ಗಜೇಂದ್ರಗಡ: ಸಾಮೂಹಿಕ ವಿವಾಹಗಳಿಂದ ಸಮಾನತೆ ಸಾರುವುದರ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ. ನವಜೋಡಿಗಳು ಆದರ್ಶ ದಂಪತಿಗಳಾಗಿ ಚಿಕ್ಕ ಹಾಗೂ ಚೊಕ್ಕ ಸಂಸಾರ ನಡೆಸಿ, ಮುಂದೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣದ, ಸಂಸ್ಕಾರ ನೀಡುವ ಸಂಕಲ್ಪ ಮಾಡಬೇಕು ಎಂದು ಮೈಸೂರು ಸಂಸ್ಥಾನ ಮಠದ ವಿಜಯ ಮಹಾಂತ ಸ್ವಾಮೀಜಿ ಹೇಳಿದರು.
ಸಮೀಪದ ಕುಂಟೋಜಿ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರರ ೫೬ನೇ ವರ್ಷದ ಮಹಾ ಪುರಾಣ, ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಆಶಿರ್ವಚನ ನೀಡಿದರು. ನಮ್ಮ ಸಂಸ್ಕ್ರತಿ -ಸಂಸ್ಕಾರಗಳನ್ನು ಅನುಸರಿಸುವ ಮೂಲಕ ಸತಿ-ಪತಿಗಳು ಪರಸ್ಪರ ಅರಿತುಕೊಂಡು ಜೀವನ ನಡೆಸಬೇಕು ಎಂದರು.
ಮಾಜಿ ಶಾಸಕ ಜಿ.ಎಸ್.ಪಾಟೀಲ ಮಾತನಾಡಿ, ಗ್ರಾಮದಲ್ಲಿ ಹಲವು ವರ್ಷಗಳಿಂದ ಎಲ್ಲರೂ ಒಂದಾಗಿ ಶರಣರ ಪುರಾಣ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗಿದೆ. ಎಲ್ಲರೂ ಶರಣರ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.
ಚಳಗೇರಿಯ ವೀರಸಂಗಮೇಶ್ವರ ಸ್ವಾಮೀಜಿ, ಯಲಬುರ್ಗಾ ಸಿದ್ದರಾಮೇಶ್ವರ ಮಠದ ಸಿದ್ದರಾಮೇಶ್ವರ ಸ್ವಾಮೀಜಿ, ಯಲಬುರ್ಗಾ ಶ್ರೀಧರ ಮುರಡಿ ಮಠದ ಬಸವಲಿಂಗೇಶ್ವರ ಸ್ವಾಮೀಜಿ, ಜಿಗೇರಿಯ ಗುರುಸಿದ್ದೇಶ್ವರ ಸ್ವಾಮೀಜಿ, ಬಾದಿಮನಾಳ ಶಿವಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮುಖಂಡರಾದ ಅಂದಪ್ಪ ಬಿಚ್ಚೂರ, ಹೆಚ್.ಎಸ್.ಸೋಂಪುರ, ಪ್ರಶಾಂತ ರಾಠೋಡ, ವೀರಣ್ಣ ಕಾರಡಗಿಮಠ, ಕುಮಾರ ಹಿರೇಮಠ, ಶರಣಪ್ಪ ಕತ್ತಿ, ಮುತ್ತಪ್ಪ ಗೋನಾಳ, ಮಲ್ಲಯ್ಯ ಹಿರೇಮಠ, ತೋಟಯ್ಯ ಹಿರೇಮಠ, ಹೇಮಂತ ಪೂಜಾರ, ಬಸಪ್ಪ ಚೂಟಿ ಇದ್ದರು.

Leave a Reply

Your email address will not be published. Required fields are marked *

You May Also Like

FG Rs.5,000 ಪರಿಹಾರ ನಿಧಿ ಹೆಸರಲ್ಲಿ ನಕಲಿ ಸಂದೇಶ ವೈರಲ್

ಆನ್ ಲೈನ್ ನಲ್ಲಿ ಹಣ ವಂಚನೆ, ನಕಲಿ ಐಡಿ ಬಳಸಿ ವಂಚನೆ ಇತ್ಯಾದಿ ಸುದ್ದಿಗಳಿಗೇನು ಬರವಿಲ್ಲ. ಆದರೆ, ಕೆಲವರು ಸರ್ಕಾರದ ಪರವಾಗಿ ಜನಾಭಿಪ್ರಾಯ ರೂಪಿಸಲು ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಾರೆ.

ರಾಜ್ಯದಲ್ಲಿಂದು 5172 ಪಾಸಿಟಿವ್!: ಜಿಲ್ಲಾವಾರ ವಿವರ

ರಾಜ್ಯದಲ್ಲಿಂದು 5172 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 129287 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ

ನಗರ ಸಭೆ ಚುನಾವಣೆ: 6ನೇ ವಾರ್ಡನಲ್ಲಿ ಕಾಂಗ್ರೇಸಗೆ ಜಯ

ಗದಗ ಬೇಟಗೇರಿ:ನಗರ ಸಭೆ 6 ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 6ನೇ  ವಾರ್ಡನಲ್ಲಿ…

ಕೊರೊನಾ ಜನರಲ್ಲಿ ಆತಂಕ ಬೇಡ: ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾದಿಂದಾಗಿ ಪರಿಸ್ಥಿತಿ ಹದಗೆಟ್ಟಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ಬೆಂಗಳೂರು ತೊರೆಯಬೇಡಿ…