ದೆಹಲಿ: ನಾಲ್ವರು ಯುವಕರ ಜೊತೆ ಓಡಿಹೋಗಿದ್ದ ಹುಡುಗಿಯೊಬ್ಬಳು ಸಿಕ್ಕಿ ಬಿದ್ದ ವೇಳೆ ಯಾರೊಂದಿಗೆ ವಿವಾಹ ಮಾಡಿಸಬೇಕೆಂಬ ಗೊಂದಲಕ್ಕೆ ಸಿಲುಕಿದ ಗ್ರಾಮಸ್ಥರು ಅಂತಿಮವಾಗಿ ನಾಲ್ವರು ಯುವಕರ ಹೆಸರನ್ನು ಚೀಟಿ ಒಂದರಲ್ಲಿ ಬರೆದು ಲಾಟರಿ ಎತ್ತುವ ಮೂಲಕ ಅದರಲ್ಲಿದ್ದ ಹೆಸರಿನವನ ಮದುವೆ ಮಾಡಿಸಿದ್ದಾರೆ.

ಇಂತಹುದೊಂದು ವಿಚಿತ್ರ ಘಟನೆ ಉತ್ತರಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಅಜೀಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, 5 ದಿನವಾದರೂ ಮಗಳು ಪತ್ತೆಯಾಗದಿದ್ದಾಗ ಪೋಷಕರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

ಪೊಲೀಸರ ಜೊತೆ ಗ್ರಾಮಸ್ಥರು ಸಹ ಹುಡುಕಾಟಕ್ಕೆ ಮುಂದಾಗಿದ್ದು, ಅಂತಿಮವಾಗಿ ಹುಡುಗಿ ನಾಲ್ವರು ಯುವಕರೊಂದಿಗೆ ಸಿಕ್ಕಿಬಿದ್ದಿದ್ದಳು.ಆಗ ಯಾರೊಂದಿಗೆ ವಿವಾಹ ಮಾಡಿಸಬೇಕೆಂಬ ಗೊಂದಲ ಹುಡುಗಿ ಪೋಷಕರು ಹಾಗೂ ಗ್ರಾಮಸ್ಥರನ್ನು ಕಾಡಿತ್ತು. ಯುವಕರನ್ನು ಕೇಳಿದರೆ ಯಾರೊಬ್ಬರೂ ವಿವಾಹವಾಗಲು ಮುಂದೆ ಬರಲಿಲ್ಲ. ಹುಡುಗಿಯೂ ಸಹ ಒಬ್ಬನನ್ನು ಆಯ್ಕೆ ಮಾಡಲಿಲ್ಲ. ಅಂತಿಮವಾಗಿ ನಾಲ್ವರು ಯುವಕರ ಹೆಸರನ್ನು ಚೀಟಿಯಲ್ಲಿ ಬರೆದ ಗ್ರಾಮಸ್ಥರು ಒಂದು ಚೀಟಿಯನ್ನು ಎತ್ತುವ ಮೂಲಕ ಅದರಲ್ಲಿದ್ದ ಹೆಸರಿನವನ ಜೊತೆ ಹುಡುಗಿಯ ಮದುವೆ ಮಾಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮರಗಳಿಗೆ ಕತ್ತರಿ: ಅರಣ್ಯಾಧಿಕಾರಿಗಳ ಅಮಾನತು

ಬಾಳೂರು ಮೀಸಲು ಅರಣ್ಯ ಪ್ರದೇಶದಲ್ಲಿ ಮಾಫಿ ಪಾಸ್ ಹೆಸರಲ್ಲಿ ಕಾಡುಗಳ ಮರಗಳನ್ನು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಅರಣ್ಯ ಇಲಾಖೆ ನೌಕರರನ್ನು ಅಮಾನತುಗೊಳಿಸಲಾಗಿದೆ. ಚಿಕ್ಕಮಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್ ಪವಾರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಿವಾಜಿನಗರದಲ್ಲಿ ಮತ್ತೆ 14 ಜನರಲ್ಲಿ ಕಂಡು ಬಂದ ಸೋಂಕು!

ಬೆಂಗಳೂರು: ಇಲ್ಲಿಯ ಶಿವಾಜಿನಗರದಲ್ಲಿ ಮತ್ತೆ 14 ಜನರಲ್ಲಿ ಸೋಂಕು ಇರುವುದು ಬೆಳಕಿಗೆ ಬಂದಿದೆ. ಹೌಸ್ ಕೀಪಿಂಗ್…

ಸಿಬಿಐನ ಮಾಜಿ ನಿರ್ದೇಶಕ ನೇಣಿಗೆ ಶರಣು!

ಚಂಡೀಗಢ : ಸಿಬಿಐನ ಮಾಜಿ ನಿರ್ದೇಶಕ, ನಾಗಲ್ಯಾಂಡ್ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.