ಗದಗ: ಬಿಂಕದಕಟ್ಟಿ ಮೃಗಾಲಯಕ್ಕೆ ಗುರುವಾರ ತಡರಾತ್ರಿ 11 ವರ್ಷದ ಧರ್ಮ ಮತ್ತು ಅರ್ಜುನ ಹೆಸರಿನ ಗಂಡು ಸಿಂಹಗಳು ಗುರುವಾರ ತಡರಾತ್ರಿ ಆಗಮಿಸಿವೆ.

ಕೇಂದ್ರ ಮೃಗಾಲಯ ಪ್ರಾಧಿಕಾರವು ಬಿಂಕದಕಟ್ಟಿ ಕಿರು ಮೃಗಾಲಯಕ್ಕೆ ಜೋಡಿ ಸಿಂಹಗಳ ಹಸ್ತಾಂತರಕ್ಕೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ ಎರಡು ಗಂಡು ಸಿಂಹಗಳು ಆಗಮಿಸಿವೆ.

ಸಿಂಹಗಳು ಸ್ವಚ್ಛಂದವಾಗಿ ವಿಹರಿಸಲು ಅನುಕೂಲಕರವಾದ ವಾತಾವರಣ ನಿರ್ಮಿಸಲಾಗಿದೆ. ಇದಕ್ಕಾಗಿ 1 ಸಾವಿರ ಚ.ಮೀ. ಸ್ಥಳ ಮೀಸಲಿಡಲಾಗಿದ್ದು, ಸಿಂಹಗಳಿಗಾಗಿ ಪ್ರಾಣಿ ಸಂಗ್ರಹಾಲಯದಲ್ಲಿ ನೈಸರ್ಗಿಕ ಆವಾಸ ಸ್ಥಾನದ ಮಾದರಿಯಲ್ಲೇ ವಿಶೇಷ ಪಂಜರ ಸಿದ್ದಪಡಿಸಲಾಗಿದೆ. ಕಲ್ಲಿನ ಬಂಡೆಗಳು, ನೀರಿನ ಹೊಂಡ, ಗಿಡ-ಮರಗಳಿರುವಂತೆ ಸಿದ್ಧಪಡಿಸಲಾಗಿದೆ.

ಬಿಂಕದಕಟ್ಟಿ ಸಂಗ್ರಹಾಲಯದಲ್ಲಿ ಕತ್ತೆ ಕಿರುಬ ವೀಕ್ಷಿಸಲು ಗಾಜಿನ ಪರದೆಯ ವ್ಯವಸ್ಥೆ ಮಾಡಿದ್ದು, ಅದರಂತೆ ಸಿಂಹಗಳನ್ನು ವೀಕ್ಷಿಸಲು 39 ಎಂಎಂ ಗಾಜಿನ ಪರದೆ ವ್ಯವಸ್ಥೆ ಮಾಡಲಾಗಿದೆ. ಈ ಗಾಜುಗಳನ್ನು ಚಂಡಿಗಢದಿಂದ ತರಿಸಿಕೊಳ್ಳಲಾಗುತ್ತಿದೆ. ಉತ್ತರ ಕರ್ನಾಟಕದಲ್ಲೇ ಬಿಂಕದಕಟ್ಟಿ ಮೃಗಾಲಯವು ಎರಡು ವರ್ಷಗಳ ಹಿಂದಷ್ಟೇ ಜೋಡಿ ಹುಲಿಗಳನ್ನು ಹೊಂದಿರುವ ಖ್ಯಾತಿ ಪಡೆದಿತ್ತು. ಇದೀಗ ಜೋಡಿ ಸಿಂಹಗಳು ಆಗಮಿಸುವ ಮೂಲಕ ಮೃಗಾಲಯದ ಮೆರಗನ್ನು ಇನ್ನಷ್ಟು ಹೆಚ್ಚಿಸಿವೆ.

ಧರ್ಮಾರ್ಜುನ ಸಿಂಹಗಳೆರಡು ಬಯಲು ಸೀಮೆಯ ಪರಿಸರಕ್ಕೆ ಹೊಂದಿಕೊಳ್ಳುವವರೆಗೆ ಸದ್ಯ ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿಲ್ಲ. ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿ ಅನ್ವಯ ಸಿಂಹಗಳನ್ನು 15-30 ದಿನಗಳವರೆಗೆ ನಿಗಾದಲ್ಲಿಟ್ಟು, ಇಲ್ಲಿನ ಪರಿಸರಕ್ಕೆ ಹೊಂದಿಕೊಂಡ ಬಳಿಕ ಪ್ರವಾಸಿಗರ ವೀಕ್ಷಣೆಗೆ ಅವಕಾಸ ಕಲ್ಪಿಸಲಾಗುವುದು.

Leave a Reply

Your email address will not be published. Required fields are marked *

You May Also Like

ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾಗೆ ಬಿಗ್ ರಿಲೀಫ್

ಮೆಸ​ರ್ಸ್ ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಹೆಸರು ಕೈಬಿಟ್ಟು ನಗರದ ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ.

ಹಲವು ಜಿಲ್ಲೆಗಳಲ್ಲಿ ಸಾರಿಗೆ ಇಲಾಖೆ ಕಚೇರಿ ಆರಂಭ!

ಗೃಹ ಸಚಿವಾಲಯದಿಂದ ಲಾಕ್‌ಡೌನ್ ಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳು ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹಸಿರು ವಲಯಕ್ಕೊಳಪಡುವ 14 ಜಿಲ್ಲೆಗಳಲ್ಲಿ ಸಾರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ.

ತುರ್ತು ವಾಹನ ಸೇವೆ ಒದಗಿಸಿ ಜನರಿಂದ ಸೈ ಎನಿಸಿಕೊಂಡ ಗ್ರಾಪಂ ಸದಸ್ಯ ಜಹೀರ್

ಮುಂಡರಗಿ: ಕೊರೊನಾದ ಈ ಸಂಕಷ್ಟದಲ್ಲಿ ಜನಸಾಮಾನ್ಯರ ಬದುಕು ತೀರಾ ಸಂಕಷ್ಟಕ್ಕೀಡಾಗಿದೆ. ಇಂತಹ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸುವ ಮೂಲಕ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಸೇವಾ ಕಾರ್ಯಕ್ಕೆ ಅಣಿಯಾಗಿದ್ದಾರೆ. ಹೌದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿ ಸದಸ್ಯ ಜಹೀರುದ್ದೀನ್ ಮುಲ್ಲಾ, ಗ್ರಾಮದಲ್ಲಿ ಉಚಿತ ತುರ್ತು ಸೇವಾ ವಾಹನದ ವ್ಯವಸ್ಥೆಯನ್ನು ಮಾಡಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆ

ಇಂದು ಮತ್ತೆ ರಾಜ್ಯದಲ್ಲಿ ಐದು ಹೊಸ ಕೊರೋನಾ ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ 606ಕ್ಕೆ ಏರಿಕೆ ಆಗಿದೆ.