ಕೋಲಾರ : ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಲು 25/3/2021ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾ ಪಂಚಾಯಿತಿ ಹೊರಗುತ್ತಿಗೆ ಆಧಾರದ ಮೇಲೆ ತಾಲೂಕು ಪಂಚಾಯಿತಿ ಮಟ್ಟದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ತಾಂತ್ರಿಕ ಸಹಾಯಕರು 4 (ತೋಟಗಾರಿಕೆ 3, ಅರಣ್ಯ 1) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಖುದ್ದಾಗಿ ಸಲ್ಲಿಕೆ ಮಾಡುವುದು.

ತಾಂತ್ರಿಕ ಸಹಾಯಕರು ತೋಟಗಾರಿಕೆ 3 ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ತೋಟಗಾರಿಕೆ ವಿಷಯದಲ್ಲಿ ಬಿ. ಎಸ್‌ಸಿ/ ಎಂ. ಎಸ್‌ಸಿ ವ್ಯಾಸಂಗ ಮಾಡಿರಬೇಕು. ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಅಭ್ಯರ್ಥಿಗಳಿಗೆ 21 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಭಾವನೆ 24,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500).

ತಾಂತ್ರಿಕ ಸಹಾಯಕರು ಅರಣ್ಯ ಹುದ್ದೆಗೆ ಫಾರೆಸ್ಟರಿ ವಿಷಯದಲ್ಲಿ ಬಿ. ಎಸ್‌ಸಿ/ ಎಂ. ಎಸ್‌ಸಿ ವ್ಯಾಸಂಗ ಮಾಡಿರಬೇಕು. ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21 ರಿಂದ 40 ವರ್ಷ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಭಾವನೆ 24,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500).

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ವಿ. ಸತೀಶ್ ಕುಮಾರ್, ಎಡಿಪಿಸಿ, ಜಿಲ್ಲಾ ಪಂಚಾಯಿತಿ ಕೋಲಾರ, ದೂರವಾಣಿ ಸಂಖ್ಯೆ 9108735005 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ‌ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ದುಷ್ಕರ್ಮಿಗಳ ದುಷ್ಕೃತ್ಯಕ್ಕೆ ಕೈಸೇರಬೇಕಿದ್ದ ಲಕ್ಷಾಂತರ ಆದಾಯದ ಬೆಳೆ ನಾಶ ನಾಶ!

ರೈತರಿಗೆ ಭೂತಾಯಿಯೇ ಎಲ್ಲವೂ. ಆದರೆ ಭೂತಾಯಿಯನ್ನು ನಂಬಿ ಇನ್ನೇನು ಮೆಣಸಿನಕಾಯಿ, ಈರುಳ್ಳಿ ಬೆಳೆ ಕೈಸೇರುತ್ತೆ ಎನ್ನುವ ಲೆಕ್ಕಾಚಾರದಲ್ಲಿದ್ದ ಅನ್ನದಾತನಿಗೆ ಬುಧುವಾರದ ಬೆಳಕು ಆಘಾತದ ಸುದ್ದಿಯನ್ನು ಹೊತ್ತು ತಂದಿತ್ತು.

ಮಾಸ್ಕ-ಸಾಮಾಜಿಕ ಅಂತರಕಡ್ಡಾಯ : ಪಾಲಿಸದಿದ್ದರೆ ದಂಡ

ಇಂದಿನಿಂದ ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, ರ್ಯಾಲಿಗೆ ಅವಕಾಶವಿಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ನಿಯಮ ಪಾಲಿಸದಿದ್ದರೇ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

GTTC ಸಂಸ್ಥೆ ಧಾರವಾಡದಲ್ಲಿ ಯೋಗ ದಿನಾಚರಣೆ

ಉತ್ತರಪ್ರಭಧಾರವಾಡ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ರಾಯಾಪುರ ಧಾರವಾಡದಲ್ಲಿ 8 ನೇ ಅಂತಾರಾಷ್ಟ್ರೀಯ ಯೋಗ…

ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಬಿಕೋ ಎನ್ನುತ್ತಿದೆ ಗಜೇಂದ್ರಗಡ ಬಸ್ ನಿಲ್ದಾಣ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಸಾರಿಗೆ ನೌಕರರ ಅನಿರ್ಧಿಷ್ಠಾವಧಿ ಮುಷ್ಕರ ಮೂರನೇ ದಿನಕ್ಕೆ ಮುಂದುವರೆದಿದೆ. ಹೀಗಾಗಿ ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ಸಾರಿಗೆ ಸಂಚಾರ ಇಲ್ಲದೇ, ಬಿಕೋ ಎನ್ನುತ್ತಿತ್ತು.