ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ನಿಧಿ ನೀಡದ ಮನೆಗಳನ್ನು ಗುರುತಿಸುವ ಸಂಸ್ಕೃತಿ ನಮ್ಮದಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕೆ ಹೇಳಿಕೆಗೆ ಆರೆಸ್ಸೆಸ್ ಸರ ಸಂಘ ಚಾಲಕ ಡಾ.ಮೋಹನ್ ಭಾಗವತ್ ಅವರು ತುರುಗೇಟು ನೀಡಿದ್ದಾರೆ.
ಚನ್ನೇನಹಳ್ಳಿಯಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ ಸ್ಥಳದಲ್ಲಿ ಸುದ್ದಿಗೋಷ್ಠಿಯಲ್ಲಿ ಆರೆಸ್ಸೆಸ್ ಸರ ಸಂಘಚಾಲಕ ಡಾ. ಮೋಹನ್ ಭಾಗವತ್ ಮಾತನಾಡಿದರು.
ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹ ಅಭಿಯಾನದ ವೇಳೆ ದೇಶದಲ್ಲಿ 12 ಕೋಟಿಗೂ ಹೆಚ್ಚು ಪರಿವಾರಗಳನ್ನು ತಲುಪಿದ್ದೇವೆ. ಹೆಚ್ಚು ಮನೆಗಳಿಗೆ ತಲುಪುವುದು ನಮ್ಮ ಗುರಿ ಆಗುತ್ತೇ ವಿನಃ ಹೆಚ್ಚು ಹಣ ಸಂಗ್ರಹ ಮಾಡುವುದಲ್ಲ. ಹಣ ನೀಡದ ಮನೆಗಳನ್ನು ಮಾರ್ಕ್ ಮಾಡುವ ಸಂಸ್ಕೃತಿ ನಮ್ಮದಲ್ಲ. ಇಡೀ ಸಮಾಜವನ್ನು ಒಟ್ಟಿಗೆ ಜೋಡಿಸುವತ್ತ ನಾವು ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.