ಬೆಂಗಳೂರು : ಸಿದ್ದರಾಮಯ್ಯ ಅವರೇ, ನಿಮ್ಮ ಈ ಸಾಧನೆಯನ್ನು ರಾಜ್ಯದ ಜನತೆ ಮರೆತಿಲ್ಲ. ಕಲಾಪ ಬಹಿಷ್ಕಾರ ನಿಮ್ಮ ದುರಹಂಕಾರ ಮತ್ತು ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿ. ರಾಜ್ಯದ ಇತಿಹಾಸದಲ್ಲಿ ಬಜೆಟ್ ಕಲಾಪ ಬಹಿಷ್ಕರಿಸಿದ್ದು ಇದೇ ಮೊದಲಾಗಿದ್ದು, ಇದಕ್ಕೆ ಪಶ್ಚಾತ್ತಾಪ ಪಡುವ ದಿನಗಳು ದೂರವಿಲ್ಲ ಎಂದು ಬಿಜೆಪಿ ಸರಣಿ ಟ್ವೀಟ್‍ಗಳನ್ನು ಮೂಡುವ ಮೂಲಕ ಟೀಕಿಸಿದೆ.

ಸಂವಿಧಾನ, ಪ್ರಜಾಪ್ರಭುತ್ವವನ್ನು ಧಿಕ್ಕರಿಸಿದ್ದು ನಿಮ್ಮ ಸಂತೋಷಕ್ಕೆ ಕಾರಣವೇ? ಜನವಿರೋಧಿ ಆಡಳಿತ ಮಾಡಿಕೊಂಡು ಬಂದ ಕಾಂಗ್ರೆಸ್ ಪಕ್ಷದಿಂದ ಪ್ರಜಾಪ್ರಭುತ್ವ, ಸದನದ ಬಗ್ಗೆ ಘನತೆ, ಗೌರವವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ಹೇಳಿದೆ.

ವೈಯಕ್ತಿಕ ಸಮಸ್ಯೆಗಾಗಿ ಗೌರವಾನ್ವಿತ ಸದನದಲ್ಲಿ ಬಟ್ಟೆ ಬಿಚ್ಚಲು ಶಾಸಕನಿಗೆ ನಿರ್ದೇಶನ ನೀಡುತ್ತಾರೆ ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲವೇ? ಇದು ಕೇವಲ ಸದನಕ್ಕೆ ಮಾಡಿದ ಅವಮಾನವಲ್ಲ. ರಾಜ್ಯದ ಜನತೆಗೆ ಮಾಡಿದ ಅವಮಾನ ಎಂದು ಬಿಜೆಪಿ ಹೇಳಿದೆ.

ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ ವೇಳೆ ಸಭಾತ್ಯಾಗ, ಕೃಷಿ ಕಾಯ್ದೆ ಮಂಡಿಸುವಾಗ ಸಭಾತ್ಯಾಗ, ಭೂ ಸುಧಾರಣಾ ಕಾಯ್ದೆ ಮಂಡಿಸುವಾಗಲೂ ಪಲಾಯನ, ಬಜೆಟ್ ಮಂಡಿಸುವಾಗಲೂ ಸಭಾತ್ಯಾಗ. ಚರ್ಚೆಗೆ ಅವಕಾಶ ನೀಡಿದಾಗ ಚರ್ಚೆ ಮಾಡದ ಕಾಂಗ್ರೆಸ್ ಪಲಾಯನವಾದ ಅನುಸರಿಸುತ್ತಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಪ್ರಶ್ನಿಸಿದೆ.

Leave a Reply

Your email address will not be published. Required fields are marked *

You May Also Like

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಸ್ಟಡಿಗೆ ನೀಡಿದ ಕೋರ್ಟ್!

ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಮಾನವೀಯತೆ ಸಂದೇಶ ವೇದಿಕೆ ವತಿಯಿಂದ ತಹಶೀಲ್ದಾರ್ ಹಾಗು ಪಿಎಸ್ಐ  ಧನ್ಯತಯ ಸಮರ್ಪಣೆ

ಉತ್ತರಪ್ರಭ ಸಿಂದಗಿ: ಅಖಿಲ ಭಾರತ ಸಂದೇಶ ವೇದಿಕೆ ಸಿಂದಗಿ ತಾಲೂಕಿನ ಘಟಕದ ವತಿಯಿಂದ ಬೇಸಿಗೆ ಕಾಲದಲ್ಲಿ…

ಜಿಲ್ಲಾದ್ಯಂತ ಶೇಕಡ 38.98 ಮತದಾನ: ಮದ್ಯಾಹ್ನ 1ಗಂಟೆವರೆಗಿನ ವಿವರ

ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ ಮಧ್ಯಾಹ್ನ 1=00 ಗಂಟೆಯವರೆಗೆ ಶೇಕಡಾವಾರು ಮತದಾನ ಇಂತಿದೆ.…

ಮುಂಬೈ ಎಕ್ಸಪ್ರೆಸ್ ನಲ್ಲಿ ಬಂದಿಳಿದರು 124 ಜನ..!

ಮುಂಬೈನಲ್ಲಿದ್ದ ಜನರು ಇಂದು ಮುಂಬೈ-ಗದಗ ಎಕ್ಸಪ್ರೆಸ್ ರೈಲಿನ ಮೂಲಕ ಗದಗ ನಗರಕ್ಕೆ ಆಗಮಿಸಿದರು. ಇದರಲ್ಲಿ 124 ಜನರು ರೈಲಿನ ಮೂಲಕ ನಗರಕ್ಕೆ ಆಗಮಿಸಿದರು.