ನನ್ನ ಬಳಿ ಸಿಡಿ ಇವೆ ಅಂತ ನಾನು ಹೇಳಿಲ್ಲ: ರಾಜಶೇಖರ ಮುಲಾಲಿ

ಧಾರವಾಡ: ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಷಡ್ಯಂತ್ರ ಅಂತಾ ಹೇಳಿದ್ದಾರೆ ಎಂದ ಅವರು, ನಾನು ಎಲ್ಲಿಯೂ ಸಹ ನನ್ನ ಬಳಿ ಸಿಡಿ ಇವೆ ಅಂತಾ ಹೇಳಿಲ್ಲ, ಯಾರ ಬಳಿಯಾದರೂ ನನ್ನ ಹೇಳಿಕೆಯ ದಾಖಲೆ ಇದ್ದರೆ ತೋರಿಸಿ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿನೇಶ ಕಲ್ಲಹಳ್ಳಿಯವರು ರಮೇಶ ಜಾರಕಿಹೊಳಿ ಸಿಡಿ ಕುರಿತ ದೂರು ವಾಪಸ್ ನಿರ್ಧಾರ ತೆಗೆದುಕೊಂಡಿದ್ದಕ್ಕೆ, ಅವರಿಗೆ ಒತ್ತಡಗಳು ಏನಿದೆಯೋ ಗೊತ್ತಿಲ್ಲ. ಬೇರೆ ಏನಾದರೂ ತೊಂದರೆ ಆಗಿರಬಹುದು. ವಾಪಸ್ಸು ಪಡೆದಿದ್ದು ಈಗ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ ಎಂದರು.

ದೇಶದಲ್ಲಿ ಪ್ರಾಮಾಣಿಕ ಸಾಮಾಜಿಕ ಹೋರಾಟಗಾರರ ಸಂಖ್ಯೆ ಬೆರಳೆಣಿಕೆಯಷ್ಟಿದೆ. ಎಲ್ಲರೂ ಅಣ್ಣಾ ಹಜಾರೆ, ರಾಜಶೇಖರ ಮುಲಾಲಿ ಆಗೋಕೆ ಸಾಧ್ಯವಿಲ್ಲ ಎಂದರು. ಒಂದೇ ದಿನ ಹಿರೋ ಆಗಿ ಅವತ್ತೇ ಸಂಜೆ ವಿಲನ್ ಆದವರೂ ಇದ್ದಾರೆ ಎಂದರು.

Exit mobile version