ಮುಂಡರಗಿ: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಘಟನೆ ನಡೆದಿದೆ.

ಬಸ್ ಬ್ರೆಕ್ ಫೇಲ್ ಆಗಿ ಅಪಘಾತಕ್ಕಿಡಾಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಚಾಲಕ ಮುತವರ್ಜಿ ವಹಿಸಿದ್ದರಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದರು.

ಶಿರಹಟ್ಟಿಯಿಂದ ಮುಂಡರಗಿ ಪಟ್ಟಣಕ್ಕೆ ಬರುತ್ತಿದ್ದ ಬಸ್ ಬ್ರೇಕ್ ಫೇಲ್ ಆಗುತ್ತಿದ್ದಂತೆ ಕ್ಷಣಮಾತ್ರದಲ್ಲಿ ಬಸ್ ಚಾಲಕ ಎಚ್ಚೆತ್ತುಕೊಂಡಿದ್ದಾನೆ. ಈ ವೇಳೆ ರಸ್ತೆಗೆ ಹೊಂದಿಕೊಂಡ ಗುಡ್ಡಕ್ಕೆ ಬಸ್ ಏರಿಸಿ ಪ್ರಯಾಣಿಕರ ಪ್ರಾಣ ರಕ್ಷಣೆ ಮಾಡಿದ್ದಾನೆ. ಈ ಮೂಲಕ ಪ್ರಯಾಣಿಕರಿಗೆ ಯಾವುದೇ ಹಾನಿಯಾಗದಂತೆ ಬಸ್ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾನೆ. ಇದರಿಂದ ಚಾಲಕನ ಈ ಕಾರ್ಯ ಪ್ರಯಾಣಿಕರ ಮೆಚ್ಚುಗೆಗೆ ಪಾತ್ರವಾಯಿತು.

Leave a Reply

Your email address will not be published. Required fields are marked *

You May Also Like

ಜಿಲ್ಲೆಯಲ್ಲಿ ಚೆಲ್ಲುಭತ್ತ ನಿಧಾನಕ್ಕೆ ಕಾಲೂರಿದೆ

ದಾವಣಗೆರೆ ಮತ್ತು ಹೊನ್ನಾಳಿ ತಾಲ್ಲೂಕುಗಳಲ್ಲಿ ನಾಟಿಭತ್ತಕ್ಕಿಂತ ಚೆಲ್ಲುಭತ್ತಕ್ಕೆ ರೈತರು ಪ್ರಾಮುಖ್ಯ ನೀಡುತ್ತಿದ್ದು, ಕಡಿಮೆ ವೆಚ್ಚ, ಸುಲಭ ಕೃಷಿಗೆ ಹೇಳಿ ಮಾಡಿಸಿದಂತಿರುವ ಚೆಲ್ಲುಭತ್ತ ಪದ್ಧತಿ ಜಿಲ್ಲೆಯಲ್ಲಿ ನಿಧಾನಕ್ಕೆ ಕಾಲೂರುತ್ತಿದೆ.

ನಿಡಗುಂದಿ: ಶಾಲಾ,ಕಾಲೇಜ್ ಆಡಳಿತ ಮಂಡಳಿ, ಶಿಕ್ಷಣ ಅಧಿಕಾರಿಗಳ ಸಭೆ- ಶಾಂತಿ,ಸುವ್ಯವಸ್ಥೆ ಕಾಪಾಡಲು ಮನವಿ ಹೈಕೋರ್ಟ್ ಆದೇಶ ಪಾಲಿಸಲು ಸಲಹೆ

ನಿಡಗುಂದಿ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ದಾಖಲಾಗಿರುವ ರಿಟ್ ಅರ್ಜಿಗಳ ವಿಚಾರಣೆ ಇತ್ಯರ್ಥ…

ಭಾರಿ ಮಳೆಗೆ ಬೆಂಗಳೂರಿನಲ್ಲಾದ ಅನಾಹುತಗಳು..!

ಬೆಂಗಳೂರು: ನಗರದಲ್ಲಿ ಉತ್ತಮ ಮಳೆ ಸುರಿದಿದ್ದು, ಇಂದು ಸುರಿದ ಮಳೆಗೆ ಉದ್ಯಾನ ನಗರಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ.…

ನಿವೃತ್ತ ಪಿಡಿಓ ಟಿ. ಮಹಮದಲಿ ನಿಧನ

ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರಾಗಿ ಸೇರಿಕೊಂಡು ಹಂತಹಂತವಾಗಿ ಮುಂಬಡ್ತಿ ಪಡೆದು ಕಾರ್ಯದರ್ಶಿ ಹುದ್ದೆಗೇರಿ ಪಿಡಿಒ ಆಗಿ ಬಡ್ತಿ…