ಗಜೇಂದ್ರಗಡ: ಕೋವಿಡ್ ನಿಯಂತ್ರಣ ಮಾಡುವ ಉದ್ದೇಶದಿಂದ ಮಾ.8 ರಾಜ್ಯಾದ್ಯಾಂತ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕಾ ಅಭಿಯಾನ ಆರಂಭವಾಗಲಿದ್ದು, ನಿರ್ಭಯದಿಂದ ಲಸಿಕೆ ಪಡೆಯಲು ಮುಂದಾಗಿ ಎಂದು ವೈದ್ಯಾಧಿಕಾರಿ ಅಶ್ವಿನಿ ಕೊಪ್ಪದ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕಾ ಜನಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಎರಡು ಹಂತದ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇದೀಗ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸರ್ಕಾರ 60 ವರ್ಷ ಮೇಲ್ಪಟ್ಟ ವಯೋಮಾನದವರಿಗೆ ಮತ್ತು 45 ವರ್ಷ ಮೇಲ್ಪಟ್ಟವರು ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು ಮತ್ತು ಕ್ಯಾನ್ಸರ್ ನಂತಹ ಕಾಯಿಲೆಗಳಿಂದ ಬಳಲುವವರು ಕೋವಿಡ್ ರೋಗದ ವಿರುದ್ದ ಲಸಿಕೆ ಪಡೆದು ಸುರಕ್ಷಿತವಾಗಿರಬಹುದಾಗಿದೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮಾ.8 ರಿಂದ ಲಸಿಕೆ ನೀಡಲಾಗುವುದು ಎಂದರು.

ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎ.ಹಾದಿಮನಿ ಮಾತನಾಡಿ, ಸರ್ಕಾರದ ಮಾರ್ಗ ಸೂಚಿಯಂತೆ ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಲಸಿಕೆಯನ್ನು ಪ್ರಾರಂಭಿಸಲಾಗುವುದು. ಸಾರ್ವಜನಿಕರು ಕೋವಿಡ್ ಫೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು ನೇರವಾಗಿ ಸರಕಾರಿ ಆಸ್ಪತ್ರಗೆ ಬಂದು ಲಸಿಕೆ ಪಡೆಯಬಹುದು. ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಆಗಮಿಸಬೇಕು. ವ್ಯಕ್ತಿಯನ್ನು ಪರಿಶಿಲನೆ ಮಾಡಿದ ನಂತರ ಲಸಿಕೆ ಹಾಕಲಾಗುವುದು. ಲಸಿಕೆ ಹಾಕಿದ ಬಳಿಕ ಅಡ್ಡ ಪರಿಣಾಮ ಆಗದಂತೆ ನಿಗಾವಣೆ ಇರಿಸಲಾಗುವುದು ಎಂದರು.

Leave a Reply

Your email address will not be published. Required fields are marked *

You May Also Like

ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ರೆ ಚುನಾವಣೆಗೆ ಸಿದ್ಧ: ಸಿದ್ದರಾಮಯ್ಯ

ಬಿಜೆಪಿಯ ಆಂತರಿಕ ವಿಚಾರಕ್ಕೆ ನಾವು ಹೋಗುವದಿಲ್ಲ. ಆದರೆ ತಾವೇ ಹೊಡೆದಾಡಿಕೊಂಡು ಸರ್ಕಾರ ಬಿದ್ದರೆ, ಚುನಾವಣೆ ಎದುರಿಸಲು ನಾವು ಸಿದ್ಧ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕೊರೊನಾದಿಂದಾಗಿ ಬಸ್ ಹತ್ತದ ಜನ!!

ಬೆಂಗಳೂರು : ಕೊರೊನಾ ಭಯದಿಂದಾಗಿ ಜನರು ಸಾರಿಗೆ ಸಂಸ್ಥೆಯ ಬಸ್ ನಿಂದ ದೂರ ಉಳಿಯುತ್ತಿದ್ದಾರೆ. ಹೀಗಾಗಿ…

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾದಂತಾಗಿದೆ.

ಪೋಲಿಸ್ ದಾಳಿ : ಕಲ್ಲುಗಣಿ ಸ್ಪೋಟಕ ವಸ್ತುಗಳು ವಶಕ್ಕೆ, ಓರ್ವನ ಬಂಧನ

ಮುಳಗುಂದ ಸಮೀಪದ ಶೀತಾಲಹರಿ ಗ್ರಾಮದ ಹೊರವಲಯದ ಶೆಡ್ಡವೊಂದರ ಮೇಲೆ ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತನವರ ನೇತೃತ್ವದ ತಂಡ ದಾಳಿ ನಡೆಸಿ ಅಪಾರ ಪ್ರಮಾಣದ ಸ್ಪೋಟಕ ವಸ್ತುಗಳು ಸೇರಿದಂತೆ ಓರ್ವ ವ್ಯಕ್ತಿಯನ್ನ ವಶಕ್ಕೆ ಪಡೆದಿರುವ ಘಟನೆ ಗುರುವಾರ ನಡೆದಿದೆ.