ಕೋಲಾರ : ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಲು 25/3/2021ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾ ಪಂಚಾಯಿತಿ ಹೊರಗುತ್ತಿಗೆ ಆಧಾರದ ಮೇಲೆ ತಾಲೂಕು ಪಂಚಾಯಿತಿ ಮಟ್ಟದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ತಾಂತ್ರಿಕ ಸಹಾಯಕರು 4 (ತೋಟಗಾರಿಕೆ 3, ಅರಣ್ಯ 1) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಖುದ್ದಾಗಿ ಸಲ್ಲಿಕೆ ಮಾಡುವುದು.

ತಾಂತ್ರಿಕ ಸಹಾಯಕರು ತೋಟಗಾರಿಕೆ 3 ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ತೋಟಗಾರಿಕೆ ವಿಷಯದಲ್ಲಿ ಬಿ. ಎಸ್‌ಸಿ/ ಎಂ. ಎಸ್‌ಸಿ ವ್ಯಾಸಂಗ ಮಾಡಿರಬೇಕು. ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಅಭ್ಯರ್ಥಿಗಳಿಗೆ 21 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಭಾವನೆ 24,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500).

ತಾಂತ್ರಿಕ ಸಹಾಯಕರು ಅರಣ್ಯ ಹುದ್ದೆಗೆ ಫಾರೆಸ್ಟರಿ ವಿಷಯದಲ್ಲಿ ಬಿ. ಎಸ್‌ಸಿ/ ಎಂ. ಎಸ್‌ಸಿ ವ್ಯಾಸಂಗ ಮಾಡಿರಬೇಕು. ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21 ರಿಂದ 40 ವರ್ಷ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಭಾವನೆ 24,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500).

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ವಿ. ಸತೀಶ್ ಕುಮಾರ್, ಎಡಿಪಿಸಿ, ಜಿಲ್ಲಾ ಪಂಚಾಯಿತಿ ಕೋಲಾರ, ದೂರವಾಣಿ ಸಂಖ್ಯೆ 9108735005 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ‌ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಈ ವರ್ಷ ಮುಂಗಾರು ಮಳೆ ರಾಜ್ಯವನ್ನು ಯಾವಾಗ ಪ್ರವೇಶಿಸಲಿದೆ ಗೊತ್ತಾ?

ನೈರುತ್ಯ ಮುಂಗಾರು ಮಳೆ ಜೂ. 1ಕ್ಕೆ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಸುರಿಯುತ್ತಿರುವ ಭೀಕರ ಮಳೆ!!

ಬೆಂಗಳೂರು : ರಾಜ್ಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಬೆಂಬಿಡದೆ ಮಳೆ ಸುರಿಯುತ್ತಿದೆ.

1xChoice Официальный Сайт Регистрация И Вход В Личный Кабинет 1хбет

1xBet Вход Вход В 1хбет На Официальный Сайт Через Актуальное Зеркало Под…

ದೆಹಲಿಗೆ ಆಮ್ಲಜನಕ ಕಳುಹಿಸಲು ಸಿದ್ಧತೆ ನೆಡಸಿದ ಕೇರಳ

ರಾಷ್ಟ್ರ ರಾಜಧಾನಿಯಲ್ಲಿ ವೈದ್ಯಕೀಯ ಆಮ್ಲಜನಕದ ದಾಸ್ತಾನು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಕೇರಳವು ದೆಹಲಿಗೆ ಸಹಾಯ ಹಸ್ತ ಚಾಚಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಮಲಯಾಳಿ ಸಂಘಟನೆಗಳ ಮನವಿಗಳಿಗೆ ಸ್ಪಂದಿಸಿ ನೆರವು ನೀಡಲು ಕೇರಳ ಸರ್ಕಾರ ಸಿದ್ಧತೆ ನಡೆಸಿದೆ.