ಸಿಡಿ ಪ್ರಕರಣ : ಸತ್ಯಾಂಶ ತಿಳಿಯದೆ ಹೆಸರು ಹೇಳಬಾರದು

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ. ನಾಲ್ಕೈದು ಜನ ಸೇರಿಕೊಂಡು ಷಡ್ಯಂತ್ರ ಮಾಡಿದ್ದಾರೆ ಎಂದು ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಮಪ್ಪ ಹೇಳಿದ್ದಾರೆ.
ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಮಹಾನಾಯಕ ಎಂದು ಹೇಳಿದ್ದಾರೆ. ಆದರೆ, ಎಲ್ಲೂ ಕೆಪಿಸಿಸಿ ಅಧ್ಯಕ್ಷ ಎಂದು ಸ್ಪಷ್ಟಪಡಿಸಿಲ್ಲ. ಸತ್ಯಾಂಶ ತಿಳಿಯದೇ ಯಾರ ಹೆಸರನ್ನೂ ಹೇಳಬಾರದು. ಸಂಪರ‍್ಣ ತನಿಖೆಯಾದ ಬಳಿಕ ಸತ್ಯಾಂಶ ಹೊರಬೀಳಲಿದೆ ಎಂದರು.

Exit mobile version