ಗದಗ: ನಗರದ ಹಾಕಿ ಗ್ರೌಂಡ ಹತ್ತಿರ, ಎಸ್.ಎಂ.ಕೃಷ್ಣ ನಗರ ರಸ್ತೆಯ ಬಳಿ ಮಾ.6 ರಂದು ಶನಿವಾರ ಸಂಜೆ 6-30ಕ್ಕೆ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಆರ್ಟ್ ಅಡ್ಡಾ ಸಭಾಭವನ ಉದ್ಘಾಟನೆ ಹಾಗೂ ಸಂಧ್ಯಾ ಸುರಾಗ ಕಾರ್ಯಕ್ರಮ ನೆರವೇರುವುದು.
ಸಾಂಸ್ಕೃತಿಕ ಸಭಾಭವನದ ಉದ್ಘಾಟನೆಯನ್ನು ಹಿರಿಯ ಹಿಂದೂಸ್ತಾನಿ ಸಂಗೀತಗಾರರಾದ ಪಂಡಿತ ಡಾ.ಎಂ.ವೆAಕಟೇಶಕುಮಾರ ವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಡಾ.ಅರ್ಜುನ ಗೊಳಸಂಗಿ ವಹಿಸುವರು. ಗಣ್ಯ ವ್ಯಾಪಾರಸ್ಥರಾದ ಸಂಜಯ ಬಾಗಮಾರ, ಹಿರಿಯ ಕಲಾವಿದರಾದ ಆರ್.ಡಿ.ಕಡ್ಲಿಕೊಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಸಂಧ್ಯಾ ಸುರಾಗ ಸಂಗೀತ ಕಾರ್ಯಕ್ರಮವನ್ನು ಪಂಡಿತ ವೆಂಕಟೇಶಕುಮಾರ ಅವರ ಶಿಷ್ಯೆ ಕು.ಐಶ್ವರ್ಯಾ ದೇಸಾಯಿ ನಡೆಸುವರು. ಇವರಿಗೆ ಕೇಶವ ಜೋಷಿ ತಬಲಾ ಸಾಥ್, ಸತೀಶ ಕೊಳ್ಳಿ ಹಾರ್ಮೋನಿಯಂ ಸಾಥ್ ನೀಡುವರು. ಕಾರ್ಯಕ್ರಮಕ್ಕೆ ಕಲಾಸಕ್ತರು ಭಾಗವಹಿಸಿ ಯಶಸ್ವಿಗೊಳಿಸಲು ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ವಿಜಯ ಕಿರೇಸೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿದ್ಯುತ್ ಸ್ಪರ್ಶ ವ್ಯಕ್ತಿ ಸಾವು

ಉತ್ತರಪ್ರಭ ಮುಳಗುಂದ: ಸಮೀಪದ ಬಸಾಪೂರ ಗ್ರಾಮದ ಹತ್ತಿರದ ತೋಟದಲ್ಲಿ ನೀರು ಹಾಯಿಸಲು ಮೋಟರ್ ಸ್ವಿಚ್ ಹಾಕುವ…

ಹುಬ್ಬಳ್ಳಿ: 165 ಜನ ವೈದ್ಯಕೀಯ ಸಿಬ್ಬಂದಿಗೆ ಮೆತ್ತಿಕೊಂಡ ಸೋಂಕು!

ಹುಬ್ಬಳ್ಳಿ : ಕೊರೊನಾ ಅಟ್ಟಹಾಸದ ಮಧ್ಯೆ ವೈದ್ಯಕೀಯ ಸಿಬ್ಬಂದಿಗೆ ಮಹಾಮಾರಿಯ ಭಯ ಇನ್ನಷ್ಟು ಹೆಚ್ಚಾಗುತ್ತಿದೆ.

ಧಾರವಾಡ ಬಳಿ ಕಾರು ಪಲ್ಟಿ : ಐಎಎಸ್ ಅಧಿಕಾರಿ ಸೇರಿ ಐವರಿಗೆ ಗಾಯ

ಉತ್ತರಪ್ರಭಧಾರವಾಡ: ಹಿರಿಯ ಐಎಎಸ್ ಅಧಿಕಾರಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ ತಾಲೂಕಿನ ಯರಿಕೊಪ್ಪ ಬಳಿ ಹುಬ್ಬಳ್ಳಿ-ಧಾರವಾಡ…

ವಿಶ್ವ ಜಾನಪದ ದಿನ ಆಚರಣೆ: ಜಾನಪದ ಸಂರಕ್ಷಣೆ ಹಾಗೂ ಸಂವರ್ಧನೆ ಅಗತ್ಯ.

ಬೀದರ: ಜಾನಪದ ಜನ ಕೇಂದ್ರಿತ ಮೌಲ್ಯಗಳ ನಿದಿಯಾಗಿದ್ದು ಇದನ್ನು ಬಗೆದಷ್ಟು ದೇಶಿಯತೆ ಅನಾವರಣಗೊಳ್ಳುವುದು ಎಂದು ಕರ್ನಾಟಕ…