ಬೆಂಗಳೂರು: ಚಲನಚಿತ್ರ ಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ಮಾಡಿಕೊಡಬೇಕು ಎಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾಗಿದ್ದ ಸ್ಯಾಂಡಲ್‌ವುಡ್ ಇದೀಗ ತಾನೇ ಚೇತರಿಸಿಕೊಳ್ಳುತ್ತಿದೆ. ಆರ್ಥಿಕತೆ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.

ಹೀಗಾಗಿ ಸಿನಿಮಾ ಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ಮಾಡಿಕೊಡಬೇಕೆಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸರ್ಕಾರ ರಾಜಕೀಯ ಸಭೆ, ಸಮಾರಂಭ, ರ್ಯಾಲಿಗಳನ್ನು ಬಂದ್ ಮಾಡಬೇಕು. ಆ ಮೂಲಕ ಕೊರೊನಾ ತಡೆಗಟ್ಟಬಹುದಾಗಿದೆ ರ್ಯಾಲಿಗಳಲ್ಲಿ ಸಾವಿರಾರು ಮಂದಿ ಬೇರೆ ಬೇರೆ ಊರುಗಳಿಂದ ಆಗಮಿಸುವುದರಿಂದ ಸೋಂಕು ತಗುಲುವ ಸಾಧ್ಯತೆ ಇರುತ್ತದೆ.

ಈ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇದನ್ನು ಬಿಟ್ಟು ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಸೀಟುಗಳಿಗೆ ಮಾತ್ರ ಅವಕಾಶ ನೀಡಲು ಮುಂದಾಗಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like
ಹೂವಿನ ಹಡಗಲಿ: ಬಳ್ಳಾರಿ ಜಿಲ್ಲೆಯ ಹೂನಿನ ಹಡಗಲಿ ತಾಲೂಕಿನಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ಒಟ್ಟು 9…

ಗದಗ ಜಿಲ್ಲೆಯಲ್ಲಿ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಿದರೆ ಪರವಾನಿಗೆ ರದ್ದಾಗುತ್ತಂತೆ!

ರಸಗೊಬ್ಬರ ದಾಸ್ತಾನನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ರಸಗೊಬ್ಬರ ಪರವಾನಿಗೆಯನ್ನು ರದ್ದುಗೊಳಿಸಿ, ಕಾನೂನು ಕ್ರಮ ಜರುಗಿಸಲಾಗುವುದು. ರಸಗೊಬ್ಬರ ಮಾರಾಟಗಾರರು ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ರೈತ ಬಾಂಧವರು ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಈ ಕೆಳಗಿನ ದೂರವಾಣಿಗಳನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ತಿಳಿಸಿದ್ದಾರೆ.

ಕೊರೊನಾ ಮಧ್ಯೆಯೇ ಚಿತ್ರದ ಮುಹೂರ್ತ ಫಿಕ್ಸ್!

ಲಾಕ್ ಡೌನ್ ನಿಂದಾಗಿ ಬಿಡುವು ಪಡೆದಿದ್ದ ಸೆನ್ಸಾರ್ ಮಂಡಳಿ ಸದ್ಯ ಮತ್ತೆ ಕೆಲಸ ಆರಂಭಿಸಿದೆ. ಅಲ್ಲದೇ, ಚಿತ್ರರಂಗ ಕೂಡ ತನ್ನ ಕೆಲಸ ಪ್ರಾರಂಭಿಸಿದೆ.

ಪತ್ನಿಯ ಬೆತ್ತಲೆ ಫೋಟೋ ಇಟ್ಟುಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟ ಪತಿ!

ಪಂಜಾಬ್ : ಹೆಂಡತಿ ಸ್ನಾನ ಮಾಡುತ್ತಿದ್ದ ಫೋಟೋಗಳನ್ನೇ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.