ಮಹಾನಗರ: ರಾಜ್ಯದ 5 ಜಲಮಾರ್ಗಗಳಲ್ಲಿ ಸರಕು ಸಾಗಾಣಿಕೆ ಮಾಡುವ ಮಹತ್ವದ ಯೋಜನೆಗೆ ಆರ್ಥಿಕವಾಗಿ ಲಾಭದಾಯಕವಾಗಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಹಿನ್ನಡೆಯಾಗಿದೆ.

ಒಳನಾಡು ಜಲಸಾರಿಗೆ ಇಲಾಖೆಯ ಸದ್ಯದ ಮಾಹಿತಿ ಪ್ರಕಾರ, ಜಲಮಾರ್ಗದಲ್ಲಿ ಸರಕು ಸಾಗಾಟ ಯೋಜನೆಯನ್ನು ತಾತ್ಕಾಲಿಕವಾಗಿ ಕೈಬಿಟ್ಟು ಅದರ ಬದಲು ಅಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಸರಕು ಸಾಗಾಣೆಗೆ ಗುರುಪುರ, ನೇತ್ರಾವತಿ ಸಹಿತ 5 ಜಲಮಾರ್ಗಗಳನ್ನು ಅಭಿವೃದ್ಧಿಪಡಿಸುವುದು ಆರ್ಥಿಕವಾಗಿ ಲಾಭದಾಯಕವಾಗಿಲ್ಲ ಎಂಬ ವರದಿಯನ್ನು ಸಂಸ್ಥೆ ನೀಡಿದೆ.

ಭಾರತೀಯ ಒಳನಾಡು ಜಲಮಾರ್ಗ ಪ್ರಾಧಿಕಾರವು ರಾಜ್ಯದಲ್ಲಿ 11 ರಾಷ್ಟ್ರೀಯ ಒಳನಾಡು ಜಲಮಾರ್ಗವನ್ನು ಈಗಾಗಲೇ ಘೋಷಿಸಿದೆ. ಈ 11 ಜಲಮಾರ್ಗಗಳ ಪೈಕಿ 5 ರಾಷ್ಟ್ರೀಯ ಒಳನಾಡು ಜಲಮಾರ್ಗಗಳಾದ ಗುರುಪುರ, ನೇತ್ರಾವತಿ ಸಹಿತ ಕಬಿನಿ, ಕಾಳಿ, ಶರಾವತಿ ನದಿಗಳನ್ನು ಸರಕು ಸಾಗಾಣಿಕೆಗಾಗಿ ಅಭಿವೃದ್ಧಿಪಡಿಸಲು 2016-17ನೇ ಸಾಲಿನಲ್ಲಿ ಇನ್ ಲ್ಯಾಂಡ್ ವಾಟರ್‌ವೆಯ್ಸ ಅಥಾರಿಟಿ ಆಫ್ ಇಂಡಿಯಾ (ಐಡಬ್ಲ್ಯುಎಐ) ವಿಸ್ತೃತ ಯೋಜನ ವರದಿ ಸಲ್ಲಿಸಿದೆ.

ಸರಕು ಸಾಗಾಟ ಯೋಜನೆ ಕೈಬಿಟ್ಟು ಈ ಜಲಮಾರ್ಗಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವ ಬಗ್ಗೆ ಸರಕಾರ ತಿರ್ಮಾನಿಸಿದೆ. ಇದಕ್ಕೆ ಒಟ್ಟು 59.90 ಕೋ.ರೂ. ವೆಚ್ಚದಲ್ಲಿ ಯೋಜನೆ ರೂಪಿಸಲು ಉದ್ದೇಶಿಸಿದೆ. ಇದನ್ನು ಯಾವ ರೀತಿಯಲ್ಲಿ ಬಳಕೆ ಮಾಡಬಹುದು ಎಂಬ ಕುರಿತ ಅಂತಿಮ ವರದಿ ಇನ್ನಷ್ಟೇ ಆಗಬೇಕಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮಂಡಿಸಿರುವ ಬಜೆಟ್‌ನಲ್ಲಿ ಮಂಗಳೂರು-ಪಣಜಿ ನಡುವೆ ಜಲಮಾರ್ಗಗಳ ಅಭಿವೃದ್ಧಿ ಬಗ್ಗೆ ಉಲ್ಲೇಖೀಸಿದ್ದಾರೆ. ಈ ಮೂಲಕ ಎರಡೂ ನಗರಗಳ ನಡುವೆ ವ್ಯಾಪಾರ ವಹಿವಾಟು ಬೆಳೆಸುವ ಉದ್ದೇಶದ ಬಗ್ಗೆ ಪ್ರಸ್ತಾವಿಸಿದ್ದಾರೆ. ಇದು ಯಾವ ರೀತಿಯಿಂದ ಜಾರಿಯಾಗಲಿದೆ ಎಂಬ ಬಗ್ಗೆ ಸದ್ಯ ಇಲಾಖೆಯಲ್ಲಿ ಮಾಹಿತಿಯಿಲ್ಲ. ಒಂದು ವೇಳೆ ಯೋಜನೆಯು ಸಾಕಾರವಾದರೆ ಕರಾವಳಿಯ ಆರ್ಥಿಕ ಬೆಳವಣಿಗೆಯಲ್ಲಿ ಇದು ಮಹತ್ವದ ಪಾತ್ರ ವಹಿಸಲಿದೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ರಷ್ಯಾ ಲಸಿಕೆ ಸುದ್ದಿ ನಂಬಿ ದಿಕ್ಕು ತಪ್ಪಿದ ‘ದೊಡ್ಡ’ ಮಾಧ್ಯಮ: ಅವಸರದ ನಡುವೆಯೂ ಉತ್ತರಪ್ರಭ ಸಂಯಮ

ಕಳೆದ ಭಾನುವಾರ ಮತ್ತು ಸೋಮವಾರ ಕೋರೊನಾ ಲಸಿಕೆ ಕುರಿತಂತೆ ಫೇಕ್ ಸುದ್ದಿಯನ್ನು ನಂಬಿದ ದೈತ್ಯ ಮೀಡಿಯಾ ಕಂಪನಿಗಳು ಎಡವಟ್ಟು ಮಾಡಿಕೊಂಡವು. ಆದರೆ ಉತ್ತರಪ್ರಭ ಸತ್ಯ ಪ್ರಕಟಿಸಿತ್ತು. ಈಗ ಅದನ್ನೇ ದೇಶದ ಮುಂಚೂಣಿ ಫ್ಯಾಕ್ಟ್ ಚೆಕ್ ಕಂಪನಿ ಅಲ್ಟ್ ನ್ಯೂಸ್ ಹೇಳಿದೆ.

ಕೊರೊನಾ ಹಿನ್ನೆಲೆ : ಆ.31ರವರೆಗೆ ಪರಿಹಾರ ಸಾಮಗ್ರಿಗಳ ಆಮದಿನ ಮೇಲಿನ ತೆರಿಗೆ ವಿನಾಯಿತಿ ವಿಸ್ತರಣೆ

ನವದೆಹಲಿ: ಜಿಎಸ್‌ಟಿ ಕೌನ್ಸಿಲ್ ತನ್ನ ಸಭೆಯಲ್ಲಿ ಕೊರೊನಾ ವೈರಸ್ ಪರಿಹಾರ ಸಾಮಗ್ರಿಗಳ ಆಮದಿಗೆ ಆಗಸ್ಟ್ 31ರವರೆಗೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಘೋಷಿಸಿದರು. ರಾಜ್ಯ ಹಣಕಾಸು ಸಚಿವರನ್ನು ಒಳಗೊಂಡ 43ನೇ ಜಿಎಸ್ಟಿ ಕೌನ್ಸಿಲ್ ಸಭೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಿತು. ಕೌನ್ಸಿಲ್ ಸುಮಾರು ಎಂಟು ತಿಂಗಳಲ್ಲಿ ಮೊದಲ ಬಾರಿಗೆ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಯಾವುದೇ ಆತಂಕ ಬೇಡ ಅಮಿತ್ ಶಾ ಆರೋಗ್ಯವಾಗಿದ್ದಾರಂತೆ

ನಾನು ಆರೋಗ್ಯವಾಗಿದ್ದೇನೆ. ಯಾವುದೇ ಆತಂಕಕ್ಕೆ ಆಸ್ಪದವಿಲ್ಲ ಎಂದು ಗೃಹ ಮಂತ್ರಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಕಾಫಿಗೂ ಕೊರೊನಾ ಕಾಟ, ಬೆಳೆಗಾರರ ಸಂಕಷ್ಟ..!

ಲಾಕ್ ಡೌನ್ ಹಿನ್ನೆಲೆ ಕಾರ್ಮಿಕ ಕುಟುಂಬಗಳ ಪರಿಸ್ಥಿತಿ ಹೇಳತೀರದಾಗಿದೆ. ಕಾಫಿ ಉದ್ಯಮವನ್ನೆ ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಇನ್ನು ಕಾಫಿ ಉತ್ಪಾದನಾ ಉದ್ಯಮದ ಮೇಲೂ ಲಾಕ್ ಡೌನ್ ಪರಿಣಾಮ ಬೀರಿದೆ. ಇದರಿಂದ ಕಾಫಿ ಕೈಗಾರಿಕೆಗಳು ಸಂಕಷ್ಟ ೆದುರಿಸುವಂತಾಗಿದೆ.