ಗದಗ: ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಛಬ್ಬಿ ತಾಂಡ ಹಾಗೂ ಗುಡ್ಡದಪೂರ ಮತ್ತು ರಣತೂರ ಗ್ರಾ.ಪಂ ವ್ಯಾಪ್ತಿಯ ದೇವಿಹಾಳ ತಾಂಡಾಗಳಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ತಾಂಡಾ ರೋಜಗಾರ್ ಮಿತ್ರ ಆಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತಾಂಡಾಗಳಲ್ಲಿನ ಪ್ರತಿ 250 ರಿಂದ 300 ಮನೆಗಳಿಗೆ ಒಬ್ಬರಂತೆ ತಾಂಡಾ ರೋಜಗಾರ್ ಮಿತ್ರರನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೆಕು. ಮಹಿಳೆಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಮಹಿಳೆಯರು ಲಬ್ಯವಿಲ್ಲದಿದ್ದಲ್ಲಿ ಪುರುಷರನ್ನು ಆಯ್ಕೆಗೆ ಪರಿಗಣಿಸಲಾಗುವುದು. ನರೇಗಾ ಕಾಮಗಾರಿಗಳಲ್ಲಿ ಕೆಲಸ ಮಾಡಿರುವವರಿಗೆ ಆದ್ಯತೆ ನೀಡಲಾಗುವುದು. ವಯೋಮಿತಿ 45 ವರ್ಷ ಮೀರಿರಬಾರದು. ತಾಂಡಾ ನಿವಾಸಿ ಆಗಿರಬೇಕು. ಕನ್ನಡ ಮತ್ತು ಲಂಬಾಣಿ ಭಾಷೆ ತಿಳಿದಿರಬೇಕು. ಅಭ್ಯರ್ಥಿಯು ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣಗಳನ್ನು ಹೊಂದಿರಬೇಕು.

ತಾಂಡಾ ರೋಜಗಾರ್ ಮಿತ್ರರನ್ನು ಮನರೇಗಾ ಯೋಜನೆಯ ಐ.ಇ.ಸಿ. ಚಟುವಟಿಕೆಯ ಭಾಗವಾಗಿ 6 ತಿಂಗಳ ಅವಧಿಗೆ ಮಾತ್ರ ತೊಡಗಿಸಿಕೊಳ್ಳಲಾಗುತ್ತದೆ.

ತಾಂಡಾ ರೋಜಗಾರ್ ಮಿತ್ರರರಿಗೆ ರಾಜ್ಯ ಅಭಿವೃದ್ಧಿ ನಿಗಮದಿಂದ ಮಾಸಿಕ 3 ಸಾವಿರ ರೂ ಹಾಗೂ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ 3000 ರೂ ಪ್ರೋತ್ಸಾಹ ಧನ ನೀಡಲಾಗುತ್ತದೆ. ತಾಂಡಾ ರೋಜಗಾರ್ ಮಿತ್ರರು ಸ್ವಯಂ ಪ್ರೇರಿತ ಕಾರ್ಯಕರ್ತರು ಮಾತ್ರ ಆಗಿದ್ದು ಗ್ರಾಮ ಪಂಚಾಯತಿಯ ಖಾಯಂ ಅಥವಾ ತಾತ್ಕಾಲಿಕ ನೌಕರರಾಗಿರುವುದಿಲ್ಲ. ಅರ್ಹ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಯಲ್ಲಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಮಾ.15 ಕೊನೆಯ ದಿನವಗಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾ.ಪಂ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ನೊಂದವರ ನೆರವಿಗೆ ದಾಸೋಹ ಕಾರ್ಯವಾಗಬೇಕು: ತೋಂಟದ ಸಿದ್ಧರಾಮಶ್ರೀಗಳು

ನಮ್ಮ ಭಾರತ ದೇಶದ ಸಂಸ್ಕಾರ ಸಂಸ್ಕೃತಿಯೇ ವೈರಸ್ ಕಾಟ ಕಡಿಮೆಯಾಗಲು ಕಾರಣವಾಗಿದೆ. ಆದರೆ ಇಂದು ಕಲಿತವರಿಂದ ಕೆಲ ಆಚರಣೆ ಗಾಳಿಗೆ ತೂರಲಾಗಿದೆ. ಹೀಗಾಗಿ ವೈರಸ್ ಕಾಟದಿಂದ ಸಾಕಷ್ಟು ಜನರು ಸಂಕಷ್ಟು ಎದುರಿಸುವಂತಾಗಿದೆ.

ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ವಿರುದ್ಧ ಸತತ ನಾಲ್ಕು ದಿನಗಳಿಂದ(NSUI)ಉಪವಾಸ ಸತ್ಯಾಗ್ರಹ

ಉತ್ತರಪ್ರಭ ಹುಬ್ಬಳ್ಳಿ : ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ವಿರುದ್ಧ ಸತತ ನಾಲ್ಕು ದಿನಗಳಿಂದ…

7 ವರ್ಷಗಳ ಹಿಂದೆ ಕಳ್ಳತನ ಮಾಡಿದವರ ಈಗ ಅಂದರ್!

ಧಾರವಾಡ : ಜಿಲ್ಲೆಯಲ್ಲಿ ಎರಡು ಪ್ರದೇಶಗಳಲ್ಲಿ 7 ವರ್ಷಗಳ ಹಿಂದೆ ಕಳ್ಳತನ ಮಾಡಿದ್ದ ವ್ಯಕ್ತಿಗೆ ಇಲ್ಲಿಯ 2ನೇ ಜೆಎಂಎಫ್ ಸಿ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಪೊಲೀಸ್ ಇಲಾಖೆಗೆ ಸೇರಿದ ಜಾಗವನ್ನೇ ಅತಿಕ್ರಮಣ ಮಾಡಿದ ಜನರು!

ಧಾರವಾಡ : ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಜಾಗಗಳನ್ನು ವಶಕ್ಕೆ ಪಡೆಯಲು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ…