ಗದಗ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಜಿಲ್ಲೆಯ ಶಾಲಾ ಹಾಗೂ ಕಾಲೇಜಿನಲ್ಲಿ ನಾನಾ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.
ಅರ್ಜಿ ಸಲ್ಲಿಸಲು ಮಾ.31 ಕೊನೆಯ ದಿನವಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ http://ssp.karnataka.gov.in ಅಥವಾ http://ssp.karnataka.gov.in/STS/ ಮೆಟ್ರಿಕ್ ನಂತರದ ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿವೇತನಕ್ಕೆ https:ssp.postmatric.karnataka.gov.in/ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕ ಪಂಚಾಯತಿ ಆವರಣ, ಮುಂಡರಗಿ ದೂ.ಸಂ. 08371-262911, ಮೌಲಾನಾ ಆಝಾದ ಭವನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ದೂ.ಸಂ 08372-297494, ತಾಲೂಕ ಪಂಚಾಯತಿ ಆವರಣ, ರೋಣ 08381-267258, ನರಗುಂದ ತಹಶೀಲ್ದಾರ ಕಾರ್ಯಾಲಯ ರೂ.ನಂ.20, ದೂ.ಸಂ. 08377-245411, ತಾಲೂಕ ಪಂಚಾಯತ ಹತ್ತಿರ, ಶಿರಹಟ್ಟಿ. 08487-242810 ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ರವಿ. ಎಲ್.ಗುಂಜೀಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.