ಗದಗ: ಬಿಂಕದಕಟ್ಟಿ ಮೃಗಾಲಯಕ್ಕೆ ಗುರುವಾರ ತಡರಾತ್ರಿ 11 ವರ್ಷದ ಧರ್ಮ ಮತ್ತು ಅರ್ಜುನ ಹೆಸರಿನ ಗಂಡು ಸಿಂಹಗಳು ಗುರುವಾರ ತಡರಾತ್ರಿ ಆಗಮಿಸಿವೆ.

ಕೇಂದ್ರ ಮೃಗಾಲಯ ಪ್ರಾಧಿಕಾರವು ಬಿಂಕದಕಟ್ಟಿ ಕಿರು ಮೃಗಾಲಯಕ್ಕೆ ಜೋಡಿ ಸಿಂಹಗಳ ಹಸ್ತಾಂತರಕ್ಕೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ ಎರಡು ಗಂಡು ಸಿಂಹಗಳು ಆಗಮಿಸಿವೆ.

ಸಿಂಹಗಳು ಸ್ವಚ್ಛಂದವಾಗಿ ವಿಹರಿಸಲು ಅನುಕೂಲಕರವಾದ ವಾತಾವರಣ ನಿರ್ಮಿಸಲಾಗಿದೆ. ಇದಕ್ಕಾಗಿ 1 ಸಾವಿರ ಚ.ಮೀ. ಸ್ಥಳ ಮೀಸಲಿಡಲಾಗಿದ್ದು, ಸಿಂಹಗಳಿಗಾಗಿ ಪ್ರಾಣಿ ಸಂಗ್ರಹಾಲಯದಲ್ಲಿ ನೈಸರ್ಗಿಕ ಆವಾಸ ಸ್ಥಾನದ ಮಾದರಿಯಲ್ಲೇ ವಿಶೇಷ ಪಂಜರ ಸಿದ್ದಪಡಿಸಲಾಗಿದೆ. ಕಲ್ಲಿನ ಬಂಡೆಗಳು, ನೀರಿನ ಹೊಂಡ, ಗಿಡ-ಮರಗಳಿರುವಂತೆ ಸಿದ್ಧಪಡಿಸಲಾಗಿದೆ.

ಬಿಂಕದಕಟ್ಟಿ ಸಂಗ್ರಹಾಲಯದಲ್ಲಿ ಕತ್ತೆ ಕಿರುಬ ವೀಕ್ಷಿಸಲು ಗಾಜಿನ ಪರದೆಯ ವ್ಯವಸ್ಥೆ ಮಾಡಿದ್ದು, ಅದರಂತೆ ಸಿಂಹಗಳನ್ನು ವೀಕ್ಷಿಸಲು 39 ಎಂಎಂ ಗಾಜಿನ ಪರದೆ ವ್ಯವಸ್ಥೆ ಮಾಡಲಾಗಿದೆ. ಈ ಗಾಜುಗಳನ್ನು ಚಂಡಿಗಢದಿಂದ ತರಿಸಿಕೊಳ್ಳಲಾಗುತ್ತಿದೆ. ಉತ್ತರ ಕರ್ನಾಟಕದಲ್ಲೇ ಬಿಂಕದಕಟ್ಟಿ ಮೃಗಾಲಯವು ಎರಡು ವರ್ಷಗಳ ಹಿಂದಷ್ಟೇ ಜೋಡಿ ಹುಲಿಗಳನ್ನು ಹೊಂದಿರುವ ಖ್ಯಾತಿ ಪಡೆದಿತ್ತು. ಇದೀಗ ಜೋಡಿ ಸಿಂಹಗಳು ಆಗಮಿಸುವ ಮೂಲಕ ಮೃಗಾಲಯದ ಮೆರಗನ್ನು ಇನ್ನಷ್ಟು ಹೆಚ್ಚಿಸಿವೆ.

ಧರ್ಮಾರ್ಜುನ ಸಿಂಹಗಳೆರಡು ಬಯಲು ಸೀಮೆಯ ಪರಿಸರಕ್ಕೆ ಹೊಂದಿಕೊಳ್ಳುವವರೆಗೆ ಸದ್ಯ ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿಲ್ಲ. ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿ ಅನ್ವಯ ಸಿಂಹಗಳನ್ನು 15-30 ದಿನಗಳವರೆಗೆ ನಿಗಾದಲ್ಲಿಟ್ಟು, ಇಲ್ಲಿನ ಪರಿಸರಕ್ಕೆ ಹೊಂದಿಕೊಂಡ ಬಳಿಕ ಪ್ರವಾಸಿಗರ ವೀಕ್ಷಣೆಗೆ ಅವಕಾಸ ಕಲ್ಪಿಸಲಾಗುವುದು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 515 ಕೊರೊನಾ ಸೋಂಕಿತರಲ್ಲಿ 482 ಕೇಸ್ ಗೆ ಅಂತರಾಜ್ಯ ಹಿನ್ನೆಲೆ: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 515 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4835 ಕ್ಕೆ ಏರಿಕೆಯಾದಂತಾಗಿದೆ.

ಸಸಿ ವಿತರಿಸಿದ ಅರಣ್ಯಾಧಿಕಾರಿ

ಈಗಾಗಲೇ ಮುಂಗಾರು ಹಂಗಾಮು ಆರಂಭವಾಗಿದ್ದು, ಸಸಿಗಳನ್ನು ರೈತರಿಗೆ ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ಕೊಡಲಾಗುತ್ತಿದೆ ಎಂದು ಅರಣ್ಯಾಧಿಕಾರಿ ಸಿದ್ದರಾಮ ವಿಭೂತಿ ಹೇಳಿದರು.

ಸ್ವಪ್ನ ಸುಂದರಿ ಸಾಗಿಸಿದ್ದು 30 ಅಲ್ಲ, 180 ಕೆಜಿ ಚಿನ್ನವಂತೆ!

ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು

ಅಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಫಲಿತಾಂಶ

ಅಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ. ಸೋಮವಾರ ಬೆಂಗಳೂರಿನ ವಿವಿಧ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಻ವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯಾದ್ಯಂತ 220 ಕೇಂದ್ರಗಳಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದ್ದು, ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ ಎಂದರು.