ಬೆಂಗಳೂರು : ಬಿಜೆಪಿ ತನ್ನ ಮನುವಾದಿ ಸಿದ್ಧಾಂತವನ್ನು ಸಮಾಜದೊಳಗೆ ವ್ಯವಸ್ಥಿತವಾಗಿ ಮತ್ತೆ ಸ್ಥಾಪಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ, ದಲಿತ ವಿರೋಧಿಯಾಗಿರುವ ಬಿಜೆಪಿ ಸರ್ಕಾರ ಮನುವಾದಿ ಸಿದ್ಧಾಂತವನ್ನು ಸ್ಥಾಪಿಸುತ್ತಿದ್ದು, ಈ ರೀತಿ ಮುನ್ನಡೆದರೆ ಮುಂದಿನ ದಿನಗಳಲ್ಲಿ ಸಮಾಜದ ಸ್ವಾಸ್ಥ್ಯ ಹದಗೆಡುವುದು ದಿಟ. ಸಂಸದ ಎ ನಾರಾಯಣಸ್ವಾಮೀ ಅವರೇ ಇಂತಹ ಸ್ಥಿತಿ ಎದುರಿಸಿದ್ದು, ಬಿಜೆಪಿ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಜನಪ್ರತಿನಿಧಿಗಳ ಪಾಡೇ ಹೀಗಾದರೆ ಜನ ಸಮಾನ್ಯರ ಸ್ಥಿತಿ ಹೇಗೆ? ಎಂಬ ಪ್ರಶ್ನೆ ಎದುರಾಗಿದೆ ಎಂದು ಟ್ವೀಟ್ ಮಾಡಲಾಗಿದೆ.