ಲಕ್ಷ್ಮೇಶ್ವರ: ಕೊರೊನಾದಿಂದಾಗಿ ಲಾಕ್‌ಡೌನ್ ಮಾಡಲಾಗಿತ್ತು. ಇದಾದ ನಂತರ ಇತ್ತಿಚೆಗಷ್ಟೆ ಶಾಲೆಗಳು ಆರಂಭಿಸಲಾಗಿದೆ. ಆದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಹರಸಾಹಸ ಪಡುವಂತಾಗಿದೆ. ಇದಕ್ಕೆ ಕಾರಣ ಬಸ್ ಸೌಲಭ್ಯ ಕೊರತೆ.

ತಾಲೂಕಿನ ಕುಂದ್ರಳ್ಳಿ ಹಾಗು ತಾಂಡಾ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯವಿಲ್ಲದ ಕಾರಣ ಅಂದಾಜು 3 ಕಿಮಿ ನಡೆದುಕೊಂಡು ಶಾಲೆಗೆ ಹೋಗಿ ಬರುವಂತಾಗಿದೆಯಂತೆ. ಕುಂದ್ರಳ್ಳಿ ತಾಂಡಾದಲ್ಲಿ ಅಂದಾಜು 70 ವಿದ್ಯಾರ್ಥಿಗಳು 6 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಸಮೀಪದ ಬಟ್ಟೂರು ಹಾಗು ಕುಂದ್ರಳ್ಳಿಗೆ ಶಾಲೆಗೆ ಹೋಗುತ್ತಾರೆ. ಇನ್ನು ಕುಂದ್ರಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆ ಮಾತ್ರ ಇರುವುದರಿಂದ ಪ್ರೌಢಶಾಲೆಗೆ ಬಟ್ಟೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಹೋಗಬೇಕಾದ ಅನಿವಾರ್ಯತೆ ಇದೆ.

ಬಸ್ ಸೌಲಭ್ಯ ಕೊಡಿ

ಈ ಹಿಂದೇ ಸರಿಯಾದ ಸಮಯಕ್ಕೆ ಬಸ್ ಸಂಚಾರವಿತ್ತು. ಲಾಕ್‌ಡೌನ್ ನಂತರ ಈ ಸಮಸ್ಯೆಯಾಗಿದೆ. ಶಾಲೆಯ ಸಮಯಕ್ಕೆ ಸರಿಯಾಗಿ ಬೆಳಿಗ್ಗೆ ಹಾಗು ಸಂಜೆ ಬಸ್ ಸಂಚಾರ ಒದಗಿಸಿಕೊಡುವ ಮೂಲಕ ನಮ್ಮ ಶಿಕ್ಷಣಕ್ಕೆ ಅನುಕೂಲ ಮಾಡಿ ಕೊಡಿ ಎನ್ನುವುದು ಇಲ್ಲಿನ ವಿದ್ಯಾರ್ಥಿಗಳ ಆಗ್ರಹವಾಗಿದೆ.

 ಕುಂದ್ರಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆಗೆ ಬರುವ ವಿದ್ಯಾರ್ಥಿಗಳು ತಾಂಡಾದಿAದ ಅಂದಾಜು 1.5 ಕಿಲೋಮೀಟರ್ ನಡೆದುಕೊಂಡೇ ಬರಬೇಕು. ಇನ್ನು ಪ್ರೌಢಶಾಲೆಗೆ ಕುಂದ್ರಳ್ಳಿ ಹಾಗು ತಾಂಡಾ ಎರಡೂ ಗ್ರಾಮಗಳ ವಿದ್ಯಾರ್ಥಿಗಳು ಬಟ್ಟೂರು ಗ್ರಾಮಕ್ಕೆ ನಡೆದುಕೊಂಡೇ ಹೋಗಬೇಕು. ಇದರಿಂದಾಗಿ ಶಾಲೆಯ ಅವಧಿಯಲ್ಲಿ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯವಿಲ್ಲದ ಕಾರಣ ನಡೆದುಕೊಂಡೇ ಹೋಗಬೇಕಾಗಿದೆ ಎನ್ನುವುದು ವಿದ್ಯಾರ್ಥಿಗಳ ಅಳಲಾಗಿದೆ.

Leave a Reply

Your email address will not be published. Required fields are marked *

You May Also Like

ಹಿಂದೂ ಅಂತ ಭಾರತೀಯ ಭಾಷೆಯಲ್ಲಿ ಇಲ್ಲ: ಸಾಹಿತಿ ಸೂಳಿಭಾವಿ

ಉತ್ತರಪ್ರಭ ಸುದ್ದಿಗದಗ: ಹಿಂದು ಪದ ಭಾರತೀಯದ್ದಲ್ಲ ಅದು ಪರ್ಷಿಯನ್ ನಿಂದ ಬಂದಿದೆ. ಪರ್ಷಿಯನ್ ಹಾಗೂ ಇಸ್ಲಾಂದಲ್ಲಿ…

ಚಿತ್ರಮಂದಿರಗಳಿಗೆ ನಿರ್ಬಂಧ ಬೇಡ : ಪುನೀತ್ ಮನವಿ

ಚಲನಚಿತ್ರ ಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ಮಾಡಿಕೊಡಬೇಕು ಎಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿನಯ್ ಕುಲಕರ್ಣಿ, ಎಂ.ಬಿ.ಪಾಟೀಲ್ ಬಿಜೆಪಿ ಸೇರ್ಪಡೆ ವಿಚಾರ ಪಕ್ಷದಲ್ಲಿ ಚರ್ಚೆ ನಡೆದಿಲ್ಲ

ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಎಂ.ಬಿ ಪಾಟೀಲ್ ಬಿಜೆಪಿ ಸೇರ್ಪಡೆ ವಿಚಾರ ಕುರಿತು ನಮ್ಮ ಪಕ್ಷದಲ್ಲಿ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಜಗದೀಶ್ ಶೆಟ್ಟರ್ ಹಾಗೂ ನನ್ನ ಜೊತೆ ಯಾವುದೇ ನಾಯಕರು ಮಾತನಾಡಿಲ್ಲ. ನಮ್ಮ ಜೊತೆ ಚರ್ಚಿಸದೆ ಹೇಗೆ ಅವರನ್ನು ಪಕ್ಷಕ್ಕೆ ಕರೆದುಕೊಳ್ಳಲು ಸಾದ್ಯವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.

ಕೋವಿಡ್ ಸಂಬಂಧ ದಿನಕ್ಕೊಂದು ನಿರ್ಧಾರ ಅಪಾಯಕಾರಿ: ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್-19 ನಿಯಂತ್ರಣದ ವಿಷಯದಲ್ಲಿ ಕರ್ನಾಟಕದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೈಗೊಳ್ಳುತ್ತಿರುವ ದಿನಕ್ಕೊಂದು ನಿರ್ಧಾರ ಅಪಾಯಕಾರಿಯಾದುದು…