ಬೆಳಗಾವಿ: ಮಹರಾಷ್ಟ್ರದಲ್ಲಿ ಕನ್ನಡ ಭಾಷೆ ನಾಮಫಲಕಕ್ಕೆ ಮಸಿ ಬಳೆದು ಅವಮಾನ ಮಾಡಿದ್ದು ವಿರೋಧಿಸಿ ಕರವೇ (ಶಿವರೇಗೌಡ ಬಣ) ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮ ಫಲಕಕ್ಕೆ ಮಸಿ ಬಳೆದು ವಿರೋಧ ವ್ಯಕ್ತಪಡಿಸಿದರು.
ಮಹರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಭಾಷೆಯ ನಾಮ ಫಲಕ್ಕೆ ಮಸಿ ಬಳೆದು ಕನ್ನಡಕ್ಕೆ ಅವಮಾನ ಮಾಡಿದ್ದು, ಬೆಳಗಾವಿಯ ಅಂಬೇಡ್ಕರ್ ರಸ್ತೆಯ ವಾಯ್ ಜಂಕ್ಷನ್ ಬಳಿಯ ಹೊಟೇಲ್ ಒಂದರಲ್ಲಿ ಮರಾಠಿ ಭಾಷೆಯ ನಾಮ ಫಲಕ್ಕೆ ಕಪ್ಪು ಮಸಿ ಬಳೆದು ಕರವೇ ಪ್ರತಿರೋಧ ವ್ಯಕ್ತಪಡಿಸಿದರು.