ಗದಗ: ಯಾರಿಗೆ ಬಂತು? ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ‍್ಯ, ಸಿದ್ಧಲಿಂಗಯ್ಯನವರ ಈ ಕವಿತೆ ಕೇಳುತ್ತಲೇ ಅನೇಕರ ಯೋಚನೆ ಅಸ್ಪೃಶ್ಯತೆ ಕಡೆಗೆ ಹೊರಳುತ್ತವೆ. ಅಸ್ಪೃಶ್ಯತೆ ಇನ್ನು ಜೀವಂತವಿರುವ ಇಂತಹ ವರ್ತಮಾನದಲ್ಲಿ ತಹಶೀಲ್ದಾರರೊಬ್ಬರು ಅಸ್ಪೃಶ್ಯತೆ ಬಗ್ಗೆ ಜಾಗೃತಿ ಮೂಡಿಸಲು ದಲಿತರು ಕುಡಿದ ಚಹ ಕಪ್ ತೊಳೆದರೆ? ಎಸ್! ಮುಂಡರಗಿ ತಹಶೀಲ್ದಾರ್ ಆಶಪ್ಪ ಪೂಜಾರ್ ಅವರು ಮಾಡಿದ್ದು ಅದನ್ನೇ.

ನನ್ನ ಕರ್ತವ್ಯ

ಹಾರೋಗೇರಿ ಗ್ರಾಮಕ್ಕೆ ತೆರಳಿದಾಗ ನಡೆದ ಘಟನೆ ಇದು. ಸಮಾಜದ ಸ್ವಾಸ್ಥö್ಯ ಕಾಪಾಡುವ ನಿಟ್ಟಿನಲ್ಲಿ ಒಬ್ಬ ಅಧಿಕಾರಿಯಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಘಟನೆ ನಡೆದು ಎರಡು ದಿನಗಳ ಬಳಿಕ ಈ ವಿಚಾರ ಸಾಮಾಜಿಕ ಜಾಲಾತಾಣದ ಮೂಲಕ ಹೆಚ್ಚು ಜನರಿಗೆ ಗೊತ್ತಾಗಿದೆ. ಆರೋಗ್ಯಕರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಕರ್ತವ್ಯವಾಗಿದೆ.

-ಆಶಪ್ಪ ಪೂಜಾರ್ ಪೂಜಾರ್, ತಹಶೀಲ್ದಾರ್


ತಾಲೂಕಿನ ಹಾರೋಗೇರಿ ಗ್ರಾಮದಲ್ಲಿರುವ ಅಸ್ಪೃಶ್ಯತೆ ಹೋಗಲಾಡಿಸಲು ತಹಶೀಲ್ದಾರ ನೇತೃತ್ವದಲ್ಲಿ ಜಾಗೃತಿ ಸಭೆ ಕರೆಯಲಾಗಿತ್ತು. ಬರೀ ಭಾಷಣಕ್ಕಷ್ಟೇ ಸೀಮಿತವಾಗದ ಮುಂಡರಗಿ ತಹಶೀಲ್ದಾರ್ ಆಶಪ್ಪ ಪೂಜಾರ್ ಅವರು, ಸಭೆ ಮುಗಿದ ನಂತರ ಹಾರೋಗೇರಿ ಗ್ರಾಮದ ದಲಿತರನ್ನೆಲ್ಲ ಚಹದಂಗಡಿಗೆ ಕರೆದೊಯ್ದರು. ಚಹ ಕುಡಿದವರ ಲೋಟಗಳನ್ನೆಲ್ಲ ತಾವೇ ತೊಳೆಯುವ ಮೂಲಕ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿದರು.


ಸ್ವತಃ ಪರಿಶಿಷ್ಟ ಜಾತಿ ಜನಾಂಗದವರು ಕುಡಿದ ಚಹಾ ಕಪ್ಪನ್ನು ತೊಳೆಯುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದು, ತಹಶೀಲ್ದಾರ್ ಈ ಕಾರ್ಯ ಸಾಮಾಜಿಕ ಜಾಲ ತಾಣಗಳಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

ಅಂಗಡಿ ಬಂದ್ ಮಾಡುತ್ತಿದ್ದರಂತೆ!

ಹಾರೋಗೇರಿ ಗ್ರಾಮದಲ್ಲಿ ಬಹಳ ದಿನಗಳ ಹಿಂದೆ ದಲಿತರಿಗೆ ಚಹಾ ಅಂಗಡಿ ಒಳಗೆ ಪ್ರವೇಶ ಹಾಗೂ ಕ್ಷೌರ ಮಾಡುವುದನ್ನು ನಿಷೇಧಿಸಲಾಗಿತ್ತು. ಪರಿಶಿಷ್ಟ ಜಾತಿಯವರ ಮನೆಯಲ್ಲಿ ಯಾರಾದರೂ ಸಾವನ್ನಪ್ಪಿದರೆ ಊರಲ್ಲಿನ ಚಹಾ ಅಂಗಡಿಗಳನ್ನು ಬಂದ್ ಮಾಡುತ್ತಿದ್ದರು ಎನ್ನಲಾಗಿದೆ.


ಪೂಜಾರ್ ಅವರ ಈ ಕಾರ್ಯ ಸಣ್ಣದಾದರೂ ಅದು ಹಳ್ಳಿಗರ ಮೇಲೆ ಉಂಟು ಮಾಡಿದ ಪರಿಣಾಮ ಸಣ್ಣದಲ್ಲವೇ ಅಲ್ಲ ಎನ್ನಬಹುದು. ಇಷ್ಟೇ ಅಲ್ಲದೆ ನರಗುಂದ ತಹಶೀಲ್ದಾರ ಇದ್ದಾಗಲೂ ಸಹ ಆಶಪ್ಪ ಪೂಜಾರ್ ಅವರು, ಇಂಧನ ಉಳಿತಾಯಕ್ಕೆ ಮನ್ನಣೆ ನೀಡುವ ಉದ್ದೇಶದಿಂದ ಸೈಕಲ್ ಸವಾರಿ ಮಾಡಿದ್ದನ್ನು ಸಹ ಇಲ್ಲಿ ಸ್ಮರಿಸಬಹುದು.
ತಹಶೀಲ್ದಾರ್ ಆಶಪ್ಪ ಪೂಜಾರಿ, ಸಿಪಿಐ ಸುಧೀರ್ ಕುಮಾರ್ ಬೆಂಕಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉದಯಕುಮಾರ ಯಲಿವಾಳ, ಕಂದಾಯ ನಿರೀಕ್ಷಕ ಎಂ.ಎ.ನದಾಫ್, ಪಿಡಿಒ ಮಹೇಶ್ ಅಲ್ಲಿಪೂರ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಕೊರೊನಾ ರೋಗಿಗಳಿಗೆ ಔಷಧಿ, ಆಹಾರ ತಲುಪಿಸಲು ಹೊಸ ಐಡಿಯಾ!

ಹುಬ್ಬಳ್ಳಿ : ಸೋಂಕಿತರಿಗೆ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಸಂದರ್ಭದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ವಾರ್ಡ್ ಗೆ ತೆರಳುತ್ತಿರುವ ಸಂದರ್ಭದಲ್ಲಿ ಪ್ರತಿ ಬಾರಿಯೂ ಪಿಪಿಇ ಕಿಟ್ ಧರಿಸಲೇಬೇಕು.

ಕೊರೊನಾ ನಿಯಂತ್ರಣ ಮಾರ್ಗಸೂಚಿ: ಗದಗ ಡಿಸಿ ಪ್ರಕಟಣೆ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯವಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆ 2005 ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ.

ನಮ್ಮ ಸಮಬಲ ಇದ್ದರೆ ಮಾತ್ರ ಯುದ್ಧ ಸಾರುತ್ತೇವೆ…ರಾಜರಾಜೇಶ್ವರಿ ನಗರದಲ್ಲಿ ಹಾಗಿಲ್ಲ!!

ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮೂರು ಪಕ್ಷಗಳ ನಾಯಕರ ಪರ –…

ಸೀತಾಲಹರಿಯ ಸುಪರ್ ಸ್ಪ್ರೆಡರ್ ಯಾರು?: ಪ್ರಾಥಮಿಕ ಸಂಪರ್ಕದಲ್ಲೇ 11 ಜನರಿಗೆ ಸೋಂಕು!

ಸುಪರ್ ಸ್ಪ್ರೆಡರ್ ಕುರಿತು ಉತ್ತರಪ್ರಭ ವಾರದ ಹಿಂದೆ ವಿವರವಾಗಿ ಬರೆದಿತ್ತು. ಟ್ರೇಸಿಂಗ್ ಪ್ರಕ್ರಿಯೆಯಲ್ಲಿ (ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದ ಹುಡುಕಾಟ) ಲೋಪದೋಷ ಆಗುತ್ತಿರುವುದಕ್ಕೆ ಈ ತರಹದ ಸುಪರ್ ಸ್ಪ್ರೆಡರ್ ತಮಗೇ ಅರಿವಿಲ್ಲದಂತೆ ಸೋಂಕನ್ನು ಹರಡಿಸುತ್ತ ಹೋಗುತ್ತಾರೆ.