ಮುಂಡರಗಿ: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಘಟನೆ ನಡೆದಿದೆ.

ಬಸ್ ಬ್ರೆಕ್ ಫೇಲ್ ಆಗಿ ಅಪಘಾತಕ್ಕಿಡಾಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಚಾಲಕ ಮುತವರ್ಜಿ ವಹಿಸಿದ್ದರಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದರು.

ಶಿರಹಟ್ಟಿಯಿಂದ ಮುಂಡರಗಿ ಪಟ್ಟಣಕ್ಕೆ ಬರುತ್ತಿದ್ದ ಬಸ್ ಬ್ರೇಕ್ ಫೇಲ್ ಆಗುತ್ತಿದ್ದಂತೆ ಕ್ಷಣಮಾತ್ರದಲ್ಲಿ ಬಸ್ ಚಾಲಕ ಎಚ್ಚೆತ್ತುಕೊಂಡಿದ್ದಾನೆ. ಈ ವೇಳೆ ರಸ್ತೆಗೆ ಹೊಂದಿಕೊಂಡ ಗುಡ್ಡಕ್ಕೆ ಬಸ್ ಏರಿಸಿ ಪ್ರಯಾಣಿಕರ ಪ್ರಾಣ ರಕ್ಷಣೆ ಮಾಡಿದ್ದಾನೆ. ಈ ಮೂಲಕ ಪ್ರಯಾಣಿಕರಿಗೆ ಯಾವುದೇ ಹಾನಿಯಾಗದಂತೆ ಬಸ್ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾನೆ. ಇದರಿಂದ ಚಾಲಕನ ಈ ಕಾರ್ಯ ಪ್ರಯಾಣಿಕರ ಮೆಚ್ಚುಗೆಗೆ ಪಾತ್ರವಾಯಿತು.

Leave a Reply

Your email address will not be published. Required fields are marked *

You May Also Like

ಕೃಷ್ಣೆಯ ಒಡಲಿಗೆ ಸಿಎಂ ಬಾಗಿನ ಅರ್ಪಣೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಮುಸುಕು ಮುಸುಕು.ಕೂಲ್ ಥಂಢಾ ಸಂಭ್ರಮದ ವಾತಾವರಣ. ಹೂ, ಸಸ್ಯ ಗುಚ್ಚುಗಳ ಸೊಬಗು. ತಳಿರು…

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 348. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4804 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2824 ಸಕ್ರೀಯ ಪ್ರಕರಣಗಳಿವೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಯುವವರೆಗೂ ಲಾಕ್ ಡೌನ್ ಇಲ್ಲ!

ಬೆಂಗಳೂರು : ಲಾಕ್ ಡೌನ್ ತೆರವುಗೊಂಡ ನಂತರ ರಾಜ್ಯ ಸೇರಿದಂತೆ ದೇಶದಲ್ಲಿ ಕೊರೊನಾ ಸ್ಪೋಟಗೊಂಡಿದೆ. ಹೀಗಾಗಿ…