ಬೆಂಗಳೂರು: ಕಳೆದ ನಾಲ್ಕು ವರ್ಷಗಳ ಹಿಂದೆ ನಾಗಾಲ್ಯಾಂಡ್‌ನಿಂದ ಬ್ಯೂಟಿ ಪಾರ್ಲರ್ ಸೇಲ್ಸ್ ಗರ್ಲ್ ಆಗಿ ಬಂದವಳು ಬೆಂಗಳೂರಿಗೆ ಬಂದವಳು ಆಪ್ತರೊಂದಿಗೆ ಜೈಲು ಪಾಲಾಗಿದ್ದಾರೆ.

ಇ-ಮೇಲ್ ಹ್ಯಾಕ್ ಮಾಡುತ್ತಿದ್ದ ನಾಗಾಲ್ಯಾಂಡ್ ಮೂಲದ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಬಂಧಿರನ್ನು ಥಿಯಾ (31), ಸೆರೋಪಾ (27) ಹಾಗೂ ಇಸ್ಟರ್ ಕೊನ್ಯಾಕ್ ಅಲಿಯಾಸ್ ರುಬಿಕಾ ಎಂದು ಗುರುತಿಸಲಾಗಿದೆ.

ಇವರು ನಿವೃತ್ತ ಡಿಜಿಐಜಿಪಿ ಶಂಕರ್ ಬಿದರಿ ಖಾತೆಯನ್ನು ಹ್ಯಾಕ್ ಮಾಡಿ, ಬಿದರಿ ಸ್ನೇಹಿತರಿಗೆ ಹಣಕ್ಕಾಗಿ ಮೆಸೇಜ್ ಮಾಡಿದ್ದರು. ಮೆಸೇಜ್ ನೋಡಿದ ಬಿದರಿ ಸ್ನೇಹಿತ 25 ಸಾವಿರ ರೂಪಾಯಿ ಹಣವನ್ನು ಆರೋಪಿಗಳ ಖಾತೆಗೆ ಜಮಾ ಮಾಡಿದ್ದರು.

ಬಳಿಕ ಇಮೇಲ್ ದುರ್ಬಳಕೆ ಆಗುತ್ತಿದೆ ಎಂದು ಶಂಕರ್ ಬಿದರಿ ಅವರು ಈ ಬಗ್ಗೆ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಸುಮಾರು 60 ಬ್ಯಾಂಕ್ ಅಕೌಂಟ್ ಹೊಂದಿದ್ದರು. ಕಳೆದ ವರ್ಷ ನವೆಂಬರನಿಂದ ಇತ್ತೀಚೆಗೆ 60 ಬ್ಯಾಂಕ್ ಅಕೌಂಟ್ ಒಪನ್ ಆಗಿದೆ. ನಾಗಾಲ್ಯಾಂಡ್ನ ನಿರುದ್ಯೋಗಿ ಯುವಕರಿಗೆ ಹಣದ ಆಮಿಷವೊಡ್ಡಿ ಆಧಾರ್ ಕರ್ಡ್ , ಮನೆ ಬಾಡಿಗೆ ಪತ್ರ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿರುವ ಮಹಿಳಾ ಆರೋಪಿ ರುಬಿಕಾ ಇದರ ಮಾಸ್ಟರ್ ಮೈಂಡ್ ಎಂದು ತಿಳಿದುಬಂದಿದೆ. ನಾಲ್ಕು ವರ್ಷಗಳ ಹಿಂದೆ ನಗರಕ್ಕೆ ಬಂದು ಬ್ಯೂಟಿ ಪಾರ್ಲರ್ ವೋಂದರಲ್ಲಿ ಸೆಲ್ಸ ಗರ್ಲ್ ಆಗಿದ್ದಳು. ಫೇಸ್ಬುಕ್ನಲ್ಲಿ ಪೀಟರ್ ಹಾಗೂ ಜೇಮ್ಸ್ ಎನ್ನುವವರ ಪರಿಚಯ ಮಾಡಿಕೊಂಡಿದ್ದ ರುಬಿಕಾ, ಜೇಮ್ಸ್ ಹಾಗೂ ಪೀಟರ್ ಮಾರ್ಗದರ್ಶನದಂತೆ ಅಕೌಂಟ್ ಹ್ಯಾಕ್ ಮಾಡಿ ಹಣ ಎಗರಿಸುತ್ತಿದ್ದಳು. ಸದ್ಯ ಆರೋಪಿಗಳನ್ನ ಬಂಧಿಸಿರುವ ಸೈಬರ್ ಕ್ರೈಂ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕನ್ನಡ ಸಾಹಿತ್ಯ ಸಮ್ಮೇಳನ ತಾಲೂಕಾಧ್ಯಕ್ಷರಾಗಿ ಸಿದ್ದು ಆಯ್ಕೆ.

ನವಲಿ ರಸ್ತೆಯ ಸರಕಾರಿ ಪದವಿ ಪೂರ್ವ ಕಾಲೇಜು ಆವರಣಲ್ಲಿ ಮಾ.7 ರಂದು ನಡೆಯಲಿರುವ ಪ್ರಪ್ರಥಮ ತಾಲೂಕಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇಂಗ್ಲಿಷ್ ಪ್ರಾಧ್ಯಾಪಕ, ಪ್ರಗತಿ ಪರ ಬರಹಗಾರ ಹಾಗೂ ಗದುಗಿನ ಕನಕದಾಸ ಶಿಕ್ಷಣ ಸಮಿತಿಯ ಪದವಿ ಪೂರ್ವ ಕಾಲೇಜ್‌ನ ಪ್ರಾಚಾರ್ಯ, ಗೌರವ ಸಂಪಾದಕ ಪ್ರೊ.ಸಿದ್ದು ಯಾಪಲಪರವಿ ಆಯ್ಕೆಯಾಗಿದ್ದಾರೆ.

ಕಣ್ಣೆದುರಿಗೆ ಕೊಳೆಯುತ್ತಿರುವ ಈರುಳ್ಳಿಯಿಂದ ಬದುಕು ಕಳೆಗುಂದುವ ಆತಂಕ..!

ದರದ ನಿರೀಕ್ಷೆಯೊಂದಿಗೆ ಪಟ್ಟಣದ ರೈತರು ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದು, ಉತ್ತಮ ಇಳುವರಿಯೂ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಯಾರು ಕೇಳದಂತಹ ಸ್ಥಿತಿ ನಿರ್ಮಾಣವಾಗಿದ್ದರಿಂದ ಸೂಕ್ತ ಬೆಲೆಯಿಲ್ಲದೆ ರೈತರು ಪರದಾಡುವಂತಾಗಿದೆ.

ಹೊಗಳು ಭಟ್ಟರಿಂದ ದೂರವಿರುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿದ ವಿಶ್ವನಾಥ್!

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಳ್ಳಿ ಹಕ್ಕಿ ಸಲಹೆ ನೀಡಿದೆ. ಅವರಿಗೆ ಪಕ್ಷದಲ್ಲಿ ಮನ್ನಣೆ ಸಿಗುತ್ತಿಲ್ಲ. ಅವರು ಹೊಗಳು ಭಟ್ಟರಿಂದ ದೂರ ಇರಬೇಕು ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.

ಆಡಿಯೋ ಕ್ಲಿಪ್ ಲೀಕ್ ಮಾಡಿದ್ದು ನಾನಲ್ಲ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಮತ್ತು ನವರಸನಾಯಕ ಜಗ್ಗೇಶ್ ನಡುವಿನ ವಾಗ್ವಾದ ತಾರಕಕ್ಕೇರಿದೆ. ಇದಕ್ಕೆಲ್ಲ ಕಾರಣವಾಗಿದ್ದು ಒಂದು ಆಡಿಯೋ ಕ್ಲಿಪ್.