ಲಕ್ಷ್ಮೇಶ್ವರ: ಕೊರೊನಾದಿಂದಾಗಿ ಲಾಕ್‌ಡೌನ್ ಮಾಡಲಾಗಿತ್ತು. ಇದಾದ ನಂತರ ಇತ್ತಿಚೆಗಷ್ಟೆ ಶಾಲೆಗಳು ಆರಂಭಿಸಲಾಗಿದೆ. ಆದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಹರಸಾಹಸ ಪಡುವಂತಾಗಿದೆ. ಇದಕ್ಕೆ ಕಾರಣ ಬಸ್ ಸೌಲಭ್ಯ ಕೊರತೆ.

ತಾಲೂಕಿನ ಕುಂದ್ರಳ್ಳಿ ಹಾಗು ತಾಂಡಾ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯವಿಲ್ಲದ ಕಾರಣ ಅಂದಾಜು 3 ಕಿಮಿ ನಡೆದುಕೊಂಡು ಶಾಲೆಗೆ ಹೋಗಿ ಬರುವಂತಾಗಿದೆಯಂತೆ. ಕುಂದ್ರಳ್ಳಿ ತಾಂಡಾದಲ್ಲಿ ಅಂದಾಜು 70 ವಿದ್ಯಾರ್ಥಿಗಳು 6 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಸಮೀಪದ ಬಟ್ಟೂರು ಹಾಗು ಕುಂದ್ರಳ್ಳಿಗೆ ಶಾಲೆಗೆ ಹೋಗುತ್ತಾರೆ. ಇನ್ನು ಕುಂದ್ರಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆ ಮಾತ್ರ ಇರುವುದರಿಂದ ಪ್ರೌಢಶಾಲೆಗೆ ಬಟ್ಟೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಹೋಗಬೇಕಾದ ಅನಿವಾರ್ಯತೆ ಇದೆ.

ಬಸ್ ಸೌಲಭ್ಯ ಕೊಡಿ

ಈ ಹಿಂದೇ ಸರಿಯಾದ ಸಮಯಕ್ಕೆ ಬಸ್ ಸಂಚಾರವಿತ್ತು. ಲಾಕ್‌ಡೌನ್ ನಂತರ ಈ ಸಮಸ್ಯೆಯಾಗಿದೆ. ಶಾಲೆಯ ಸಮಯಕ್ಕೆ ಸರಿಯಾಗಿ ಬೆಳಿಗ್ಗೆ ಹಾಗು ಸಂಜೆ ಬಸ್ ಸಂಚಾರ ಒದಗಿಸಿಕೊಡುವ ಮೂಲಕ ನಮ್ಮ ಶಿಕ್ಷಣಕ್ಕೆ ಅನುಕೂಲ ಮಾಡಿ ಕೊಡಿ ಎನ್ನುವುದು ಇಲ್ಲಿನ ವಿದ್ಯಾರ್ಥಿಗಳ ಆಗ್ರಹವಾಗಿದೆ.

 ಕುಂದ್ರಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆಗೆ ಬರುವ ವಿದ್ಯಾರ್ಥಿಗಳು ತಾಂಡಾದಿAದ ಅಂದಾಜು 1.5 ಕಿಲೋಮೀಟರ್ ನಡೆದುಕೊಂಡೇ ಬರಬೇಕು. ಇನ್ನು ಪ್ರೌಢಶಾಲೆಗೆ ಕುಂದ್ರಳ್ಳಿ ಹಾಗು ತಾಂಡಾ ಎರಡೂ ಗ್ರಾಮಗಳ ವಿದ್ಯಾರ್ಥಿಗಳು ಬಟ್ಟೂರು ಗ್ರಾಮಕ್ಕೆ ನಡೆದುಕೊಂಡೇ ಹೋಗಬೇಕು. ಇದರಿಂದಾಗಿ ಶಾಲೆಯ ಅವಧಿಯಲ್ಲಿ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯವಿಲ್ಲದ ಕಾರಣ ನಡೆದುಕೊಂಡೇ ಹೋಗಬೇಕಾಗಿದೆ ಎನ್ನುವುದು ವಿದ್ಯಾರ್ಥಿಗಳ ಅಳಲಾಗಿದೆ.

Leave a Reply

Your email address will not be published. Required fields are marked *

You May Also Like

ಅಂದರ್ ಬಾಹರ್: ಪೋಲಿಸರ್ ಕಾರ್ಯಾಚರಣೆ : 14 ಲಕ್ಷ ರೂ. ಜಪ್ತಿ, 17 ಜನರ ಮೇಲೆ ಪ್ರಕರಣ ದಾಖಲು, ಸರ್ಕಾರಿ ನೌಕರ ಭಾಗಿ

ಉತ್ತರಪ್ರಭ ಮುಂಡರಗಿ: ಗದಗ ಪೊಲೀಸರು ಅಂದರ್ ಬಾಹರ್ ಅಡ್ಡೆ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ…

ಸರ್ಕಾರಿ ನೌಕರರು ಡಿ.31ರೊಳಗೆ ಆಸ್ತಿ ಹೊಣೆಗಾರಿಕೆ ಸಲ್ಲಿಸಲು ಸೂಚನೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆರ್ಥಿಕ ವರ್ಷದ ಬದಲಿಗೆ ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಆಸ್ತಿ ಹೊಣೆಗಾರಿಕೆ ವಿವರಗಳನ್ನು ಸಲ್ಲಿಸುವಂತೆ ಆದೇಶ ಹೊರಡಿಸಿದೆ.

ಕೊರೋನಾ ಸೊಂಕು: ಪೊಲೀಸರಲ್ಲೂ ಆತಂಕ

ಕೊರೋನಾ ಸೊಂಕು: ಪೊಲೀಸರಲ್ಲೂ ಆತಂಕ ಬೆಂಗಳೂರು : ಬೇಗೂರು ಪೊಲೀಸ್ ಠಾಣೆಯ ಪೇದೆಯೊಬ್ಬರಿಗೆ ಕೊರೊನಾ ಸೋಂಕು…

ರೋಣದ ‘ಕೆಜಿ ಬಾಸ್’ಗೆ ಟಿಕೆಟ್ ಬೇಕಾ ಎಂದ ರಾಜಾಹುಲಿ: ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ ಬಂಡಿ, ಯಡ್ಡಿ ಮಾತು..!

ಉತ್ತರಪ್ರಭ ಸುದ್ದಿಗದಗ: ಜಿಲ್ಲೆ ಶಿರಹಟ್ಟಿ ಪಟ್ಟಣದಲ್ಲಿ ನಿನ್ನೆ ನಡೆದ ಅದ್ಧೂರಿ ಸಮಾವೇಶ ಕೇಸರಿ ಪಾಳೆಯದಲ್ಲಿ ಹೊಸ…