ಬಾಗಲಕೋಟೆ : ಮಾಜಿ ಸಚಿವರ ಸಿ.ಡಿ.ಪ್ರಕರಣದ ಸಂತ್ರಸ್ತ ಯುವತಿಗೆ ತಂದೆಯ ಊರಿನಿಂದ ಬೆಂಬಲ ವ್ಯಕ್ತವಾಗಿದೆ.
ಯುವತಿ ಮತ್ತು ಆಕೆಯ ಕುಟುಂಬಸ್ಥರು ಯಾವುದೇ ಕಾರಣಕ್ಕೂ ಜೀವಕ್ಕೆ ಅಪಾಯ ಮಾಡಿಕೊಳ್ಳಲು ಮುಂದಾಗಬಾರದು. ಗುಡೂರ ಗ್ರಾಮಸ್ಥರು ನಿಮ್ಮ ಜತೆಗಿದ್ದೇವೆ. ಜೀವಕ್ಕೆ ತೊಂದರೆ ಮಾಡಿಕೊಂಡರೆ ಪ್ರಕರಣದಲ್ಲಿ ನ್ಯಾಯ ಸಿಗುವುದಿಲ್ಲ. ಏನಾದರೂ ಸಮಸ್ಯೆಯಾದರೆ ಗ್ರಾಮಸ್ಥರನ್ನು ಸಂಪರ್ಕಿಸಿ ಎಂದು ಸಾಮಾಜಿಕ ಕಾರ್ಯಕರ್ತೆ ಸಹನಾ ಅಂಗಡಿ ಹೇಳಿದ್ದಾರೆ.
ಸಿ.ಡಿ.ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಒಮ್ಮೆ ಆಕೆಯ ಮನೆಗೆ ಹೋಗಿ ವಿಚಾರಣೆ ನಡೆಸಿದ್ದಾರ