ಗಜೇಂದ್ರಗಡ: ಕೋವಿಡ್ ನಿಯಂತ್ರಣ ಮಾಡುವ ಉದ್ದೇಶದಿಂದ ಮಾ.8 ರಾಜ್ಯಾದ್ಯಾಂತ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕಾ ಅಭಿಯಾನ ಆರಂಭವಾಗಲಿದ್ದು, ನಿರ್ಭಯದಿಂದ ಲಸಿಕೆ ಪಡೆಯಲು ಮುಂದಾಗಿ ಎಂದು ವೈದ್ಯಾಧಿಕಾರಿ ಅಶ್ವಿನಿ ಕೊಪ್ಪದ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕಾ ಜನಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಎರಡು ಹಂತದ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇದೀಗ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸರ್ಕಾರ 60 ವರ್ಷ ಮೇಲ್ಪಟ್ಟ ವಯೋಮಾನದವರಿಗೆ ಮತ್ತು 45 ವರ್ಷ ಮೇಲ್ಪಟ್ಟವರು ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು ಮತ್ತು ಕ್ಯಾನ್ಸರ್ ನಂತಹ ಕಾಯಿಲೆಗಳಿಂದ ಬಳಲುವವರು ಕೋವಿಡ್ ರೋಗದ ವಿರುದ್ದ ಲಸಿಕೆ ಪಡೆದು ಸುರಕ್ಷಿತವಾಗಿರಬಹುದಾಗಿದೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮಾ.8 ರಿಂದ ಲಸಿಕೆ ನೀಡಲಾಗುವುದು ಎಂದರು.

ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎ.ಹಾದಿಮನಿ ಮಾತನಾಡಿ, ಸರ್ಕಾರದ ಮಾರ್ಗ ಸೂಚಿಯಂತೆ ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಲಸಿಕೆಯನ್ನು ಪ್ರಾರಂಭಿಸಲಾಗುವುದು. ಸಾರ್ವಜನಿಕರು ಕೋವಿಡ್ ಫೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು ನೇರವಾಗಿ ಸರಕಾರಿ ಆಸ್ಪತ್ರಗೆ ಬಂದು ಲಸಿಕೆ ಪಡೆಯಬಹುದು. ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಆಗಮಿಸಬೇಕು. ವ್ಯಕ್ತಿಯನ್ನು ಪರಿಶಿಲನೆ ಮಾಡಿದ ನಂತರ ಲಸಿಕೆ ಹಾಕಲಾಗುವುದು. ಲಸಿಕೆ ಹಾಕಿದ ಬಳಿಕ ಅಡ್ಡ ಪರಿಣಾಮ ಆಗದಂತೆ ನಿಗಾವಣೆ ಇರಿಸಲಾಗುವುದು ಎಂದರು.

Leave a Reply

Your email address will not be published. Required fields are marked *

You May Also Like

ಉತ್ತರ ಕರ್ನಾಟಕ ಪ್ರವಾಹದ ಕುರಿತು ಪ್ರಧಾನಿಯೊಂದಿಗೆ ಚರ್ಚೆ ಮಾಡಿದ್ದೇನೆ – ಸಿಎಂ!

ಶಿವಮೊಗ್ಗ : ಉತ್ತರ ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ಪ್ರವಾಹದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ಮಾಡಿದ್ದೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರ ಜೀವನ ಹಾಗೂ ಮೌಲ್ಯಗಳ ಕುರಿತು ಆನ್ಲೈನ್ ವೆಬಿನಾರ್

ಉತ್ತರಪ್ರಭ ಗದಗ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ “ಅಮೃತ ಮಹೋತ್ಸವದ”…