ಮಹಾನಗರ: ರಾಜ್ಯದ 5 ಜಲಮಾರ್ಗಗಳಲ್ಲಿ ಸರಕು ಸಾಗಾಣಿಕೆ ಮಾಡುವ ಮಹತ್ವದ ಯೋಜನೆಗೆ ಆರ್ಥಿಕವಾಗಿ ಲಾಭದಾಯಕವಾಗಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಹಿನ್ನಡೆಯಾಗಿದೆ.

ಒಳನಾಡು ಜಲಸಾರಿಗೆ ಇಲಾಖೆಯ ಸದ್ಯದ ಮಾಹಿತಿ ಪ್ರಕಾರ, ಜಲಮಾರ್ಗದಲ್ಲಿ ಸರಕು ಸಾಗಾಟ ಯೋಜನೆಯನ್ನು ತಾತ್ಕಾಲಿಕವಾಗಿ ಕೈಬಿಟ್ಟು ಅದರ ಬದಲು ಅಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಸರಕು ಸಾಗಾಣೆಗೆ ಗುರುಪುರ, ನೇತ್ರಾವತಿ ಸಹಿತ 5 ಜಲಮಾರ್ಗಗಳನ್ನು ಅಭಿವೃದ್ಧಿಪಡಿಸುವುದು ಆರ್ಥಿಕವಾಗಿ ಲಾಭದಾಯಕವಾಗಿಲ್ಲ ಎಂಬ ವರದಿಯನ್ನು ಸಂಸ್ಥೆ ನೀಡಿದೆ.

ಭಾರತೀಯ ಒಳನಾಡು ಜಲಮಾರ್ಗ ಪ್ರಾಧಿಕಾರವು ರಾಜ್ಯದಲ್ಲಿ 11 ರಾಷ್ಟ್ರೀಯ ಒಳನಾಡು ಜಲಮಾರ್ಗವನ್ನು ಈಗಾಗಲೇ ಘೋಷಿಸಿದೆ. ಈ 11 ಜಲಮಾರ್ಗಗಳ ಪೈಕಿ 5 ರಾಷ್ಟ್ರೀಯ ಒಳನಾಡು ಜಲಮಾರ್ಗಗಳಾದ ಗುರುಪುರ, ನೇತ್ರಾವತಿ ಸಹಿತ ಕಬಿನಿ, ಕಾಳಿ, ಶರಾವತಿ ನದಿಗಳನ್ನು ಸರಕು ಸಾಗಾಣಿಕೆಗಾಗಿ ಅಭಿವೃದ್ಧಿಪಡಿಸಲು 2016-17ನೇ ಸಾಲಿನಲ್ಲಿ ಇನ್ ಲ್ಯಾಂಡ್ ವಾಟರ್‌ವೆಯ್ಸ ಅಥಾರಿಟಿ ಆಫ್ ಇಂಡಿಯಾ (ಐಡಬ್ಲ್ಯುಎಐ) ವಿಸ್ತೃತ ಯೋಜನ ವರದಿ ಸಲ್ಲಿಸಿದೆ.

ಸರಕು ಸಾಗಾಟ ಯೋಜನೆ ಕೈಬಿಟ್ಟು ಈ ಜಲಮಾರ್ಗಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವ ಬಗ್ಗೆ ಸರಕಾರ ತಿರ್ಮಾನಿಸಿದೆ. ಇದಕ್ಕೆ ಒಟ್ಟು 59.90 ಕೋ.ರೂ. ವೆಚ್ಚದಲ್ಲಿ ಯೋಜನೆ ರೂಪಿಸಲು ಉದ್ದೇಶಿಸಿದೆ. ಇದನ್ನು ಯಾವ ರೀತಿಯಲ್ಲಿ ಬಳಕೆ ಮಾಡಬಹುದು ಎಂಬ ಕುರಿತ ಅಂತಿಮ ವರದಿ ಇನ್ನಷ್ಟೇ ಆಗಬೇಕಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮಂಡಿಸಿರುವ ಬಜೆಟ್‌ನಲ್ಲಿ ಮಂಗಳೂರು-ಪಣಜಿ ನಡುವೆ ಜಲಮಾರ್ಗಗಳ ಅಭಿವೃದ್ಧಿ ಬಗ್ಗೆ ಉಲ್ಲೇಖೀಸಿದ್ದಾರೆ. ಈ ಮೂಲಕ ಎರಡೂ ನಗರಗಳ ನಡುವೆ ವ್ಯಾಪಾರ ವಹಿವಾಟು ಬೆಳೆಸುವ ಉದ್ದೇಶದ ಬಗ್ಗೆ ಪ್ರಸ್ತಾವಿಸಿದ್ದಾರೆ. ಇದು ಯಾವ ರೀತಿಯಿಂದ ಜಾರಿಯಾಗಲಿದೆ ಎಂಬ ಬಗ್ಗೆ ಸದ್ಯ ಇಲಾಖೆಯಲ್ಲಿ ಮಾಹಿತಿಯಿಲ್ಲ. ಒಂದು ವೇಳೆ ಯೋಜನೆಯು ಸಾಕಾರವಾದರೆ ಕರಾವಳಿಯ ಆರ್ಥಿಕ ಬೆಳವಣಿಗೆಯಲ್ಲಿ ಇದು ಮಹತ್ವದ ಪಾತ್ರ ವಹಿಸಲಿದೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಶಾಲೆ ತೆರೆಯದಂತೆ ಪೋಷಕರು, ಶಿಕ್ಷಕರ ಒತ್ತಾಯ!

ದೆಹಲಿಯಲ್ಲಿ ಕೊರೊನಾ ಆತಂಕ ಮೂಡಿಸಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳನ್ನೇ ತೆರೆಯುವುದೇ ಬೇಡ ಎಂದು ಶಿಕ್ಷಕರು ಮತ್ತು ಪೋಷಕರು ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

150ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್ ನೆರವು ನೀಡಿದ್ದೇವೆ: ಪ್ರಧಾನಿ ಮೋದಿ

ವಿಶ್ವದ ಜನಸಂಖ್ಯೆಯಲ್ಲಿ ಆರನೆ ಒಂದರಷ್ಟನ್ನು ಭಾರತ ಹೊಂದಿದೆ. ನಮ್ಮ ಜವಾಬ್ದಾರಿಯ ಅರಿವು ನಮಗಿದೆ ಎಂದು ಪದ್ರಧಾನಿ…

ಮದ್ಯಾಹ್ನದ ಬಿಸಿಊಟದ ಬದಲು ವಿದ್ಯಾರ್ಥಿಗಳ ಖಾತೆಗೆ ಸರ್ಕಾರದ ಹಣ

ನವದೆಹಲಿ: ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುವ ಸಲುವಾಗಿ, ಮಧ್ಯಾಹ್ನದ ಊಟ ಯೋಜನೆಯಡಿ ಮಕ್ಕಳಿಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಆರ್ಥಿಕ ಸಹಾಯವನ್ನು ಕಳುಹಿಸಲಾಗುವುದು. ಸರ್ಕಾರದ ಈ ಯೋಜನೆಯಿಂದ ಸುಮಾರು 11.8 ಕೋಟಿ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ ಎನ್ನಲಾಗಿದೆ.

ರಾಷ್ಟ್ರಪ್ರಶಸ್ತಿ ಪುರಸ್ಕೃತ ಆನಂದ್ ಇನ್ನಿಲ್ಲ

ತಮಿಳು ಚಿತ್ರ ನಿರ್ದೇಶಕ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕೆ.ವಿ.ಆನಂದ್ (54) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ.