ಲಕ್ಷ್ಮೇಶ್ವರ: ಕೊರೊನಾದಿಂದಾಗಿ ಲಾಕ್‌ಡೌನ್ ಮಾಡಲಾಗಿತ್ತು. ಇದಾದ ನಂತರ ಇತ್ತಿಚೆಗಷ್ಟೆ ಶಾಲೆಗಳು ಆರಂಭಿಸಲಾಗಿದೆ. ಆದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಹರಸಾಹಸ ಪಡುವಂತಾಗಿದೆ. ಇದಕ್ಕೆ ಕಾರಣ ಬಸ್ ಸೌಲಭ್ಯ ಕೊರತೆ.

ತಾಲೂಕಿನ ಕುಂದ್ರಳ್ಳಿ ಹಾಗು ತಾಂಡಾ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯವಿಲ್ಲದ ಕಾರಣ ಅಂದಾಜು 3 ಕಿಮಿ ನಡೆದುಕೊಂಡು ಶಾಲೆಗೆ ಹೋಗಿ ಬರುವಂತಾಗಿದೆಯಂತೆ. ಕುಂದ್ರಳ್ಳಿ ತಾಂಡಾದಲ್ಲಿ ಅಂದಾಜು 70 ವಿದ್ಯಾರ್ಥಿಗಳು 6 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಸಮೀಪದ ಬಟ್ಟೂರು ಹಾಗು ಕುಂದ್ರಳ್ಳಿಗೆ ಶಾಲೆಗೆ ಹೋಗುತ್ತಾರೆ. ಇನ್ನು ಕುಂದ್ರಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆ ಮಾತ್ರ ಇರುವುದರಿಂದ ಪ್ರೌಢಶಾಲೆಗೆ ಬಟ್ಟೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಹೋಗಬೇಕಾದ ಅನಿವಾರ್ಯತೆ ಇದೆ.

ಬಸ್ ಸೌಲಭ್ಯ ಕೊಡಿ

ಈ ಹಿಂದೇ ಸರಿಯಾದ ಸಮಯಕ್ಕೆ ಬಸ್ ಸಂಚಾರವಿತ್ತು. ಲಾಕ್‌ಡೌನ್ ನಂತರ ಈ ಸಮಸ್ಯೆಯಾಗಿದೆ. ಶಾಲೆಯ ಸಮಯಕ್ಕೆ ಸರಿಯಾಗಿ ಬೆಳಿಗ್ಗೆ ಹಾಗು ಸಂಜೆ ಬಸ್ ಸಂಚಾರ ಒದಗಿಸಿಕೊಡುವ ಮೂಲಕ ನಮ್ಮ ಶಿಕ್ಷಣಕ್ಕೆ ಅನುಕೂಲ ಮಾಡಿ ಕೊಡಿ ಎನ್ನುವುದು ಇಲ್ಲಿನ ವಿದ್ಯಾರ್ಥಿಗಳ ಆಗ್ರಹವಾಗಿದೆ.

 ಕುಂದ್ರಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆಗೆ ಬರುವ ವಿದ್ಯಾರ್ಥಿಗಳು ತಾಂಡಾದಿAದ ಅಂದಾಜು 1.5 ಕಿಲೋಮೀಟರ್ ನಡೆದುಕೊಂಡೇ ಬರಬೇಕು. ಇನ್ನು ಪ್ರೌಢಶಾಲೆಗೆ ಕುಂದ್ರಳ್ಳಿ ಹಾಗು ತಾಂಡಾ ಎರಡೂ ಗ್ರಾಮಗಳ ವಿದ್ಯಾರ್ಥಿಗಳು ಬಟ್ಟೂರು ಗ್ರಾಮಕ್ಕೆ ನಡೆದುಕೊಂಡೇ ಹೋಗಬೇಕು. ಇದರಿಂದಾಗಿ ಶಾಲೆಯ ಅವಧಿಯಲ್ಲಿ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯವಿಲ್ಲದ ಕಾರಣ ನಡೆದುಕೊಂಡೇ ಹೋಗಬೇಕಾಗಿದೆ ಎನ್ನುವುದು ವಿದ್ಯಾರ್ಥಿಗಳ ಅಳಲಾಗಿದೆ.

Leave a Reply

Your email address will not be published. Required fields are marked *

You May Also Like

ಸಿಡಿ ಪ್ರಕರಣ ನ್ಯಾಯಾಲಯಕ್ಕೆ ಮೊರೆ ಹೋದ ಆರು ಸಚಿವರು : ಇಂದು ಅರ್ಜಿ ವಿಚಾರಣೆ

ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಹೊರಬೀಳುತ್ತಿದ್ದಂತೆ ರಾಜ್ಯದ 6 ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ಇಂದು ಇನ್ನೂ 6 ಸಚಿವರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ ತಿಳಿಸಿದ್ದಾರೆ.

ಹೆಚ್ಚಿದ ಕಾಂಗ್ರೆಸ್ ಆಕಾಂಕ್ಷಿಗಳ ಸಂಖ್ಯೆ: ಮುಂದೂಡಿದ ಅರ್ಜಿ ಸಲ್ಲಿಕೆ

ಉತ್ತರಪ್ರಭಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಮುಂದಿನ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ…

ರಾಜ್ಯದಲ್ಲಿ ಸಿಎಮ್ ಬದಲಾವಣೆಗೆ ಪ್ರಯತ್ನ ನಡೆದಿಲ್ಲಾ: ಸಚಿವ ಶಟ್ಟರ್

ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಯತ್ನ ನಡೆದಿಲ್ಲ. ಈ ವರೆಗೆ ರಾಜ್ಯ, ನಾಯಕರ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವ ಖಚಿತ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನರೆಗಲ್ಲ: ಪ.ಪಂ ಬಜೆಟ್ ಪೂರ್ವಭಾವಿ ಸಭೆ ₹2166000 ಉಳಿತಾಯ ಬಜೆಟ್

ಅಧ್ಯಕ್ಷರಿಗೆ ತಿಳಿಸದೆ ಅಧಿಕಾರ ವಹಿಸಿಕೊಂಡ ಮುಖ್ಯಾಧಿಕಾರಿ: ಎಂದು ಸದಸ್ಯ ಮಾಲಗಿತ್ತಿಮಠ ಆರೋಪ..! ಸದಸ್ಯರು ಜೀವಂತ ಇದ್ದಾರಾ…