ಗಜೇಂದ್ರಗಡ: ಸಮೀಪದ ಕೊಡಗಾನೂರ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಭಕ್ತರ ಹರ್ಷೊದ್ಘಾರದ ಮಧ್ಯೆ ಶನಿವಾರ ಸಂಜೆ ಸಂಭ್ರಮದಿಂದ ನಡೆಯಿತು.

ಬೆಳಗ್ಗೆ ದೇಗುಲದಲ್ಲಿ ಶ್ರೀ ವೀರಭದ್ರೇಶ್ವರ ಮೂರ್ತಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಭಕ್ತಸಮೂಹ ಶ್ರೀ ವೀರಭದ್ರೇಶ್ವರ ಮಹಾರಾಜ ಕೀ ಜೈ ಎಂದು ಜಯಘೊಷ ಹಾಕುತ್ತಾ ಭಜನೆ, ಝಾಂಜಮೇಳ, ಡೊಳ್ಳು, ಕರಡಿ ಮಜಲು, ಡೊಳ್ಳು, ಸಂಗೀತ ವಾಧ್ಯ ವೈಭವದಿಂದ ನಂದಿಕೊಲು, ಛತ್ರ ಚಾಮರಗಳೊಂದಿಗೆ ಭಕ್ತಿ ಭಾವದಿಂದ ಭಕ್ತರು ಉತ್ತತ್ತಿ, ಬಾಳೆ ಹಣ್ಣುಗಳನ್ನು ಎಸೆದು ನಮನ ಸಲ್ಲಿಸಿದರು.

ರಥ ಯಶಸ್ವಿಯಾಗಿ ಮರಳಿ ಸ್ವಸ್ಥಳಕ್ಕೆ ಬಂದು ನಿಂತಾಗ ಭಕ್ತಾದಿಗಳು ಚಪ್ಪಾಳೆ ತಟ್ಟಿ ಭಕ್ತಿಭಾವದಿಂದ ಮರೆತರು. ಬಳಿಕ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಕಾಯಿ ಒಡೆಸಿ, ನೈವಿದ್ಯೆ ನೆರವೇರಿಸಿ ಕೃತಾರ್ಥರಾದರು.

Leave a Reply

Your email address will not be published. Required fields are marked *

You May Also Like

ವಿದ್ಯಾರ್ಥಿಗಲಿಗೆ ಈ ವರ್ಷ ಸೈಕಲ್ ಸಿಗೋದು ಡೌಟ್!

ರಾಜ್ಯದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜ್ಯ ಸರ್ಕಾರ ಈ ವರ್ಷ ಸೈಕಲ್ ಖರೀದಿಯನ್ನು ಕೈ ಬಿಡಲು ನಿರ್ಧರಿಸಿದೆ ಎನ್ನಲಾಗಿದೆ.

ಕೊರೊನಾ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ- ಸಿ.ಸಿ.ಪಾಟೀಲ್

ಕೊರೋನಾದ ಪರಿಣಾಮದಿಂದ ಕಂಗಾಲಾದ ನಾವು ನೀವೆಲ್ಲರೂ ಇದೀಗ ಹೊರಗಡೆ ಬಂದಂತಾಗಿದೆ, ಸುಮಾರು ದಿನಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳ ಪೂಜೆ ಮಾಡದೇ ಇರುವುದಕ್ಕೆ ಕಾರಣ ಈ ಮಹಾಮಾರಿ ಕರೋನ. ಇದರಿಂದ ದೇಶದ ಬೊಕ್ಕಸ, ರಾಜ್ಯದ ಬೊಕ್ಕಸ, ವ್ಯಾಪಾರಸ್ಥರಿಗೆ ಹಿನ್ನೆಡೆ ಮತ್ತು ಉದ್ಯಮಿಗಳಿಗೆ ಭಾರೀ ತೊಂದರೆ ಉಂಟಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಎಂಇಎಸ್ ಗೆ ಖಡಕ್ ವಾರ್ನಿಂಗ್…ಬೆಳಗಾವಿಯಲ್ಲಿ ಹೈ ಅಲರ್ಟ್!

ಬೆಳಗಾವಿ : ರಾಜ್ಯದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇದಕ್ಕೆ ಬೆಳಗಾವಿ ಜಿಲ್ಲೆ ಕೂಡ ಹೊರತಾಗಿಲ್ಲ. ಆದರೆ, ಕನ್ನಡ ಹಬ್ಬ ಆಚರಿಸುವ ಬದಲಾಗಿ ಕರಾಳ ದಿನಾಚರಣೆ ಆಚರಿಸಲು ಮುಂದಾಗಿದ್ದ ಎಂಇಎಸ್‍ ಗೆ ಮುಖ ಭಂಗವಾಗಿದೆ.

ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಸಿ ಸಿದ್ದಾರ್ಥನ್ ಅವಹೇಳನಕ್ಕೆ ಸೋಮು ಲಮಾಣಿ ಖಂಡನೆ..!

ಸೋಮು ಲಮಾಣಿ, ಅಧ್ಯಕ್ಷರು ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ಸಂಘ, ಕಾರ್ಯಾಧ್ಯಕ್ಷರು ಲಂಬಾಣಿ ಬಂಜಾರಾ ಕಲ್ಯಾಣ ಸಂಘ, ಗದಗ ಹಾಗೂ ಸಂಘಟನಾ ಕಾರ್ಯದರ್ಶಿ ಕಾಂಗ್ರೆಸ್ ಸಮಿತಿ ಗದಗ ಜಿಲ್ಲೆ (ಎಸ್.ಸಿ ಘಟಕ).