ಗದಗ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಜಿಲ್ಲೆಯ ಶಾಲಾ ಹಾಗೂ ಕಾಲೇಜಿನಲ್ಲಿ ನಾನಾ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರ‍್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.

 ಅರ್ಜಿ ಸಲ್ಲಿಸಲು ಮಾ.31 ಕೊನೆಯ ದಿನವಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ http://ssp.karnataka.gov.in ಅಥವಾ http://ssp.karnataka.gov.in/STS/ ಮೆಟ್ರಿಕ್ ನಂತರದ ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿವೇತನಕ್ಕೆ https:ssp.postmatric.karnataka.gov.in/ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕ ಪಂಚಾಯತಿ ಆವರಣ, ಮುಂಡರಗಿ ದೂ.ಸಂ. 08371-262911, ಮೌಲಾನಾ ಆಝಾದ ಭವನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ದೂ.ಸಂ 08372-297494, ತಾಲೂಕ ಪಂಚಾಯತಿ ಆವರಣ, ರೋಣ 08381-267258, ನರಗುಂದ ತಹಶೀಲ್ದಾರ ಕಾರ್ಯಾಲಯ ರೂ.ನಂ.20, ದೂ.ಸಂ. 08377-245411, ತಾಲೂಕ ಪಂಚಾಯತ ಹತ್ತಿರ, ಶಿರಹಟ್ಟಿ. 08487-242810 ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ರವಿ. ಎಲ್.ಗುಂಜೀಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅತಿಥಿ ಉಪನ್ಯಾಸಕರಿಗೆ ಶುಭ ಸುದ್ದಿ- ಸೇವೆ ಮುಂದುವರೆಸಿ ಆದೇಶ

ಅತಿಥಿ ಉಪನ್ಯಾಸಕರ ಸೇವೆಯನ್ನು 2020-21 ನೇ ಸಾಲಿಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ

ಅಖಂಡ ಕರ್ನಾಟಕ ಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಗಜೇಂದ್ರಗಡ ಹಾಗೂ ರೋಣ ತಾಲೂಕಾ ಗೊಲ್ಲ ಸಮಾಜ ಬಾಂಧವರು ಪಟ್ಟಣದ ತಹಶೀಲ್ದಾರ ಮೂಲಕ ಸೋಮವಾರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಲಕ್ಷ್ಮೇಶ್ವರ ನಗರಸಭೆಯಿಂದ ಮರೆಯಾಗಿ ಹೋದ ಅಭಿವೃದ್ಧಿ ಕಾಮಗಾರಿಗಳು

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ನಾಲ್ಕನೇ ವಾರ್ಡನಲ್ಲಿ ರಸ್ತೆ ದುರಸ್ಥಿ ಮತ್ತು ನೀರಿನ ಹಾಹಾಕಾರ ಎದ್ದು…

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 348. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4804 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2824 ಸಕ್ರೀಯ ಪ್ರಕರಣಗಳಿವೆ.