ಸಿಡಿ ಪ್ರಕರಣ ನ್ಯಾಯಾಲಯಕ್ಕೆ ಮೊರೆ ಹೋದ ಆರು ಸಚಿವರು : ಇಂದು ಅರ್ಜಿ ವಿಚಾರಣೆ

ಬೆಂಗಳೂರು : ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಹೊರಬೀಳುತ್ತಿದ್ದಂತೆ ರಾಜ್ಯದ 6 ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ಇಂದು ಇನ್ನೂ 6 ಸಚಿವರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ ತಿಳಿಸಿದ್ದಾರೆ.

ತಮ್ಮ ಬಳಿ ಹಲವರ ಸಿಡಿಗಳಿವೆ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಹೇಳಿಕೆ ನೀಡಿದ ಬೆನ್ನಲ್ಲೇ ಈ ಸಚಿವರು ನ್ಯಾಯಾಲಯಕ್ಕೆ ಹೋಗಿರುವುದು ಕುತೂಹಲ ಮೂಡಿಸಿದೆ. ರಾಜಶೇಖರ ಮುಲಾಲಿ ಅವರನ್ನು 68ನೇ ಪ್ರತಿವಾದಿಯನ್ನಾಗಿಸಲಾಗಿದೆ.

ಮುಂಬೈಗೆ ತೆರಳಿದ್ದ ಸಚಿವರಾದ ಭೈರತಿ ಬಸವರಾಜ, ಶಿವರಾಮ ಹೆಬ್ಬಾರ್, ಡಾ.ಕೆ.ಸುಧಾಕರ, ಎಸ್.ಟಿ.ಸೋಮಶೇಖರ, ಬಿ.ಸಿ.ಪಾಟೀಲ, ನಾರಾಯಣ ಗೌಡ ನ್ಯಾಯಾಲಯಕ್ಕೆ ಮೊರೆ ಹೋದವರು.

ಇವರ ಜೊತೆಗೆ ಇಂದು ಇನ್ನೂ 6 ಸಚಿವರು ನ್ಯಾಯಾಲಯಕ್ಕೆ ರ‍್ಜಿ ಸಲ್ಲಿಸಲಿದ್ದಾರೆ. ನಾವು ಮುಂಬೈಗೆ ಹೊದವರೆಲ್ಲ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುತ್ತಿದ್ದೇವೆ ಎಂದು ಸೋಮಶೇಖರ ಹೇಳಿದ್ದಾರೆ. ನಮ್ಮ ವಿರುದ್ಧ ಮೊದಲಿನಿಂದಲೂ ಷಢ್ಯಂತ್ರ ನಡೆಯುತ್ತಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಕರ‍್ಟ್ ಮೆಟ್ಟಿಲೇರುತ್ತೇವೆ ಎಂದು ಅವರು ತಿಳಿಸಿದ್ದಾರೆ.

ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ಸುದ್ದಿಗಳನ್ನು ಪ್ರಕಟಿಸಬಾರದು ಎಂದು ಒಟ್ಟೂ 67 ಮಾಧ್ಯಮಗಳನ್ನು ಎದುರುದಾರರನ್ನಾಗಿಸಿ ಈ ಸಚಿವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇಂದು ಅಜಿ೵ಯ ವಿಚಾರಣೆ ನಡೆಯಲಿದೆ.

Exit mobile version