ಬೆಂಗಳೂರು: ಕಳೆದ ನಾಲ್ಕು ವರ್ಷಗಳ ಹಿಂದೆ ನಾಗಾಲ್ಯಾಂಡ್‌ನಿಂದ ಬ್ಯೂಟಿ ಪಾರ್ಲರ್ ಸೇಲ್ಸ್ ಗರ್ಲ್ ಆಗಿ ಬಂದವಳು ಬೆಂಗಳೂರಿಗೆ ಬಂದವಳು ಆಪ್ತರೊಂದಿಗೆ ಜೈಲು ಪಾಲಾಗಿದ್ದಾರೆ.

ಇ-ಮೇಲ್ ಹ್ಯಾಕ್ ಮಾಡುತ್ತಿದ್ದ ನಾಗಾಲ್ಯಾಂಡ್ ಮೂಲದ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಬಂಧಿರನ್ನು ಥಿಯಾ (31), ಸೆರೋಪಾ (27) ಹಾಗೂ ಇಸ್ಟರ್ ಕೊನ್ಯಾಕ್ ಅಲಿಯಾಸ್ ರುಬಿಕಾ ಎಂದು ಗುರುತಿಸಲಾಗಿದೆ.

ಇವರು ನಿವೃತ್ತ ಡಿಜಿಐಜಿಪಿ ಶಂಕರ್ ಬಿದರಿ ಖಾತೆಯನ್ನು ಹ್ಯಾಕ್ ಮಾಡಿ, ಬಿದರಿ ಸ್ನೇಹಿತರಿಗೆ ಹಣಕ್ಕಾಗಿ ಮೆಸೇಜ್ ಮಾಡಿದ್ದರು. ಮೆಸೇಜ್ ನೋಡಿದ ಬಿದರಿ ಸ್ನೇಹಿತ 25 ಸಾವಿರ ರೂಪಾಯಿ ಹಣವನ್ನು ಆರೋಪಿಗಳ ಖಾತೆಗೆ ಜಮಾ ಮಾಡಿದ್ದರು.

ಬಳಿಕ ಇಮೇಲ್ ದುರ್ಬಳಕೆ ಆಗುತ್ತಿದೆ ಎಂದು ಶಂಕರ್ ಬಿದರಿ ಅವರು ಈ ಬಗ್ಗೆ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಸುಮಾರು 60 ಬ್ಯಾಂಕ್ ಅಕೌಂಟ್ ಹೊಂದಿದ್ದರು. ಕಳೆದ ವರ್ಷ ನವೆಂಬರನಿಂದ ಇತ್ತೀಚೆಗೆ 60 ಬ್ಯಾಂಕ್ ಅಕೌಂಟ್ ಒಪನ್ ಆಗಿದೆ. ನಾಗಾಲ್ಯಾಂಡ್ನ ನಿರುದ್ಯೋಗಿ ಯುವಕರಿಗೆ ಹಣದ ಆಮಿಷವೊಡ್ಡಿ ಆಧಾರ್ ಕರ್ಡ್ , ಮನೆ ಬಾಡಿಗೆ ಪತ್ರ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿರುವ ಮಹಿಳಾ ಆರೋಪಿ ರುಬಿಕಾ ಇದರ ಮಾಸ್ಟರ್ ಮೈಂಡ್ ಎಂದು ತಿಳಿದುಬಂದಿದೆ. ನಾಲ್ಕು ವರ್ಷಗಳ ಹಿಂದೆ ನಗರಕ್ಕೆ ಬಂದು ಬ್ಯೂಟಿ ಪಾರ್ಲರ್ ವೋಂದರಲ್ಲಿ ಸೆಲ್ಸ ಗರ್ಲ್ ಆಗಿದ್ದಳು. ಫೇಸ್ಬುಕ್ನಲ್ಲಿ ಪೀಟರ್ ಹಾಗೂ ಜೇಮ್ಸ್ ಎನ್ನುವವರ ಪರಿಚಯ ಮಾಡಿಕೊಂಡಿದ್ದ ರುಬಿಕಾ, ಜೇಮ್ಸ್ ಹಾಗೂ ಪೀಟರ್ ಮಾರ್ಗದರ್ಶನದಂತೆ ಅಕೌಂಟ್ ಹ್ಯಾಕ್ ಮಾಡಿ ಹಣ ಎಗರಿಸುತ್ತಿದ್ದಳು. ಸದ್ಯ ಆರೋಪಿಗಳನ್ನ ಬಂಧಿಸಿರುವ ಸೈಬರ್ ಕ್ರೈಂ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿ: ನಮ್ಮೂರ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಆರ್ಥಿಕ ಸಹಾಯದಿಂದ ಸ್ಥಳಿಯ ಪಪಂ ಹಾಗೂ ಶ್ರೀ ಬಾಲಲೀಲಾ ಮಹಾಂತ ಶಿವಯೋಗಿ ಕೆರೆ ಅಭಿವೃದ್ದಿ ಸಮಿತಿ ಸಹಭಾಗಿತ್ವದಲ್ಲಿ ಪಟ್ಟಣಶೆಟ್ಟಿ ಕೆರೆ ಆವರಣದಲ್ಲಿ 246ನೇ ನಮ್ಮೂರ ಕೆರೆ ಹೂಳೆತ್ತುವ ಕಾರ್ಯಕ್ರಮವನ್ನ ಗ್ರಾಮಾಭಿವೃದ್ದಿ ಯೋಜನೆಯ ಹೈದರಬಾದ ಕರ್ನಾಟಕದ ಪ್ರಾದೇಶಿಕ ನಿರ್ದೇಶಕ ಪುರುಷೋತ್ತಮ್ ಅವರು ಚಾಲನೆ ನೀಡಿದರು.

ಅಭಿಮಾನಕ್ಕಾಗಿ ನನ್ನ ಕಣ್ಣಾಲೆಗಳು ತುಂಬಿಕೊಂಡ ಕ್ಷಣ ಅದು..

ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಬಗೆಗೆ ನೀವೆಲ್ಲ ತೋರಿಸುತ್ತಿರುವ ಅಕ್ಕರೆ, ಅಭಿಮಾನ ನಮ್ಮ ಉತ್ಸಾಹ ಹೆಚ್ಚಿಸಿದೆ. ಇನ್ನು ಕೆಲ ದಿನಗಳಲ್ಲಿಯೇ ಪತ್ರಿಕೆಯನ್ನು ಆರಂಭಿಸುವ ನಮ್ಮ ಕನಸಿಗೆ ನಿಮ್ಮ ಅಭಿಮಾನ ಬಣ್ಣ ತುಂಬಿದೆ

ರಾಜ್ಯದಲ್ಲಿ ಮಹಿಳೆಯರಿಗಿಂತಲೂ ಪುರುಷರನ್ನೇ ಹೆಚ್ಚು ಕಾಡುತ್ತಿರುವ ಕೊರೊನಾ!

ರಾಜ್ಯದಲ್ಲಿ ಇಲ್ಲಿಯವರೆಗೂ 858 ಜನರಿಗೆ ಸೋಂಕು ತಗುಲಿದೆ. ಈ ಪೈಕಿ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಒಳಗಾಗಿದ್ದಾರೆ. ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಎಂಬುವುದನ್ನು ಮಹಿಳೆಯರು ಮತ್ತೊಮ್ಮೆ ಸಾರಿದ್ದಾರೆ.

ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಅಗತ್ಯ ಪ್ರೋ. P. S. ಅಣ್ಣಿಗೇರಿ

ನರಗುಂದ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸಲು ಶ್ರೀ ಸಿದ್ದೇಶ್ವರ ಪ್ರಥಮ ದರ್ಜೆ ಕಾಲೇಜು ನರಗುಂದ ಕಾಲೇಜಿನಲ್ಲಿ…