ಗಜೇಂದ್ರಗಡ: ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು. ಕೇವಲ ಪರೀಕ್ಷೆಯಲ್ಲಿ ಪಾಸಾದರೆ ಸಾಲದು, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಕಾಣಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಕೆಂಚನಗೌಡರ ಹೇಳಿದರು.
ಪಟ್ಟಣದ ಬಿ.ಎಸ್.ಸಿಂಹಾಸನದ ಸರ್ಕಾರಿ ಪ್ರಥಮ ದರ್ಜೆ ವಿದ್ಯಾಲಯದ ಐಕ್ಯೂಎಸಿ ಮತ್ತು ಉದ್ಯೋಗ ಮಾಹಿತಿ ಘಟಕ ಹಾಗೂ ಯುವ ಸಬಲೀಕರಣ, ಕ್ರೀಡಾ ಇಲಾಖೆ, ಯುವ ಸ್ಪಂದನ ಕೇಂದ್ರ ಸಂಯುಕ್ತಾಶ್ರಯದಲ್ಲಿ ಜೀವನ ಕೌಶಲ್ಯ ಮತ್ತು ಅರಿವು ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಉದ್ಯೋಗ ಮಾಹಿತಿ ಘಟಕ ಸಂಚಾಲಕ ಮಹೇಂದ್ರ. ಜಿ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಜ್ಞಾನಕ್ಕಿಂತ ಹೆಚ್ಚಾಗಿ ಜೀವನದ ಕೌಶಲ್ಯಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ಬದುಕುವ ಕೌಶಲ್ಯಗಳನ್ನು ಬೆಳೆಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಗಳಾಗಳು ಸಾಧ್ಯ. ಜಗತ್ತಿನಲ್ಲಿರುವ ಪ್ರತಿ ವ್ಯಕ್ತಿಗೂ ಸಮಸ್ಯೆ, ಒತ್ತಡಗಳು ಇರುತ್ತವೆ. ಪ್ರತಿಯೊಂದು ಸಮಸ್ಯೆಗಳಿಗೂ ತನ್ನದೇ ಆದ ವ್ಯಾಪ್ತಿಯಿರುತ್ತದೆ. ಆ ವ್ಯಾಪ್ತಿ ಅಡಿಯಲ್ಲಿ ನಾವು ಸಮಸ್ಯೆ ಪರಿಹರಿಸಿಕೊಳ್ಳಲು ಪ್ರಯತ್ನಿಸಬೇಕು ಎಂದರು.
ಯುವ ಸ್ಪಂದನ ಕೇಂದ್ರ ತರಬೇತಿ ಅಧಿಕಾರಿ ಚೇತನ್, ಡಾ.ಪಿ.ಎಚ್.ಕ್ಯಾರಕೊಪ್ಪ, ಲಕ್ಷ್ಮಿ ಪಿ, ಲಕ್ಕಣ್ಣ ಈ.ಎನ್, ಸರಸ್ವತಿ ಕೆ, ಡಾ.ಕರುಣೇಶ್‌ಕುಮಾರ್ ಕೆ, ಹಿತೇಶ್ ಬಿ, ಸಿದ್ದೇಶ ಕೆ, ರೂಪ ಟಿ.ಪಿ, ಮಹಾಂತೇಶ ಜೀವಣ್ಣವರ, ಆರ್.ವಿ.ಸುಂಕದ, ಬಿ.ವಿ.ಮನವಳ್ಳಿ ಇದ್ದರು.

Leave a Reply

Your email address will not be published. Required fields are marked *

You May Also Like

ಗೋಂಧಳಿ ಸಮಾಜಕ್ಕೆ ವಿಶೇಷ ಪ್ಯಾಕೇಜ್ ನೀಡಲು ವಿಠಲ್ ಗಣಾಚಾರಿ ಒತ್ತಾಯ

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾದವರ ನೆರವಿಗೆ 1600 ಕೋಟಿ ರೂಗಳ ವಿಶೇಷ ಪ್ಯಾಕೇಜ್ ನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದು ಅಭಿನಂದನಾರ್ಹ. ಆದರೆ ಈ ಪ್ಯಾಕೇಜಿನಲ್ಲಿ ಗೋಂಧಳಿ ಸಮಾಜಕ್ಕೆ ಹೆಚ್ಚಿನ ನೆರವು ನೀಡಬೇಕು ಎಂದು ಅಖಿಲ ಕರ್ನಾಟಕ ಗೋಂಧಳಿ ಸಮಾಜ ಸಂಘದ ರಾಜ್ಯಾಧ್ಯಕ್ಷ ವಿಠಲ್ ಗಣಾಚಾರಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಗದಗ ಜಿಲ್ಲೆಯಲ್ಲಿಂದು 04 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 232…

ಎಬಿವಿಪಿಯಿಂದ ಕಾಲೇಜು ಕಟ್ಟಡದ ದುರಸ್ತಿಗಾಗಿ ಪ್ರತಿಭಟನೆ.

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸರಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು…

ಐಪಿಎಲ್ ಬೆಟ್ಟಿಂಗ್ : ಗದಗನಲ್ಲಿ ಕೆಲವರ ಬಂಧನ

ಐಪಿಎಲ್ ಆರಂಭವಾದರೆ ಜೊತೆಗೆ ಬೆಟ್ಟಿಂಗ್ ದಂಧೆಗೂ ರೆಕ್ಕೆ ಪುಕ್ಕ ಬರುತ್ತವೆ. ಗದಗ ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.