ಅದರಿಂದ ಪ್ರಯೋಜನವಾಗದು. ಯುವತಿಯ ಹೇಳಿಕೆಯೇ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಪಕ್ಷ ಯಾವುದೇ ಇದ್ದರೂ ಇಂತಹ ಘಟನೆಗಳು ನಡೆಯಬಾರದು. ಹಾಗೇನಾದರೂ ಇದ್ದಲ್ಲಿ ನೇರವಾಗಿ ಪೊಲೀಸ್ ಠಾಣೆಗೆ ದೂರು ನೀಡಿ, ತನಿಖೆ ನಡೆಸುವಂತೆ ಆಗ್ರಹಿಸಬೇಕು. ಇದು ಉತ್ತಮ ವೇದಿಕೆ. ಅದರ ಬದಲಿಗೆ ಇಂತಹ ಪ್ರಕರಣಗಳನ್ನು ಬೀದಿಗೆ ತರಬಾರದು ಎಂದರು.

ಸಿಡಿ ಪ್ರಕರಣ ಮುಗಿದ ವಿಚಾರ. ಈಗಾಗಲೇ ರಮೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಬಂಧಿಸಿದವರಿಗೆ ಪೊಲೀಸರು ನೊಟೀಸ್ ನೀಡಿ, ತನಿಖೆ ನಡೆಸಬೇಕು. ಆಗ ಸತ್ಯಾಂಶ ಹೊರಬಲಿದೆ ಎಂದರು.

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ನಿಗದಿ: ಎರಡು ಹಂತದಲ್ಲಿ ಚುನಾವಣೆ

ರಾಜ್ಯದಲ್ಲಿ ಈಗಾಗಲೇ ಹಳ್ಳಿ ಫೈಟ್ ಗೆ ದಿನಾಂಕ ಯಾವಾಗ ಎನ್ನುವ ಕುತೂಹಲ ಬಹುತೇಕರಲ್ಲಿತ್ತು. ಆದರೆ ಇಂದು ಕೊನೆಗೂ ಚುನಾವಣಾ ಆಯೋಗ ಮೂಹುರ್ತ ಫಿಕ್ಸ್ ಮಾಡಿದ್ದು, ಚುನಾವಣೆ ದಿನಾಂಕಕ್ಕೆ ಎದುರು ನೋಡುತ್ತಿದ್ದವರ ಸಂತಸಕ್ಕೆ ಕಾರಣವಾಗಿದೆ

ರಾಜ್ಯಸಭೆ ಕಲಾಪಕ್ಕೆ ಸರಕಾರವೇ ಹೊಣೆ: ಮಲ್ಲಿಕಾರ್ಜುನ ಖರ್ಗೆ

“ನಮ್ಮ ಧ್ವನಿಯನ್ನು ಹತ್ತಿಕ್ಕಲು ನಾವು ಬಿಡುವುದಿಲ್ಲ. ಇದಕ್ಕೆ ಪ್ರಜಾಪ್ರಭುತ್ವದಲ್ಲಿ ಸ್ಥಾನವಿಲ್ಲ ಮತ್ತು ನಾವು ಮೋದಿಜಿ ಯವರ ಯಾವುದೇ ಸರ್ವಾಧಿಕಾರಕ್ಕೆ ಅವಕಾಶ ನೀಡುವುದಿಲ್ಲ.”

ಶಾಸಕ‌ ಶಿವನಗೌಡ ಬಗ್ಗೆ ಮಾತಾಡುವ ನೈತಿಕತೆ ಪ್ರತಾಪಗೌಡಗೆ ಇಲ್ಲ;ಶಿವಣ್ಣ ನಾಯಕ

ಉತ್ತರಪ್ರಭ ಸುದ್ದಿ ಮಸ್ಕಿ‌: ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕನ ಬಗ್ಗೆ ಮಾತನಾಡಲು ಪ್ರತಾಪಗೌಡ ಪಾಟೀಲಗೆ ಯಾವ…

ಪೊಲೀಸರಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!

ಒಡಿಶಾ : ಅಪ್ರಾಪ್ತ ಬಾಲಕಿಯ ಮೇಲೆ ಪೊಲೀಸ್ ಠಾಣೆಯ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರ ಮಾಡಿರುವ ಅಮಾನವೀಯ…