ಬೆಂಗಳೂರು : ಬ್ರಷ್ಟಾಚಾರದ ವಿಷಯವೀಗ ಕೈ-ಕಮಲದ ಟ್ವೀಟ್ ಸಮರಕ್ಕೆ ಕಾರಣವಾಗಿದೆ. ಡಿಕೆಶಿ ವಿಚಾರವಾಗಿ ಬಿಜೆಪಿ ಟ್ವೀಟ್ ಮಾಡಿದರೆ, ಸಿಎಂ ಬಿಎಸ್ವೈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡ ಭ್ರಷ್ಟಾಚಾರದ ಆರೋಪಿಯನ್ನು ಮೆರವಣಿಗೆಯ ಮೂಲಕ ಕರೆದುಕೊಂಡು ಬಂದು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡಿದೆ. ಭ್ರಷ್ಟ ಹಣದ ಮದದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಬೆನ್ನುಮೂಳೆ ಗಟ್ಟಿಯಾಗಿದೆ ಎಂದು ಅಧ್ಯಕ್ಷ ಸ್ಥಾನ ನೀಡಿದ್ದೇ. ಗಲಭೆ ಆರೋಪಿಯೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವುದು ಯಾವುದಕ್ಕೆ ನಿದರ್ಶನ ಎಂದು ಬಿಜೆಪಿ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪ್ರಶ್ನಿಸಿದೆ.

ಇದಕ್ಕೆ ಪ್ರತ್ಯುತ್ತರವಾಗಿ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಸಿಎಂ ಯಡಿಯೂರಪ್ಪ ಅವರನ್ನು ಮೆರವಣಿಗೆ ಮಾಡಿ ಕರೆತಂದು, ಪ್ರಕರಣಗಳು ಚಾಲ್ತಿಯಲ್ಲಿದ್ದರೂ ಸಿಎಂ ಮಾಡಿದ್ದೀರಲ್ಲ. ಬೆನ್ನುಮೂಳೆ ಗಟ್ಟಿ ಇರುವವರು ಬಿಜೆಪಿ ಪಕ್ಷಕ್ಕೆ ಯಾರೂ ಸಿಗಲಿಲ್ಲವೇ…? ಎಂದು ಕಾಂಗ್ರೆಸ್ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಬಿಜೆಪಿಗೆ ಮಾತಿನ ತಿರುಗೇಟು ನೀಡಿದೆ.

Leave a Reply

Your email address will not be published. Required fields are marked *

You May Also Like

ವಿಜಯ ನಗರ ಶುಗರ್ಸ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಕೊಲೆ!

ತಲೆಯ ಮೇಲೆ ಕಲ್ಲು ಎತ್ತಿಹಾಕಿ ಸೆಕ್ಯೂರಿಟಿ ಗಾರ್ಡ್ ನನ್ನು ಕೊಲೆ ಮಾಡಿದ ಘಟನೆ ತಡರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಆನ್ ಲೈನ್ ಶಿಕ್ಷಣದ ಬಗ್ಗೆ ನಾಳೆ ಮಹತ್ವದ ಸಭೆ: ಸಚಿವ ಸುರೇಶ್ ಕುಮಾರ್

ಎಲ್ ಕೆಜಿ, ಯುಕೆಜಿ ಆನ್ ಲೈನ್ ಶಿಕ್ಷಣ ಒಳಿತಲ್ಲ. ಪ್ರಾಥಮಿಕ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ಒಳಿತಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ನಿಡಗುಂದಿ: ಶಾಲಾ,ಕಾಲೇಜ್ ಆಡಳಿತ ಮಂಡಳಿ, ಶಿಕ್ಷಣ ಅಧಿಕಾರಿಗಳ ಸಭೆ- ಶಾಂತಿ,ಸುವ್ಯವಸ್ಥೆ ಕಾಪಾಡಲು ಮನವಿ ಹೈಕೋರ್ಟ್ ಆದೇಶ ಪಾಲಿಸಲು ಸಲಹೆ

ನಿಡಗುಂದಿ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ದಾಖಲಾಗಿರುವ ರಿಟ್ ಅರ್ಜಿಗಳ ವಿಚಾರಣೆ ಇತ್ಯರ್ಥ…

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆಯ ಮೇರೆಗೆ ವಿಧಾನ ಪರಿತ್ತಿಗೆ ಕಾಂಗ್ರೆಸ್ ಪಕ್ಷ…